AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮಾರ್ಚ್​​ 10ರಿಂದ ಕೆಆರ್​ ಪುರಂ-ವೈಟ್​ಪಿಲ್ಡ್​​ ಮೆಟ್ರೋ ಸಂಚಾರಕ್ಕೆ ಯೋಗ್ಯ: ಪ್ರಧಾನಿ ಮೋದಿ ಉದ್ಘಾಟನೆ ಸಾಧ್ಯತೆ

ಕೆ.ಆರ್​ ಪುರಂ-ವೈಟ್​ಪಿಲ್ಡ್ ಮಾರ್ಗದ ಮೆಟ್ರೋ ಕಾಮಗಾರಿ ಮಾರ್ಚ್​ 10 ರ ಒಳಗಾಗಿ ಸಂಪೂರ್ಣ ಮುಗಿಯಲಿದ್ದು, ಅಂದಿನಿಂದ ಕಾರ್ಯಾರಂಭ ಮಾಡಲು ಯೋಗ್ಯವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ರಾಜ್ಯ ಸರ್ಕಾರಕ್ಕೆ ಹೇಳಿದೆ.

Namma Metro: ಮಾರ್ಚ್​​ 10ರಿಂದ ಕೆಆರ್​ ಪುರಂ-ವೈಟ್​ಪಿಲ್ಡ್​​ ಮೆಟ್ರೋ ಸಂಚಾರಕ್ಕೆ ಯೋಗ್ಯ: ಪ್ರಧಾನಿ ಮೋದಿ ಉದ್ಘಾಟನೆ ಸಾಧ್ಯತೆ
ನಮ್ಮ ಮೆಟ್ರೋ
Follow us
ವಿವೇಕ ಬಿರಾದಾರ
|

Updated on: Mar 06, 2023 | 10:20 AM

ಬೆಂಗಳೂರು: ಸಿಲಿಕಾನ್​ ಸಿಟಿ ಜನರ ಬಹು ನಿರೀಕ್ಷಿತ ಕೆ.ಆರ್​ ಪುರಂ-ವೈಟ್​ಪಿಲ್ಡ್ ಮಾರ್ಗದ​​ ಮೆಟ್ರೋ (K.R. Puram-Whitefield Metro) ಸಂಚಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮಾರ್ಗದ ಮೆಟ್ರೋ ಕಾಮಗಾರಿ ಮಾರ್ಚ್​ 10 ರ ಒಳಗಾಗಿ ಸಂಪೂರ್ಣ ಮುಗಿಯಲಿದ್ದು, ಅಂದಿನಿಂದ ಕಾರ್ಯಾರಂಭ ಮಾಡಲು ಯೋಗ್ಯವಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರಾಜ್ಯ ಸರ್ಕಾರಕ್ಕೆ (Karanataka Government) ಹೇಳಿದೆ. ಹಾಗೇ ಇದರ ಉದ್ಘಾಟನಾ ದಿನಾಂಕವನ್ನು ನೀವೆ ನಿಗದಿಪಡಿಸಿ ಎಂದಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇದೇ ತಿಂಗಳು ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ವೇ (Bengaluru-Mysore Express way) ಉದ್ಘಾಟನೆ ಸಂಬಂಧ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಈ ಎಕ್ಸಪ್ರೆಸ್​ ವೇ ಉದ್ಘಾಟನೆ ದಿನದಂದೇ, ಕೆಆರ್​ ಪುರಂ-ವೈಟ್​ಪಿಲ್ಡ್​​ ಮೆಟ್ರೋ ಅನ್ನು ಕೂಡ ಪ್ರಧಾನಿ ಮೋದಿಯವರು ಉದ್ಘಾಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ 13.75 ಕಿಮೀ ಮಾರ್ಗದ ಸುರಕ್ಷತಾ ತಪಾಸಣೆ ನಡೆಸಿರುವ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (CMRS) ರೈಲ್ವೆ ಸಂಚಾರಕ್ಕೆ ಫೆ. 28ರಂದು ಒಪ್ಪಿಗೆ ನೀಡಿದ್ದಾರೆ. 25 ಪ್ರಮುಖ ಅಂಶಗಳ ಮೂಲಕ 60 ಸಲಹೆ, ಸೂಚನೆ ನೀಡಿದ್ದು, ಸೇವೆ ಆರಂಭಿಸುವುದಕ್ಕೂ ಮುನ್ನ ಅವುಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಅದರಂತೆ 12 ನಿಲ್ದಾಣಗಳು ಹಾಗೂ ಮೆಟ್ರೋ ಮಾರ್ಗದಲ್ಲಿ ಅಂತಿಮ ಹಂತದ ಕಾಮಗಾರಿಯನ್ನು ಬಿಎಂಆರ್‌ಸಿಎಲ್‌ ಕೈಗೊಂಡಿದೆ.

ಅಂತಿಮ ಹಂತದ ಕಾಮಾಗಾರಿಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಕಾರ್ಮಿಕರು ಕೆಲಸ ಮಾಡುತ್ತಿದ್ದು. ಇವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಹಾಗೇ ಎಲ್ಲ ಕಾರ್ಯಗಳು ಪೂರ್ಣಗೊಂಡ ನಂತರ ಸಂಪೂರ್ಣ ವರದಿಯನ್ನು CMRSಗೆ ಸಲ್ಲಿಸಲಾಗುತ್ತಿದೆ. ಮಾರ್ಚ್ 10ರೊಳಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಬಿಎಂಆರ್​ಸಿಎಲ್​​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 12 ಮೆಟ್ರೋ ನಿಲ್ದಾಣಗಳಿವೆ

ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ ಪಾಳ್ಯ, ಮಹದೇವಪುರ, ಮತ್ತು ಕೆ.ಆರ್. ಪುರಂ. ಈ ಮಾರ್ಗದಿಂದ ತೆರೆಯುವುದರಿಂದ ಪ್ರತಿದಿನ 2.5 ರಿಂದ 3 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಮೆಟ್ರೋ ನಿಲ್ದಾಣಗಳ ಒಳಾಂಗಣ ವಿನ್ಯಾಸ

ಮೆಟ್ರೋ ನಿಲ್ದಾಣ ಸುಂದರವಾಗಿ ಕಾಣವ ದೃಷ್ಠಿಯಿಂದ ಒಳಾಂಗಣ ವಿನ್ಯಾಸ ಮಾಡಲು ವಿವಿಧ ಸಂಸ್ಥೆಗಳೊಂದಿಗೆ ಬಿಎಂಆರ್​ಸಿಎಲ್​ ಒಪ್ಪಂದ ಮಾಡಿಕೊಂಡಿದೆ. ಬಿಎಂಆರ್​ಸಿಎಲ್ ಪ್ರಕಾರ​​ ಮೆಟ್ರೋ ಆಸ್ತಿಗಳನ್ನು ಸುಂದರಗೊಳಿಸಲು ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಕೂಡ ಮೆಟ್ರೋ ನಿಲ್ದಾಣಗಳ ಒಳಾಂಗಣ ಸುಂದರವಾಗಿ ಕಾಣಲು ವಿವಿಧ ಸಂಸ್ಥೆಗಳು ಮುಂದೆ ಬಂದಿದ್ದವು.

ಈಗಾಗಲೇ ವೈಟ್‌ಫೀಲ್ಡ್ ಮೆಟ್ರೋ ಲೈನ್‌ನಲ್ಲಿ, ಸಧೃಡ ಭಾರತ, ಪರಿಸರ ಸಂರಕ್ಷಣೆ ಮತ್ತು ಇತರ ಸಾಮಾಜಿಕ ಸಂದೇಶಗಳಂತಹ ವಿವಿಧ ವಿಷಯಗಳನ್ನು ಒಳಗೊಂಡ ಸುಂದರೀಕರಣದ ಕೆಲಸವನ್ನು ನಾವು ನೋಡಬಹುದು. ಕೆಲವು ಸ್ಥಳಗಳಲ್ಲಿ, ಕಂಬಗಳಿಗೆ ನೇರಳೆ ಬಣ್ಣ ಬಳಿಯಲಾಗಿದೆ. ಸದ್ಯ ಐದು ಕಂಪನಿಗಳು ಸೌಂದರ್ಯೀಕರಣಕ್ಕೆ ಮುಂದೆ ಬಂದಿದ್ದು, ಐದು ವರ್ಷಗಳ ಅವಧಿಗೆ ಅವುಗಳೇ ನಿರ್ವಹಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು