AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News| ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಪ್ರೀತಿ ಮಾಡಿ ಬೇರೆ ಯುವತಿ ಜೊತೆ ಮದುವೆಯಾಗಿ ಬಂದಿದ್ದ ಪ್ರಿಯಕರನ್ನು ಮಹಿಳೆ ಮನೆಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Bengaluru News| ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ
ರಮೇಶ್ ಬಿ. ಜವಳಗೇರಾ
|

Updated on:May 30, 2023 | 9:18 AM

Share

ಬೆಂಗಳೂರು: ಮದುವೆಯಾಗಲು(Marriage) ನಿರಾಕರಿಸಿದ್ದಕ್ಕೆ ಪ್ರಿಯತಮನ (Lover) ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ(Bengaluru) ಚಾಮರಾಜಪೇಟೆಯಲ್ಲಿ ನಡೆದಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ವಿಜಯಶಂಕರ ಆರ್ಯ ಹಾಗೂ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಎನ್ನುವ ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿತ್ತು. ಆದ್ರೆ, ಇದೀಗ ವಿಜಯ್​ ಜ್ಯೀತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಕುಪಿತಗೊಂಡ ಜ್ಯೋತಿ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ್ದಾಳೆ. ಇದರಿಂದ ಪ್ರಿಯಕರ ವಿಜಯಶಂಕರಗೆ ಗಂಭಿರ ಗಾಯಗೊಂಡಿದ್ದಾನೆ.

ಇದನ್ನೂ ಓದಿ: Shivamogga News: ಮುಸ್ಲಿಂ ಗೆಳತಿಯನ್ನು ಬೈಕ್‌ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಘಟನೆ ಹಿನ್ನೆಲೆ

ಕಲಬುರಗಿ ಮೂಲದ ವಿಜಯಶಂಕರ ಆರ್ಯ ಹಾಗೂ ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಜ್ಯೋತಿ ಬೆಂಗಳೂರಿನಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿದೆ. ಚಾಮರಾಜಪೇಟೆಯ ಬೋರೋ ಕ್ಲಾಥಿಂಗ್​ನಲ್ಲಿ ಫೋಟೋ ಎಡಿಟಿಂಗ್ ಕೆಲಸ ಮಾಡಿಕೊಂಡಿದ್ದ ವಿಜಯ್​, ಚಾಮರಾಜಪೇಟೆಯಲ್ಲಿನ ತನ್ನ ಬಾಡಿಗೆ ರೂಂ ಜ್ಯೋತಿಗರ ಬಿಟ್ಟು ಕೊಟ್ಟು, ತನ್ನ ಸ್ನೇಹಿತನ ಜೊತೆ ಬೊಮ್ಮಸಂದ್ರದ ಹೆರಾಂಡಳ್ಳಿಯಲ್ಲಿ ವಾಸವಾಗಿದ್ದ. ಇನ್ನು  ಇನ್ನು ಜ್ಯೋತಿ ಬೃಂದಾವನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು.​  ಸುಮಾರು 4 ವರ್ಷದ ಹಿಂದೆ ಇಬ್ಬರ ಪರಿಚಯವಾಗಿದ್ದು, ಜ್ಯೋತಿ ತನಗೆ ಮದುವೆ ಆಗಿರುವುದನ್ನು ಮುಚ್ಚಿಟ್ಟಿದ್ದಳು. ಹೀಗೆ ಇಬ್ಬರ ನಡುವೆ ಲವ್ವಿ ಡವ್ವಿ ಮುಂದುವರೆದಿದ್ದು, 2 ವರ್ಷಗಳ ಹಿಂದೆ ಜ್ಯೋತಿಗೆ ಮದುವೆಯಾಗಿರುವ ವಿಚಾರ ವಿಜಯ್​ಗೆ ಗೊತ್ತಾಗಿದೆ.

ನಂತರ ಜ್ಯೋತಿಯನ್ನು ದೂರ ಮಾಡಲು ಶುರು ಮಾಡಿದ್ದಾನೆ. ಹೀಗೆ ಮೇ 5ರಂದು ಮಾತನಾಡಬೇಕು ಬಾ ಎಂದು ಜ್ಯೋತಿ ಮನೆಗೆ ಕರೆಯಿಸಿಕೊಂಡಿದ್ದಾಳೆ. ಬಳಿಕ ನಮ್ಮಬ್ಬರಿಗೂ ಇಬ್ಬರಿಗೂ ಮದುವೆಯಾಗಿದೆ. ಇನ್ನು ಮುಂದೆ ಇದೆಲ್ಲಾ ಬೇಡ. ಇಲ್ಲಿಗೆ ನಿಲ್ಲಿಸೋಣ ಎಂದು ವಿಜಯ್, ಜ್ಯೋತಿಗೆ ಹೇಳಿದ್ದಾನೆ. ಇದರಿಂದ ಜ್ಯೋತಿ ಆಕ್ರೋಶಗೊಂಡಿದ್ದಳು. ಆದರೂ ಸುಮ್ಮನಿದ್ದಳು. ನಂತರ ವಿಜಯ್ ಯಾಕೋ ಮೈಗೆ ಹುಷಾರಿಲ್ಲ ಡ್ರಿಪ್ಸ್ ಹಾಕು ಎಂದು ಹೇಳಿ ರೂಮಿನಲ್ಲಿ ಹೋಗಿ ಮಲಗಿಕೊಂಡಿದ್ದ.ಜ್ಯೋತಿಯು ಸಹ ವಿಜಯ್​ಗೆ ಡ್ರಿಪ್ಸ್ ಹಾಕಿದ್ದಾಳೆ. ನಂತರ ಮೇ 26ರ ಬೆಳಗಿನ ಜಾವ 4 ರಿಂದ 5 ಗಂಟೆಗೆ ಬಿಸಿ ನೀರು ಎರಚಿದ್ದಾಳೆ.

ಅಲ್ಲದೇ ಬಿಯರ್ ಬಾಟಲ್ ನಿಂದ ಮುಖಕ್ಕೆ ಹೊಡೆದು ಮನೆ ಲಾಕ್ ಮಾಡಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ನಂತರ ರೂಮಿನೊಳಗೆ ವಿಜಯ್​ ತೀವ್ರವಾಗಿ ಗಾಯಗೊಂಡು ಕಿರುಚಾಡುವುದನ್ನು ಮನೆ ಮಾಲೀಕ ಸೈಯದ್ ಕೇಳಿಸಿಕೊಂಡು ಓಡಿ ಹೋಗಿ ಭೀಮಶಂಕರನನ್ನು ರಕ್ಷಿಸಿ ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಿದ್ದಾನೆ.

ಬಿಸಿ ನೀರು ಬಿದ್ದು ಶೇಕಡಾ 40-50 ರಷ್ಟು ಗಾಯಗಳಾಗಿದ್ದು, ಈ ಬಗ್ಗೆ ವಿಜಯ್, ಜ್ಯೋತಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಎಫ್​ಐಆರ್ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

Published On - 8:59 am, Tue, 30 May 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ