AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ, ಹೊಸ ಮುಖ್ಯನ್ಯಾಯಮೂರ್ತಿ ಯಾರು ಗೊತ್ತಾ?

Justice NV Anjaria: ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆ) ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದಾರೆ.

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ, ಹೊಸ ಮುಖ್ಯನ್ಯಾಯಮೂರ್ತಿ ಯಾರು ಗೊತ್ತಾ?
ನಿಲಯ್ ವಿಪಿನ್​ಚಂದ್ರ ಅಂಜಾರಿಯಾ
TV9 Web
| Edited By: |

Updated on: Feb 16, 2024 | 5:22 PM

Share

ಬೆಂಗಳೂರು, (ಫೆಬ್ರವರಿ 16): ಕರ್ನಾಟಕ ಹೈಕೋರ್ಟ್​ಗೆ (Karnataka High Court )ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ (NV Anjaria) ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ‌ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇತ್ತೀಚೆಗಗಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿಯವರು ಆದೇಶ ಹೊರಡಿಸಿದ್ದು. ವರಾಳೆ ಅವರ ಹುದ್ದೆಗೆ ಪಿ.ಎಸ್.ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಫೆಬ್ರವರಿ 24ರಂದು ದಿನೇಶ್ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ.

ಇನ್ನು ಕರ್ನಾಟಕ ಹೈಕೋರ್ಟ್​ನ ನೂತನ ಸಿಜೆ ಅಂಜಾರಿಯಾ ಅವರು 2011ರಿಂದ ಗುಜರಾತ್​ ಹೈಕೋರ್ಟ್​​ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್​ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್​ ಹೈಕೋರ್ಟ್​​ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್​​ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್