AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elevator – Yerili Theru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಎಲಿವೇಟರ್​ಗೆ ಕನ್ನಡದಲ್ಲಿ ‘ಏರಿಳಿತೇರು’ ಎಂದು ಬಳಸಿದ್ದಕ್ಕೆ ಆಕ್ರೋಶ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಎಲಿವೇಟರ್​ ಬದಲಿಗೆ ಏರಳಿತೇರು ಎಂದು ಬಳಸಿದ್ದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Elevator - Yerili Theru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಎಲಿವೇಟರ್​ಗೆ ಕನ್ನಡದಲ್ಲಿ 'ಏರಿಳಿತೇರು' ಎಂದು ಬಳಸಿದ್ದಕ್ಕೆ ಆಕ್ರೋಶ
Elevator
TV9 Web
| Edited By: |

Updated on: Dec 29, 2022 | 4:00 PM

Share

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಎಲಿವೇಟರ್​ ಬದಲಿಗೆ ಏರಳಿತೇರು ಎಂದು ಬಳಸಿದ್ದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಹಲವರು ಈ ಶಬ್ದವನ್ನು ಸ್ವಾಗತಿಸಿದ್ದಾರೆ. ಆದರೆ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಕೆಲವು ದಿನಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದ ನಿರ್ವಾಹಕರನ್ನು ಎಲಿವೇಟರ್ ಪದಕ್ಕೆ ಕನ್ನಡದಲ್ಲಿ ಸರಿಯಾದ ಪದ ಬಳಸಬೇಕು ಎಂದು ಒತ್ತಾಯಿಸಿದ್ದು, ಏರಿಳಿ ತೇರು ಶಬ್ದ ಪ್ರಯೋಗ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.

ಶ್ರೀನಿವಾಸರಾಜು  ಡಿಸೆಂಬರ್ 14 ರಂದು ಟ್ವೀಟ್​ ಮಾಡಿದ್ದು, ಅದರಲ್ಲಿ ಎಲಿವೇಟರ್​ ಅನ್ನು ಕನ್ನಡಕ್ಕೆ ಏರಿಳಿ ತೇರು ಎಂದು ಅನುವಾದಿಸಲಾಗಿದೆ, ಆದರೆ ರಥವು ಮುಂದೆ ಸಾಗುತ್ತದೇ ವಿನಃ ರಥ ಏರಿಳಿಯುವುದಿಲ್ಲ ಎಂದು ಹೇಳಿದ್ದಾರೆ. ಈ ಶಬ್ಧಪ್ರಯೋಗ ತಪ್ಪಿದೆ, ಹೀಗೆ ಬರೆಯುವುದಕ್ಕಿಂತ ಕನ್ನಡದಲ್ಲಿ ಲಿಫ್ಟ್ ಎಂದು ಸರಳವಾಗಿ ಬರೆಯಬಹುದಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಇಂಟರ್​ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮಂಗಳವಾರ ಅಂದರೆ ಮೊನ್ನೆ ಡಿಸೆಂಬರ್ 27ರಂದು ಏರಿಳಿ ತೇರು ಎಂಬುದನ್ನು ತೆಗೆದು ಆ ಜಾಗದಲ್ಲಿ ಎಲಿವೇಟರ್ ಎಂದು ಬದಲಾವಣೆ ಮಾಡಿದೆ. ಇದನ್ನು ಗಮನಕ್ಕೆ ತಂದಿದ್ದಕ್ಕೆ ಧನ್ಯವಾದಗಳು, ನಮ್ಮ ಕಾರ್ಯಾಚರಣೆ ತಂಡವು ಪರಿಶೀಲಿಸಿ ಸರಿಪಡಿಸುವ ಬದಲಾವಣೆಗಳನ್ನು ಮಾಡಿದೆ ಎಂದು ಟ್ವೀಟ್ ಮಾಡಿದೆ. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಶ್ರೀನಿವಾಸರಾಜು ಧನ್ಯವಾದ ತಿಳಿಸಿದ್ದಾರೆ.

ಆದರೆ ಇಂಗ್ಲಿಷ್ ಶಬ್ದವನ್ನು ಯಥಾವತ್ತಾಗಿ ಕನ್ನಡಕ್ಕೆ ಬದಲಾಯಿಸಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಕನ್ನಡ ಭಾಷೆಗೆ ಮಾಡಿರುವ ಅವಮಾನ ಎಂದು ದೂರಿದ್ದಾರೆ.

ವಿಮಾನ ನಿಲ್ದಾಣಕ್ಕೆ ಕೇವಲ ಕನ್ನಡಿಗರು ಮಾತ್ರವಲ್ಲದೆ ಬೇರೆ ಭಾಗಗಳಿಂದಲೂ ಜನರು ಬರುತ್ತಾರೆ, ಕೆಲವು ಶಬ್ದಗಳಿಗೆ ಸರಿಯಾದ ಕನ್ನಡ ಶಬ್ದವಿರುವುದಿಲ್ಲ ಎಂದು ಸುಗತ ಅವರು ಹೇಳಿದ್ದಾರೆ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್