AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್‌ ತಹಶೀಲ್ದಾರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ; ತಹಶೀಲ್ದಾರ್​ಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್​

ಆರ್​ಟಿಸಿಯಲ್ಲಿ ಜಮೀನು ಖರೀದಿಸಿದವರ ಹೆಸರು ನಮೂದಿಸದ ಹಿನ್ನೆಲೆಯಲ್ಲಿ ಕೆಜಿಎಫ್‌ ತಹಶೀಲ್ದಾರ್  ಸುಜಾತಾರಾಮ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು.

ಕೆಜಿಎಫ್‌ ತಹಶೀಲ್ದಾರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ; ತಹಶೀಲ್ದಾರ್​ಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್​
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Jun 10, 2022 | 2:56 PM

Share

ಬೆಂಗಳೂರು: ಆರ್​ಟಿಸಿಯಲ್ಲಿ (RTC) ಜಮೀನು ಖರೀದಿಸಿದವರ ಹೆಸರು ನಮೂದಿಸದ ಹಿನ್ನೆಲೆಯಲ್ಲಿ ಕೆಜಿಎಫ್‌ (KGF) ತಹಶೀಲ್ದಾರ್  ಸುಜಾತಾರಾಮ್ (Sujataram) ​ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್  ತಹಶೀಲ್ದಾರ್  ಸುಜಾತಾರಾಮ್​​ರನ್ನು ತರಾಟೆಗೆ ತೆಗೆದುಕೊಂಡಿದೆ. ಕೋರ್ಟ್ ಆದೇಶ ಪಾಲಿಸದಿದ್ದರೆ ಜೈಲಿಗೆ ಹೋಗಲು ಸಿದ್ಧರಾಗಿ. ಜೈಲಿನಲ್ಲಿ ಅವರಿಗೆ ಕೋರ್ಟ್ ಘನತೆಯ ಅರಿವಾಗಲಿ. ಪೊಲೀಸರನ್ನು ಕರೆಸಿ ಈಗಲೇ ಜೈಲಿಗೆ ಕಳುಹಿಸುತ್ತೇವೆ ಎಂದು ಖಡಕ ಸೂಚನೆ ನೀಡಿದೆ.

ಇದನ್ನು ಓದಿ: ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ

ನ್ಯಾಯಾಲಯ ಸೂಚನೆ ನೀಡಿದ ಬೆನ್ನಲೆ  ಹೈಕೋರ್ಟ್​ಗೆ ತಹಶೀಲ್ದಾರ್  ಸುಜಾತಾರಾಮ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ತಹಸೀಲ್ದಾರ್ ಸುಜಾತಾರಾಮ್​ ಒಂದು ಅವಕಾಶ ನೀಡಲು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಆಗ ಹೈಕೋಟರ್​​ 24 ಗಂಟೆಗಳಲ್ಲಿ ಕಂದಾಯ ದಾಖಲೆ ಸರಿಪಡಿಸಲು ಸೂಚನೆ ನೀಡಿದೆ.  ಜೂ.13ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಪ್ರಕರಣದ ಹಿನ್ನಲೆ

ಮುಳಬಾಗಿಲಿನ ಅಂಗೊಂಡಹಳ್ಳಿ ಗ್ರಾಮದ ಸೊಣ್ಣೇಗೌಡ ಮತ್ತು ಕುಟುಂಬಸ್ಥರು ಕೆಜಿಎಫ್ ನಲ್ಲಿ 1975ರಲ್ಲೇ ಜಮೀನು ಖರೀದಿಸಿದ್ದರು. ಜಮೀನು ಖರೀದಿಸಿದ್ದರೂ ಪಹಣಿ ಸೇರಿ ಕಂದಾಯ ದಾಖಲೆಗಳಲ್ಲಿ ಇವರ ಹೆಸರು ನಮೂದು ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಸೊಣ್ಣೇಗೌಡ ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಹೈಕೋರ್ಟ್​ಗೆ ತಹಸಿಲ್ದಾರ ಸುಜಾತಾರಾಮ್​  ಅವರಿಗೆ ಕಂದಾಯ ದಾಖಲೆಗಳನ್ನು ಸರಿ ಪಡಿಸುವಂತೆ ಸೂಚನೆ ನೀಡಿತ್ತು. ಹೈಕೋರ್ಟ್​ ಸೂಚನೆ ಮೇರೆಗು ಕೂಡ ಕಂದಾಯ ದಾಖಲೆಗಳನ್ನು  ತಹಸಿಲ್ದಾರ್ ಸರಿಪಡಿಸಿರಲಿಲ್ಲ. ಈ ಸಂಬಂಧ ಸೊಣ್ಣೇಗೌಡ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿದ್ದರು. ನ್ಯಾಯಾಲಯ ಸರ್ಜಿ ವಿಚಾರಣೆ ನಡೆಸಿ ತರಾಟೆಗೆ ತೆಗೆದುಕೊಂಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:42 pm, Fri, 10 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್