AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪೊಲೀಸರು ಮೂವರು ಆರೋಪಿಗಳನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ನಾಳೆ ಮತ್ತೆ ಆರೋಪಿಗಳನ್ನ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಸುಟ್ಟು ಕರಕಲಾದ ಶಾಸಕ ಸತೀಶ್ ರೆಡ್ಡಿ ಕಾರುಗಳು
TV9 Web
| Edited By: |

Updated on:Aug 15, 2021 | 1:53 PM

Share

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ (Sathish Reddy) ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನ (Judicial custody) ವಿಧಿಸಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಾಗರ್ ತಾಪ, ನವೀನ್ ಮತ್ತು ಶ್ರೀಧರ್ಗೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ. ನಿನ್ನೆ ಪೊಲೀಸರು ಆರೋಪಿಗಳನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಬಳಿಕ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಶಿಕ್ಷೆ ನೀಡಲಾಗಿದೆ.

ಪೊಲೀಸರು ಮೂವರು ಆರೋಪಿಗಳನ್ನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ನಾಳೆ ಮತ್ತೆ ಆರೋಪಿಗಳನ್ನ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.

ಕಣ್ಣೀರು ಹಾಕಿದ ಆರೋಪಿಗಳು ಪೊಲೀಸರು ವಿಚಾರಣೆ ನಡೆಸುವ ವೇಳೆ ಆರೋಪಿಗಳು ಕಣ್ಣೀರು ಹಾಕಿದರು. ಬಡತನ ನೆನೆದು ಕಣ್ಣೀರಿಟ್ಟ ಮೂವರು ಆರೋಪಿಗಳನ್ನ ಕಂಡ ಪೊಲೀಸರು ಗಪ್ ಚುಪ್ ಆಗಿದ್ದರು. ಬಡವರನ್ನ ನೋಡಿದ್ರೆ ಕರುಳು ಕಿತ್ತು ಬರುತ್ತೆ ಸರ್. ದೇವಸ್ಥಾನದ ಬಳಿ ಕುಳಿತಿರೋರನ್ನ ನೋಡಿದ್ರೆ ಅಯ್ಯೋ ಅನ್ನಿಸುತ್ತೆ ಅಂತ ಸೆಂಟಿಮೆಂಟ್ ಹಾಗೂ ಹೃದಯಸ್ಪರ್ಶಿ ಮಾತುಗಳಿಂದ ಪೊಲೀಸರಿಗೆ ಕೆಲ ನಿಮಿಷ ಮಾತು ಹೊರಗೆ ಬರಲಿಲ್ಲ.

ಕೆಲ ಮಾಹಿತಿ ನೀಡಿದ ಕಮಲ್ ಪಂತ್ ಶಾಸಕರ ಮನೆ ಆವರಣದಲ್ಲಿದ್ದ 2 ಕಾರುಗಳಿಗೆ ಬೆಂಕಿ ಹಚ್ಚಿದ್ದರು. ಘಟನೆ ಬಗ್ಗೆ ಮಾಹಿತಿ ಬಂದ ಕೂಡಲೇ ಪೊಲೀಸರು ತೆರಳಿದ್ದರು. ಸ್ಥಳ ಪರಿಶೀಲನೆ ಬಳಿಕ ಬೊಮ್ಮನಹಳ್ಳಿ ಠಾಣೆಯಲ್ಲಿ ಮೊಕದ್ದಮೆ ದಾಕಲಾಗಿತ್ತು. ಪ್ರಕರಣ ಸಂಬಂಧ 5 ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಸಿಸಿಟಿವಿ ದೃಶ್ಯ ಮಾತ್ರ ಸಿಕ್ಕಿತ್ತು, ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂದು ಸಂಜೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆಗ್ನೇಯ ಡಿಸಿಪಿ ಜೋಶಿ ನೇತೃತ್ವದಲ್ಲಿ ಆರೋಪಿಗಳ ಬಂಧಿಸಲಾಗಿದೆ. ಅರೋಪಿಗಳ ಪೈಕಿ ಸತೀಶ್ ರೆಡ್ಡಿ ಮನೆ ಕಾಂಪೌಂಡ್ ಒಳಗೆ ಬಂದು ಬೆಂಕಿ ಇಟ್ಟವನು ಒಬ್ಬ ಮಾತ್ರ, ಆತನೇ ಸಾಗರ್. ಉಳಿದ ಇಬ್ಬರು ಗೇಟ್ ಹೊರಗೆ ಇದ್ದಾರೆ. ಸಾಗರ್ ಎಂಬ ಬಂಧಿತ ಆರೋಪಿ ಮೂಲತಃ ನೇಪಾಳದವ, ಹುಟ್ಟಿಬೆಳೆದಿರೋದು ಬೆಂಗಳೂರಿನಲ್ಲಿ ಕಮಲ್ ಪಂತ್ ತಿಳಿಸಿದರು.

ಇದನ್ನೂ ಓದಿ

Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

ದೊಡ್ಡದೊಡ್ಡ ಕಾರುಗಳಲ್ಲಿ ಓಡಾಡುತ್ತಿರುವವರಿಗೆ ಬುದ್ಧಿ ಕಲಿಸಬೇಕೆಂದು ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿಯಿಟ್ಟರು? 3 ಆರೋಪಿಗಳ ಬಂಧನ

(Judicial custody of accused of setting fire to MLA Sathish Reddy cars)

Published On - 1:43 pm, Sun, 15 August 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?