AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadalekai parishe: ಇಂದಿನಿಂದ ಬಸವನಗುಡಿ ಕಡಲೇಕಾಯಿ ಪರಿಷೆ ಆರಂಭ; 2 ವರ್ಷಗಳ ಬಳಿಕ ಮತ್ತೆ ಅದ್ದೂರಿ ಆಚರಣೆ

ಹೊಸ ರೂಪಂತರಿ ವೈರಸ್ ಭೀತಿ‌ಯ ನಡುವೆಯೇ ಬೆಂಗಳೂರಿನಲ್ಲಿ ಹಬ್ಬದ ಆಚಾರಣೆ ಆರಂಭವಾಗಿದ್ದು, ಕೊಂಚ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ವ್ಯಾಪರಸ್ಥರು ಹಾಗೂ ಜನರ ಮೇಲೆ ಬಿಬಿಎಂಪಿ ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಲಿದ್ದಾರೆ.

Kadalekai parishe: ಇಂದಿನಿಂದ ಬಸವನಗುಡಿ ಕಡಲೇಕಾಯಿ ಪರಿಷೆ ಆರಂಭ; 2 ವರ್ಷಗಳ ಬಳಿಕ ಮತ್ತೆ ಅದ್ದೂರಿ ಆಚರಣೆ
ಕಡಲೆಕಾಯಿ ಪರಿಷೆ (ಸಾಂದರ್ಭಿಕ ಚಿತ್ರ)
TV9 Web
| Updated By: preethi shettigar|

Updated on:Nov 29, 2021 | 10:56 AM

Share

ಬೆಂಗಳೂರು: ಕಡೆಯ ಕಾರ್ತಿಕ ಸೋಮವಾರ ಹಿನ್ನೆಲೆ ಇಂದಿನಿಂದ ( ನವೆಂಬರ್​ 29) ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭವಾಗಲಿದೆ. 2 ವರ್ಷಗಳ ಬಳಿಕ ಅದ್ಧೂರಿಯಾಗಿ ಐತಿಹಾಸಿಕ ಕಡಲೇಕಾಯಿ ಪರಿಷೆಗೆ ಚಾಲನೆ ಸಿಕ್ಕಿದ್ದು, ಬೆಳಗ್ಗೆ 10.30ಕ್ಕೆ ದೊಡ್ಡ ಗಣಪತಿ ಹಾಗೂ ಬಸವಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ, ಕಡಲೇಕಾಯಿ ಪರಿಷೆ (Kadalekai parishe) ಆರಂಭಲಾಗಲಿದೆ. ಹೊರ ರಾಜ್ಯದ ಜನ ಕೂಡ ಇಲ್ಲಿಗೆ ಆಗಮಿಸುವ ನಿರೀಕ್ಷೆ ಇದೆ. ಬಿಬಿಎಂಪಿ (BBMP) ಆಯುಕ್ತರಾದ ಗೌರವ್ ಗುಪ್ತಾ ಸೇರಿದಂತೆ ಹಲವು ರಾಜಕೀಯ ಗಣ್ಯರು ಕಡಲೇಕಾಯಿ ಪರಿಷೆಯಲ್ಲಿ ಭಾಗಿಯಾಗಲಿದ್ದಾರೆ.

ಕಡಲೇಕಾಯಿ ಪರಿಷೆಗೆ ಆಂಧ್ರ, ತಮಿಳುನಾಡು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಕಡಲೇಕಾಯಿ ಮಾರಾಟಕ್ಕೆ ಬರುತ್ತದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಸಾಧ್ಯತೆ ಇದೆ. ಆದರೆ ಹೊಸ ರೂಪಂತರಿ ವೈರಸ್ ಭೀತಿ‌ಯ ನಡುವೆಯೇ ಬೆಂಗಳೂರಿನಲ್ಲಿ ಹಬ್ಬದ ಆಚಾರಣೆ ಆರಂಭವಾಗಿದ್ದು, ಕೊಂಚ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ವ್ಯಾಪರಸ್ಥರು ಹಾಗೂ ಜನರ ಮೇಲೆ ಬಿಬಿಎಂಪಿ ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಲಿದ್ದಾರೆ.

ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೇಕಾಯಿ ಪರಿಷೆ ಈ ಬಾರಿ ನವೆಂಬರ್ 29ರಿಂದ ಡಿಸೆಂಬರ್ 1ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತದಿಗಳು ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದೇವಸ್ಥಾನದಲ್ಲಿ ಕ್ಯೂ ನಿಂತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಒಮಿಕ್ರಾನ್ ರೂಪಾಂತರಿ ತಳಿ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ. ದೇಶದಲ್ಲಿ ಇದುವರೆಗೂ ಈ ಹೊಸ ತಳಿಯ ಕೇಸ್ ಪತ್ತೆಯಾಗದೇ ಇದ್ರೂ, ಈ ರೂಪಾಂತರಿಯ ಕ್ರೌರ್ಯಕ್ಕೆ ಜಗತ್ತೆ ಬೆಚ್ಚಿ ಬಿದ್ದಿದೆ. ಹೀಗಾಗಿ ದೇವಾಸ್ಥಾನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಜಾತ್ರೆ ನಡೆಯುವ ಸ್ಥಳದಲ್ಲಿಯೇ ಟೆಸ್ಟಿಂಗ್ ಸೆಂಟರ್ ಹಾಗೂ ವ್ಯಾಕ್ಸಿನೇಷನ್‌ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಸದ್ಯ ಕಡಲೇಕಾಯಿ ಪರಿಷೆ ಸಿದ್ದತೆ ಬಗ್ಗೆ ವಿಶೇಷ ಆಯುಕ್ತೆ ತುಳುಸಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಕಡೆ ವ್ಯಾಕ್ಸಿನ್ ಸೆಂಟರ್​ಗಳಿವೆ, ಎಷ್ಟು ಶೌಚಾಲಯಗಳಿವೆ, ಎಷ್ಟು ಜನ ವ್ಯಾಪಾರಸ್ಥರಿದ್ದಾರೆ, ಮುಜುರಾಯಿ ಇಲಾಖೆಯಿಂದ ಏನೆಲ್ಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Peanut: ಕಡಲೆಕಾಯಿ ತಿನ್ನುವ ಅಭ್ಯಾಸ ಇದೆಯೇ? ಹೃದ್ರೋಗ ನಿವಾರಣೆಗೆ ಇದು ಹೇಗೆ ಸಹಕಾರಿ ತಿಳಿಯಿರಿ

ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ

Published On - 10:54 am, Mon, 29 November 21

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ