ಕಲಬುರಗಿ ಜೈಲಿಂದ ಕೈದಿಗಳು ಪರಾರಿ ಕೇಸ್: ಪ್ರಿಯಾಂಕ್-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್ ವಾರ್
Karnataka Politcs: ಕಲಬುರಗಿ ಜೈಲಿನಿಂದ ಕೈದಿಗಳು ಪರಾರಿಯಾದ ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಗಳಿಗೆ ಕಾರಣವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪರಸ್ಪರ ವಾಗ್ದಾಳಿ ನಡೆಸಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಖ್ಯಾಂಶಗಳು
- ಕಲಬುರಗಿ ಕೇಂದ್ರ ಕಾರಾಗೃಹದಿಂದ 3 ಕೈದಿಗಳು ಪರಾರಿ ಕೇಸ್
- ಪ್ರಿಯಾಂಕ್ ಖರ್ಗೆ-ವಿಜಯೇಂದ್ರ ನಡುವೆ ಪರಸ್ಪರ ವಾಗ್ಯುದ್ಧ
- ಬಿಜೆಪಿಗೆ ಇತಿಹಾಸ ನೆನಪಿಸಿದ ಪ್ರಿಯಾಂಕ್ಗೆ ಬಿವೈವಿ ಕೌಂಟರ್
ಬೆಂಗಳೂರು, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂರು ಕೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಅದರಲ್ಲೂ ಗೃಹ ಸಚಿವ ವಿರುದ್ಧ ಟೀಕಾ ಪ್ರಹಾರಗಳೇ ನಡೆಯುತ್ತಿವೆ. ಇವುಗಳಿಗೆಲ್ಲ ಪ್ರಿಯಾಂಕ್ ಖರ್ಗೆ (Priyank Kharge) ಕೌಂಟರ್ ಕೊಟ್ಟಿದ್ದು, ಟೀಕೆಗಳಿಗೆ ಬಾಯ್ತೆರೆದು ಕುಳಿತಿರುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಅವಧಿಯಲ್ಲಿ ರಾಜ್ಯದ ಜೈಲುಗಳ ಸ್ಥಿತಿ ಹೇಗಿತ್ತು ಎಂಬುದನ್ನು ಅವಲೋಕನ ಮಾಡಿಕೊಂಡರೆ ಒಳಿತು ಎಂದಿದ್ದಾರೆ.
ಬಿಜೆಪಿಗೆ ಇತಿಹಾಸ ನೆನಪಿಸಿದ ಪ್ರಿಯಾಂಕ್
2010ರಲ್ಲಿ ಇದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ 8 ಕೈದಿಗಳು ಪರಾರಿಯಾಗಿದ್ದರು. ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಪ್ರಕರಣ ಎಂದು ಪರಿಗಣಿಸಬಹುದು. ಇದು ಅಂದಿನ ಗೃಹಸಚಿವರ ವೈಫಲ್ಯವೆಂದು ಬಿಜೆಪಿ ಹೇಳುತ್ತದೆಯೇ? ಬಿಜೆಪಿ ಅವಧಿಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಅತಿಥಿ ಗೃಹವಾಗಿ ಬದಲಾಗಿ ಖೈದಿಗಳಿಗೆ ಸಕಲ ಸವಲತ್ತುಗಳು ದೊರಕುತ್ತಿದ್ದ ಸುದ್ದಿಗಳನ್ನು ರಾಜ್ಯ ನೋಡಿದೆ. ಇದನ್ನು ಬಿಜೆಪಿ ಸರ್ಕಾರದ ವೈಫಲ್ಯ ಎಂಬುದನ್ನು ಒಪ್ಪಿಕೊಳ್ಳುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ ಕೇಸ್; 8 ಜೈಲಧಿಕಾರಿಗಳ ಅಮಾನತು
ಗೃಹ ಸಚಿವರ ಆರೋಪಕ್ಕೆ ವಿಜಯೇಂದ್ರ ಕೌಂಟರ್
ಐಸಿಸ್ ಉಗ್ರನಿಗೆ ರಾಜಾತಿಥ್ಯ ನೀಡಿದ ಮಹಾನ ಸರ್ಕಾರದ ಮಹಾನ್ ಗೃಹ ಸಚಿವರೇ, ನೀವು ಆರ್ ಎಸ್ ಎಸ್ ಬಗ್ಗೆ ಚಿಂತೆ ಮಾಡುವುದನ್ನು ಬಿಡಿ. ನಿಮ್ಮ ತವರು ಜಿಲ್ಲೆಯಲ್ಲಿಯೇ ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡಿದ್ದು ನಿಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿ.
2010ರಲ್ಲಿ ಆಯಿತು ಅಂತ ಈಗ ನೀವು ಜೈಲಿನಿಂದ ತಪ್ಪಿಸಿಕೊಳ್ಳಲು ಬಿಟ್ಟಿದ್ದೀರಾ? ನಿಮ್ಮ ವೈಪಲ್ಯ… https://t.co/0qxLVgAvE1
— Vijayendra Yediyurappa (@BYVijayendra) July 15, 2026
ಈ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಆರೋಪಗಳಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಯೇಂದ್ರ ಕೌಂಟರ್ ಕೊಟ್ಟಿದ್ದಾರೆ. ಐಸಿಸ್ ಉಗ್ರನಿಗೆ ರಾಜಾತಿಥ್ಯ ನೀಡಿದ ಮಹಾನ ಸರ್ಕಾರದ ಮಹಾನ್ ಗೃಹ ಸಚಿವರೇ, ನೀವು RSS ಬಗ್ಗೆ ಚಿಂತೆ ಮಾಡುವುದನ್ನು ಬಿಡಿ. ನಿಮ್ಮ ತವರು ಜಿಲ್ಲೆಯಲ್ಲಿಯೇ ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡಿದ್ದು ನಿಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿ. 2010ರಲ್ಲಿ ಆಯಿತು ಅಂತ ಈಗ ನೀವು ಜೈಲಿನಿಂದ ತಪ್ಪಿಸಿಕೊಳ್ಳಲು ಬಿಟ್ಟಿದ್ದೀರಾ? ನಿಮ್ಮ ವೈಪಲ್ಯ ಮರೆ ಮಾಚಲು ಕಾಗಕ್ಕ ಗುಬ್ಬಕ್ಕ ಕಥೆ ಹೇಳಬೇಡಿ. ಪಾಪ, ನಿಮಗೆ RSS ಬಗ್ಗೆ ಅಧ್ಯಯನ ಮಾಡೋಕೆ ಸಮಯ ಸಿಗುತ್ತಿಲ್ಲ, ಇನ್ನೂ ಜೈಲು, ಕಾನೂನು ಸುವವ್ಯಸ್ಥೆ ಕಾಪಾಡೋಕೆ ಸಮಯ ಎಲ್ಲಿದೆ ಸ್ವಾಮಿ ಎಂದು ವ್ಯಂಗ್ಯವಾಡಿದ್ದಾರೆ.
ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ತಾವು ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡುವುದು ನಿಮ್ಮ ಯೋಗ್ಯತೆಯನ್ನು ತೋರಿಸುತ್ತದೆ. ತಮ್ಮ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಜೈಲಿನಲ್ಲಿ ಏನೇನಾಗಿತ್ತು ಎನ್ನುವದು ಇಡೀ ದೇಶದ ಜನತೆಗೆ ಗೊತ್ತಿದೆ ಮಿಸ್ಟರ್ ಹೋಮ್ ಮಿನಿಸ್ಟರ್. ನಾಚಿಕೆ ಆಗಬೇಕು ನಿಮಗೆ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡೋಕೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:28 pm, Wed, 15 July 26




