AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ

ನೈಋತ್ಯ ರೈಲ್ವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ ಮಾಡಿದೆ. ಜೊತೆಗೆ ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಕೂಡ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗದ ರೈಲಿನ ಸೇವಾ ದಿನ, ಸಮಯ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ. 

ಈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ
ವಂದೇ ಭಾರತ್ ಎಕ್ಸ್‌ಪ್ರೆಸ್‌
ಗಂಗಾಧರ​ ಬ. ಸಾಬೋಜಿ
|

Updated on:Sep 18, 2025 | 8:01 AM

Share

ಬೆಂಗಳೂರು, ಸೆಪ್ಟೆಂಬರ್​​ 18: ನೈಋತ್ಯ ರೈಲ್ವೆ (South Western Railway) ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ ಸೇರಿದಂತೆ ಕೆಲ ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಬದಲಾವಣೆ ಮಾಡಿದೆ. ಆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗದ ರೈಲಿನ ಸೇವಾ ದಿನ, ಸಮಯ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ.

ಕಾಚಿಗುಡ-ಯಶವಂತಪುರ-ಕಾಚಿಗುಡ

ದಕ್ಷಿಣ ಮಧ್ಯ ರೈಲೆಯು ರೈಲು ಸಂಖ್ಯೆ (20703/20704) ಕಾಚಿಗುಡ-ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸೇವಾ ದಿನಗಳನ್ನು ಪರಿಷ್ಕರಿಸಿದೆ. ಪ್ರಸ್ತುತ, ಈ ರೈಲು ಬುಧವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಸಂಚರಿಸುತ್ತದೆ.

ಇದನ್ನೂ ಓದಿ
Image
ಬೆಂಗಳೂರಿನ ರಿಂಗ್ ರೋಡ್​​ನಲ್ಲಿ 1 ವಾರ ವಾಹನ ಸಂಚಾರ ಬದಲಾವಣೆ
Image
ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
Image
ಕರ್ನಾಟಕದ ವಿವಿಧೆಡೆಗೆ ದಸರಾ ವಿಶೇಷ ರೈಲುಗಳು: ವೇಳಾಪಟ್ಟಿ ಇಲ್ಲಿದೆ
Image
ಹುಬ್ಬಳ್ಳಿ ಜೋಧಪುರ್‌ ನಡುವೆ ನೇರ ರೈಲು: ಟಿಕೆಟ್ ಬುಕಿಂಗ್ ಶುರು

ನೈರುತ್ಯ ರೈಲ್ವೆ ಟ್ವೀಟ್​

ಡಿಸೆಂಬರ್ 4ರಿಂದ ಈ ರೈಲು ಇನ್ಮುಂದೆ ಶುಕ್ರವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳಲ್ಲಿ ಸೇವೆ ಒದಗಿಸಲಿವೆ. ರೈಲಿನ ವೇಳಾಪಟ್ಟಿ, ನಿಲುಗಡೆಗಳು, ಆವರ್ತನ ಮತ್ತು ಬೋಗಿಗಳ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಬದಲಾವಣೆ

ದಕ್ಷಿಣ ರೈಲ್ವೆಯು ರೈಲು ಸಂಖ್ಯೆ (12678/12677) ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಡಿಸೆಂಬರ್ 3ರಿಂದ ಎಕ್ಸ್‌ಪ್ರೆಸ್ ವರ್ಗಕ್ಕೆ ಬದಲಾಯಿಸಿ, ಅದರ ಸಂಖ್ಯೆಗಳನ್ನು ಪರಿಷ್ಕರಿಸಿದೆ.

ಇದನ್ನೂ ಓದಿ: ಬೆಂಗಳೂರಿನ ರಿಂಗ್ ರೋಡ್​​ನಲ್ಲಿ 1 ವಾರ ವಾಹನ ಸಂಚಾರಕ್ಕೆ ನಿರ್ಬಂಧ: ಇಲ್ಲಿದೆ ಪರ್ಯಾಯ ಮಾರ್ಗ

ಇದರ ಪ್ರಕಾರ, ರೈಲು ಸಂಖ್ಯೆ (12678) ಎರ್ನಾಕುಲಂ- ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಇನ್ಮುಂದೆ ರೈಲು ಸಂಖ್ಯೆ (16378) ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಆಗಿ ಸಂಚರಿಸಲಿದೆ. ಅದೇ ರೀತಿ, ರೈಲು ಸಂಖ್ಯೆ (12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ರೈಲು ಸಂಖ್ಯೆ (16377) ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:38 am, Thu, 18 September 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ