ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ

ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್​ರನ್ನು (BS Patil new Lokayukta of Karnataka) ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇಮಕ
ಬಿ.ಎಸ್. ಪಾಟೀಲ್
Follow us
| Updated By: ಆಯೇಷಾ ಬಾನು

Updated on:Jun 14, 2022 | 7:30 PM

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್​ರನ್ನು (BS Patil new Lokayukta of Karnataka) ಸರ್ಕಾರ ನೇಮಕ ಮಾಡಿದೆ. ರಾಜ್ಯ ಸರ್ಕಾರದ ಶಿಫಾರಸಿಗೆ ರಾಜ್ಯಪಾಲ ಗೆಹ್ಲೋಟ್‌ ಅಂಕಿತ ಹಾಕಿದ್ದು ಪ್ರಸ್ತುತ ಉಪ ಲೋಕಾಯುಕ್ತರಾಗಿರುವ ಬಿ.ಎಸ್.ಪಾಟೀಲ್ ನೂತನ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ರಾಜಭವನದಲ್ಲಿ ನಾಳೆ ಬೆಳಗ್ಗೆ 9.45ಕ್ಕೆ ಪದಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಲೋಕಾಯುಕ್ತ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶ್ವನಾಥ್ ಶೆಟ್ಟಿಯವರಿಂದ ತೆರವಾದ ಸ್ಥಾನಕ್ಕೆ ಬಿ.ಎಸ್.ಪಾಟೀಲ್ ನೇಮಕಗೊಂಡಿದ್ದು 8ನೇ ಲೋಕಾಯುಕ್ತ ನ್ಯಾಯಮೂರ್ತಿಗಳಾಗಿದ್ದಾರೆ. ಕಳೆದ ಐದು ತಿಂಗಳಿನಿಂದ ಲೋಕಾಯುಕ್ತ ಹುದ್ದೆ ಖಾಲಿ ಇರುವುದರಿಂದ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಲೋಕಾಯುಕ್ತರ ನೇಮಕವು ‘ಸಕ್ರಿಯ ಪರಿಗಣನೆ’ಯಲ್ಲಿದೆ ಎಂದು ಹೈಕೋರ್ಟ್‌ ಸೂಚಿಸಿದ್ದರಿಂದ ಅದನ್ನು ವಜಾಗೊಳಿಸಲಾಯಿತು.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನ್ಯಾಯಮೂರ್ತಿ ಪಾಟೀಲ್ ಅವರು ಜೂನ್ 1, 1956 ರಂದು ವಿಜಯಪುರ ಜಿಲ್ಲೆಯ ಪಡೇಕಣ್ಣೂರು ಗ್ರಾಮದಲ್ಲಿ ಜನಿಸಿದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ ಪದವಿಯನ್ನು ಪಡೆದರು. 1980 ರಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.  2004 ರಲ್ಲಿ, ನ್ಯಾಯಮೂರ್ತಿ ಪಾಟೀಲ್ ಅವರು ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು. 13 ವರ್ಷಗಳ ಕಾಲ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. 2018 ರಲ್ಲಿ ಎಚ್‌ಸಿ ನ್ಯಾಯಾಧೀಶರಾಗಿ ನಿವೃತ್ತರಾದರು. ಅವರನ್ನು ನವೆಂಬರ್ 2019 ರಲ್ಲಿ ಉಪಲೋಕಾಯುಕ್ತರಾಗಿ ನೇಮಿಸಲಾಯಿತು.

ಏಪ್ರಿಲ್‌ನಲ್ಲಿ, ಕರ್ನಾಟಕ ಸರ್ಕಾರವು ಲೋಕಾಯುಕ್ತಕ್ಕೆ ಲಗತ್ತಿಸಲಾದ ಎಲ್ಲಾ ಮಂಜೂರಾದ ಎಸ್‌ಪಿ ಮತ್ತು ಡಿವೈಎಸ್‌ಪಿ ಹುದ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಿಗೆ (ಡಿಜಿ ಮತ್ತು ಐಜಿಪಿ) ನಿರ್ದೇಶನ ನೀಡಿತು. ಏಪ್ರಿಲ್ 11, 2022 ರಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಲೋಕಾಯುಕ್ತಕ್ಕೆ ಹಂಚಿಕೆಯಾಗಿದ್ದ 22 ಎಸ್‌ಪಿ ಮತ್ತು 42 ಡಿವೈಎಸ್‌ಪಿ ಹುದ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಡಿಜಿ ಮತ್ತು ಐಜಿಪಿಗೆ ನಿರ್ದೇಶನ ನೀಡಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:10 pm, Tue, 14 June 22

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ