AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ

Kadalekai parishe 2023: ನಗರದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡಿ.11ರಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಹಾಗಾಗಿ ನಾಳೆಯಿಂದ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಸೇರಿದಂತೆ ಪಾರ್ಕಿಂಗ್​​​ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಡಿ. 11ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ನಾಳೆಯಿಂದಲೇ ಮಾರ್ಗ ಬದಲಾವಣೆ
ಕಡಲೆಕಾಯಿ ಪರಿಷೆ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 08, 2023 | 1:28 PM

Share

ಬೆಂಗಳೂರು, ಡಿಸೆಂಬರ್​​ 08: ಡಿ. 11ರಿಂದ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದೆ. ಕಡಲೆಕಾಯಿ ಪರಿಷೆಗೆ ಸಿಲಿಕಾನ್​ ಸಿಟಿ ಜನರು ಸೇರಿದಂತೆ ಸುತ್ತಮುತ್ತಲ ಲಕ್ಷಾಂತರ ಜನರು ಆಗಮಿಸುತ್ತಾರೆ. ಹಾಗಾಗಿ ನಾಳೆಯಿಂದಲೇ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್​​​ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿವೆ

ಲಾಲ್​ಬಾಗ್​​ ವೆಸ್ಟ್​ಗೇಟ್​ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕ 5ನೇ ಮುಖ್ಯರಸ್ತೆ ಚಾಮರಾಜಪೇಟೆ, ಗಾಂಧಿಬಜಾರ್ ಮುಖ್ಯರಸ್ತೆಯಿಂದ ಬುಲ್​​ಟೆಂಪಲ್ ರಸ್ತೆಯ ರಾಮಕೃಷ್ಣಾಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು. ಹಯವದನರಾವ್ ರಸ್ತೆ ಮೂಲಕ ಗವಿಪುರಂ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್​ ಮೂಲಕ ಹನುಮಂತನಗರದ ಕಡೆ ತೆರಳಬಹುದಾಗಿದೆ.

ಇದನ್ನೂ ಓದಿ: Kadlekai Parishe 2023: ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ, ಏಕಿಷ್ಟು ಪ್ರಾಮುಖ್ಯತೆ, ಕಾರ್ತಿಕ ಮಾಸದಲ್ಲೇ ಏಕೆ ನಡೆಯುತ್ತದೆ? ಇಲ್ಲಿದೆ ಮಾಹಿತಿ

ಆರ್​​.ವಿ.ಟೀಚರ್ಸ್​ ಕಾಲೇಜ್​ ಜಂಕ್ಷನ್​ ಕಡೆಯಿಂದ ಟ್ರಿನಿಟಿ ಆಸ್ಪತ್ರೆ ರಸ್ತೆ, ಕೆ.ಆರ್​​.ರಸ್ತೆಯಲ್ಲಿ ಬ್ಯೂಗಲ್​ ರಾಕ್​ ರಸ್ತೆ ಮೂಲಕ ಹನುಮಂತನಗರ ಕಡೆಗೆ ಸಂಚರಿಸುವ ವಾಹನಗಳು ಟ್ಯಾಗೋರ್ ಸರ್ಕಲ್​ನಲ್ಲಿ ಬಲತಿರುವು ಪಡೆಯಬೇಕು.

ಗಾಂಧಿಬಜಾರ್ ಮುಖ್ಯರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​​ ಮೂಲಕ ಹಯವದನರಾವ್​ ರಸ್ತೆಯಲ್ಲಿ ಗವಿಪುರಂ ಎಕ್ಸ್​ಟೆಂಕ್ಷನ್​ 3ನೇ ಅಡ್ಡರಸ್ತೆ ಮೂಲಕ ಮೌಂಟ್​​ಜಾಯ್ ರಸ್ತೆ​ ಮೂಲಕ ಹನುಮಂತನಗರ ಕಡೆಗೆ ತೆರಳಬೇಕು.

ಇದನ್ನೂ ಓದಿ: ಬಸವನಗುಡಿ ದೊಡ್ಡ ಗಣಪನ ದೇಗುಲ ಗೋಪುರದಲ್ಲಿ ಬಿರುಕು: ಪತ್ರ ಬರೆದ್ರೂ ಕ್ರಮಕೈಗೊಳ್ಳದ ಪುರಾತತ್ವ ಇಲಾಖೆ?

ತ್ಯಾಗರಾಜನಗರ/ಬನಶಂಕರಿ ಕಡೆಯಿಂದ 5ನೇ ಮುಖ್ಯರಸ್ತೆ, ಎನ್​​.ಆರ್​​.ಕಾಲೋನಿ ರಸ್ತೆಯಲ್ಲಿ ಬುಲ್​ಟೆಂಪಲ್ ರಸ್ತೆ ಮೂಲಕ ಚಾಮರಾಜಪೇಟೆ ಕಡೆಗೆ ಸಂಚರಿಸುವ ವಾಹನಗಳು ಬುಲ್​ಟೆಂಪಲ್ ರಸ್ತೆಯ ಕಾಮತ್ ಯಾತ್ರಿ ನಿವಾಸ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಅಶೋಕ್​​ನಗರ 2ನೇ ಕ್ರಾಸ್​ ರಸ್ತೆ ಮೂಲಕ ಕತ್ರಿಗುಪ್ಪೆ ರಸ್ತೆ ಜಂಕ್ಷನ್​ನಲ್ಲಿ ಬಲತಿರುವು ಪಡೆದು 3ನೇ ಮುಖ್ಯರಸ್ತೆ ನಾರಾಯಣಸ್ವಾಮಿ ಸರ್ಕಲ್​ನಲ್ಲಿ ಕೆ.ಜಿ.ನಗರ ಮುಖ್ಯರಸ್ತೆ ಅಥವಾ ಹಯವದನರಾವ್​ ರಸ್ತೆ ಮೂಲಕ ರಾಮಕೃಷ್ಣಾಶ್ರಮ ಜಂಕ್ಷನ್​ನಿಂದ ಚಾಮರಾಜಪೇಟೆ ಕಡೆಗೆ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ವಾಹನಗಳ ಪಾರ್ಕಿಂಗ್​​ ವ್ಯವಸ್ಥೆ

ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್​​ಗೆ ವ್ಯವಸ್ಥೆ ಮಾಡಲಾಗಿದೆ. ಎನ್​.ಆರ್​​.ಕಾಲೋನಿಯ ಎಪಿಎಸ್​ ಕಾಲೇಜು ಮೈದಾನ, ಹಯವದನರಾವ್​ ರಸ್ತೆಯ ಕೊಹಿನೂರು ಆಟದ ಮೈದಾನ ಹಾಗೂ ಬುಲ್​ಟೆಂಪಲ್ ರಸ್ತೆಯ ಉದಯಭಾನು ಮೈದಾನದಲ್ಲಿ ಪಾಕಿಂಗ್​​ಗೆ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 am, Fri, 8 December 23

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ