AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ

Kadalekai parishe 2023: ನಗರದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡಿ.11ರಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಹಾಗಾಗಿ ನಾಳೆಯಿಂದ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಸೇರಿದಂತೆ ಪಾರ್ಕಿಂಗ್​​​ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ
ಕಡಲೆಕಾಯಿ ಪರಿಷೆ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 08, 2023 | 1:28 PM

ಬೆಂಗಳೂರು, ಡಿಸೆಂಬರ್​​ 08: ಡಿ. 11ರಿಂದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದೆ. ಕಡಲೆಕಾಯಿ ಪರಿಷೆಗೆ ಸಿಲಿಕಾನ್​ ಸಿಟಿ ಜನರು ಸೇರಿದಂತೆ ಸುತ್ತಮುತ್ತಲ ಲಕ್ಷಾಂತರ ಜನರು ಆಗಮಿಸುತ್ತಾರೆ. ಹಾಗಾಗಿ ನಾಳೆಯಿಂದಲೇ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್​​​ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಲಾಲ್​ಬಾಗ್​​ ವೆಸ್ಟ್​ಗೇಟ್​ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕ 5ನೇ ಮುಖ್ಯರಸ್ತೆ ಚಾಮರಾಜಪೇಟೆ, ಗಾಂಧಿಬಜಾರ್ ಮುಖ್ಯರಸ್ತೆಯಿಂದ ಬುಲ್​​ಟೆಂಪಲ್ ರಸ್ತೆಯ ರಾಮಕೃಷ್ಣಾಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು. ಹಯವದನರಾವ್ ರಸ್ತೆ ಮೂಲಕ ಗವಿಪುರಂ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್​ ಮೂಲಕ ಹನುಮಂತನಗರದ ಕಡೆ ತೆರಳಬಹುದಾಗಿದೆ.

ಇದನ್ನೂ ಓದಿ: Kadlekai Parishe 2023: ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ, ಏಕಿಷ್ಟು ಪ್ರಾಮುಖ್ಯತೆ, ಕಾರ್ತಿಕ ಮಾಸದಲ್ಲೇ ಏಕೆ ನಡೆಯುತ್ತದೆ? ಇಲ್ಲಿದೆ ಮಾಹಿತಿ

ಆರ್​​.ವಿ.ಟೀಚರ್ಸ್​ ಕಾಲೇಜ್​ ಜಂಕ್ಷನ್​ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ, ಕೆ.ಆರ್​​.ರಸ್ತೆಯಲ್ಲಿ ಬ್ಯೂಗಲ್​ ರಾಕ್​ ರಸ್ತೆ ಮೂಲಕ ಹನುಮಂತನಗರ ಕಡೆಗೆ ಸಂಚರಿಸುವ ವಾಹನಗಳು ಟ್ಯಾಗೋರ್ ಸರ್ಕಲ್​ನಲ್ಲಿ ಬಲತಿರುವು ಪಡೆಯಬೇಕು.

ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​​ ಮೂಲಕ ಹಯವದನರಾವ್​ ರಸ್ತೆಯಲ್ಲಿ ಗವಿಪುರಂ ಎಕ್ಸ್​ಟೆಂಕ್ಷನ್​ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್ ರಸ್ತೆ​ ಮೂಲಕ ಹನುಮಂತನಗರ ಕಡೆಗೆ ತೆರಳಬೇಕು.

ಇದನ್ನೂ ಓದಿ: ಬಸವನಗುಡಿ ದೊಡ್ಡ ಗಣಪನ ದೇಗುಲ ಗೋಪುರದಲ್ಲಿ ಬಿರುಕು: ಪತ್ರ ಬರೆದ್ರೂ ಕ್ರಮಕೈಗೊಳ್ಳದ ಪುರಾತತ್ವ ಇಲಾಖೆ?

ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ, ಎನ್​​.ಆರ್​​.ಕಾಲೋನಿ ರಸ್ತೆಯಲ್ಲಿ ಬುಲ್​ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಂಚರಿಸುವ ವಾಹನಗಳು ಬುಲ್​ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಅಶೋಕ್​​ನಗರ 2ನೇ ಕ್ರಾಸ್​ ರಸ್ತೆ ಮೂಲಕ ಕತ್ರಿಗುಪ್ಪೆ ರಸ್ತೆ ಜಂಕ್ಷನ್​ನಲ್ಲಿ ಬಲತಿರುವು ಪಡೆದು 3ನೇ ಮುಖ್ಯರಸ್ತೆ ನಾರಾಯಣಸ್ವಾಮಿ ಸರ್ಕಲ್​ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್​ ರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​ನಿಂದ ಚಾಮರಾಜಪೇಟೆ ಕಡೆಗೆ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ವಾಹನಗಳ ಪಾರ್ಕಿಂಗ್​​ ವ್ಯವಸ್ಥೆ

ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್​​ಗೆ ವ್ಯವಸ್ಥೆ ಮಾಡಲಾಗಿದೆ. ಎನ್​.ಆರ್​​.ಕಾಲೋನಿಯ ಎಪಿಎಸ್​ ಕಾಲೇಜು ಮೈದಾನ, ಹಯವದನರಾವ್​ ರಸ್ತೆಯ ಕೊಹಿನೂರು ಆಟದ ಮೈದಾನ ಹಾಗೂ ಬುಲ್​ಟೆಂಪಲ್ ರಸ್ತೆಯ ಉದಯಭಾನು ಮೈದಾನದಲ್ಲಿ ಪಾಕಿಂಗ್​​ಗೆ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 am, Fri, 8 December 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ