AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elevator – Yerili Theru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಎಲಿವೇಟರ್​ಗೆ ಕನ್ನಡದಲ್ಲಿ ‘ಏರಿಳಿತೇರು’ ಎಂದು ಬಳಸಿದ್ದಕ್ಕೆ ಆಕ್ರೋಶ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಎಲಿವೇಟರ್​ ಬದಲಿಗೆ ಏರಳಿತೇರು ಎಂದು ಬಳಸಿದ್ದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Elevator - Yerili Theru: ಬೆಂಗಳೂರು ಏರ್​ಪೋರ್ಟ್​ನಲ್ಲಿ ಎಲಿವೇಟರ್​ಗೆ ಕನ್ನಡದಲ್ಲಿ 'ಏರಿಳಿತೇರು' ಎಂದು ಬಳಸಿದ್ದಕ್ಕೆ ಆಕ್ರೋಶ
Elevator
TV9 Web
| Updated By: ನಯನಾ ರಾಜೀವ್|

Updated on: Dec 29, 2022 | 4:00 PM

Share

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಎಲಿವೇಟರ್​ ಬದಲಿಗೆ ಏರಳಿತೇರು ಎಂದು ಬಳಸಿದ್ದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಹಲವರು ಈ ಶಬ್ದವನ್ನು ಸ್ವಾಗತಿಸಿದ್ದಾರೆ. ಆದರೆ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಕೆಲವು ದಿನಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದ ನಿರ್ವಾಹಕರನ್ನು ಎಲಿವೇಟರ್ ಪದಕ್ಕೆ ಕನ್ನಡದಲ್ಲಿ ಸರಿಯಾದ ಪದ ಬಳಸಬೇಕು ಎಂದು ಒತ್ತಾಯಿಸಿದ್ದು, ಏರಿಳಿ ತೇರು ಶಬ್ದ ಪ್ರಯೋಗ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.

ಶ್ರೀನಿವಾಸರಾಜು  ಡಿಸೆಂಬರ್ 14 ರಂದು ಟ್ವೀಟ್​ ಮಾಡಿದ್ದು, ಅದರಲ್ಲಿ ಎಲಿವೇಟರ್​ ಅನ್ನು ಕನ್ನಡಕ್ಕೆ ಏರಿಳಿ ತೇರು ಎಂದು ಅನುವಾದಿಸಲಾಗಿದೆ, ಆದರೆ ರಥವು ಮುಂದೆ ಸಾಗುತ್ತದೇ ವಿನಃ ರಥ ಏರಿಳಿಯುವುದಿಲ್ಲ ಎಂದು ಹೇಳಿದ್ದಾರೆ. ಈ ಶಬ್ಧಪ್ರಯೋಗ ತಪ್ಪಿದೆ, ಹೀಗೆ ಬರೆಯುವುದಕ್ಕಿಂತ ಕನ್ನಡದಲ್ಲಿ ಲಿಫ್ಟ್ ಎಂದು ಸರಳವಾಗಿ ಬರೆಯಬಹುದಲ್ಲ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಇಂಟರ್​ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮಂಗಳವಾರ ಅಂದರೆ ಮೊನ್ನೆ ಡಿಸೆಂಬರ್ 27ರಂದು ಏರಿಳಿ ತೇರು ಎಂಬುದನ್ನು ತೆಗೆದು ಆ ಜಾಗದಲ್ಲಿ ಎಲಿವೇಟರ್ ಎಂದು ಬದಲಾವಣೆ ಮಾಡಿದೆ. ಇದನ್ನು ಗಮನಕ್ಕೆ ತಂದಿದ್ದಕ್ಕೆ ಧನ್ಯವಾದಗಳು, ನಮ್ಮ ಕಾರ್ಯಾಚರಣೆ ತಂಡವು ಪರಿಶೀಲಿಸಿ ಸರಿಪಡಿಸುವ ಬದಲಾವಣೆಗಳನ್ನು ಮಾಡಿದೆ ಎಂದು ಟ್ವೀಟ್ ಮಾಡಿದೆ. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಶ್ರೀನಿವಾಸರಾಜು ಧನ್ಯವಾದ ತಿಳಿಸಿದ್ದಾರೆ.

ಆದರೆ ಇಂಗ್ಲಿಷ್ ಶಬ್ದವನ್ನು ಯಥಾವತ್ತಾಗಿ ಕನ್ನಡಕ್ಕೆ ಬದಲಾಯಿಸಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಕನ್ನಡ ಭಾಷೆಗೆ ಮಾಡಿರುವ ಅವಮಾನ ಎಂದು ದೂರಿದ್ದಾರೆ.

ವಿಮಾನ ನಿಲ್ದಾಣಕ್ಕೆ ಕೇವಲ ಕನ್ನಡಿಗರು ಮಾತ್ರವಲ್ಲದೆ ಬೇರೆ ಭಾಗಗಳಿಂದಲೂ ಜನರು ಬರುತ್ತಾರೆ, ಕೆಲವು ಶಬ್ದಗಳಿಗೆ ಸರಿಯಾದ ಕನ್ನಡ ಶಬ್ದವಿರುವುದಿಲ್ಲ ಎಂದು ಸುಗತ ಅವರು ಹೇಳಿದ್ದಾರೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!