AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಂಜಿ ಆಂಜನೇಯ ದೇಗುಲದ ಬಳಿ ಕಲ್ಯಾಣ ಮಂಟಪ; ಇಸ್ಕಾನ್‌ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ -ಸಚಿವ ಸಂಪುಟ ಸಭೆ ನಿರ್ಧಾರ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಸ್ಕಾನ್‌ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ ಎಂದು ಸಂಪುಟ ಸಭೆಯ ಬಳಿಕ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಕಾರಂಜಿ ಆಂಜನೇಯ ದೇಗುಲದ ಬಳಿ ಕಲ್ಯಾಣ ಮಂಟಪ; ಇಸ್ಕಾನ್‌ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ -ಸಚಿವ ಸಂಪುಟ ಸಭೆ ನಿರ್ಧಾರ
ಜೆಸಿ ಮಾಧುಸ್ವಾಮಿ
TV9 Web
| Edited By: ಆಯೇಷಾ ಬಾನು|

Updated on:May 12, 2022 | 4:59 PM

Share

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ವಿಚಾರಗಳು ಸೇರಿದಂತೆ ಗುರುವಾರ ಸಂಪುಟ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತಾಗಿ ಚರ್ಚೆ ನಡೆದಿದೆ. ಸದ್ಯ ಸಂಪುಟ ಸಭೆಯಲ್ಲಿ ಕಾರಂಜಿ ಆಂಜನೇಯ ದೇಗುಲದ ಬಳಿ ಅಪೂರ್ಣಗೊಂಡ ಕಲ್ಯಾಣ ಮಂಟಪ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ. ಶೃಂಗೇರಿ ಶಂಕರಪೀಠಕ್ಕೆ ಇದರ ಹೊಣೆ ನೀಡಲಾಗಿದೆ. ಬರುವ ಆದಾಯ 50/50 ಮಾಡಿಕೊಳ್ಳುವ ಒಪ್ಪಂದವಾಗಿದೆ.

ಇನ್ನು ಕುಡಿಯುವ ನೀರು ಪೂರೈಕೆಗೆ ಸಂಪುಟ ಸಮ್ಮತಿ ನೀಡಿದೆ. ಅಪ್ಪರ್ ಭದ್ರಾದಿಂದ ಪೈಪ್ ಲೈನ್ ಮೂಲಕ ನೀರು ಬಿಡುವ ಯೋಜನೆಗೆ 1300 ಕೋಟಿ ರೂ ಅನುದಾನಕ್ಕೆ ಒಪ್ಪಿಗೆ ನೀಡಿದೆ. ಚಿಕ್ಕಮಗಳೂರಿನ 146 ಹಳ್ಳಿಗಳು, ತರಿಕೇರಿಯ 156 ಹಳ್ಳಿಗಳು, ಅಜ್ಜಂಪುರ, ಹೊಸದುರ್ಗ 346 ಹಳ್ಳಿಗಳಿಗೆ ಭದ್ರಾಮೇಲ್ದಂಡೆ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ಇಂದಿನ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ.

ಬಳ್ಳಾರಿಯಲ್ಲಿ 198 ಎಕರೆ ಜಮೀನಿನಲ್ಲಿ ಲೇಔಟ್ಗೆ ಅನುಮತಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಳ್ಳಾರಿಯಲ್ಲಿ 198 ಎಕರೆ ಜಮೀನಿನಲ್ಲಿ ಲೇಔಟ್ಗೆ ಅನುಮತಿ ನೀಡಲಾಗಿದೆ. ಬಳ್ಳಾರಿಯ ಗೋನಾಳ್ ಬಳಿ ಲೇಔಟ್ ನಿರ್ಮಾಣಕ್ಕೆ ಸಮ್ಮತಿ ಸಿಕ್ಕಿದ್ದು ಅಟಲ್ ನಗರ ಪುನರುತ್ಥಾನದಡಿ ನಗರಗಳ ಅಭಿವೃದ್ಧಿ ಮಾಡಲಾಗುತ್ತಿದೆ. 1 ಲಕ್ಷ ಮೇಲ್ಪಟ್ಟ ಜನಸಂಖ್ಯೆವುಳ್ಳ ನಗರಗಳಲ್ಲಿ ಯುಜಿಡಿ ಕೆಲಸ. ಸುಮಾರು 287 ನಗರಗಳು ಇದಕ್ಕೆ ಸೇರಲಿವೆ. ಕೇಂದ್ರ & ರಾಜ್ಯದ ಅನುದಾನದಲ್ಲಿ ಕೆಲಸಗಳು ನಡೆಯಲಿವೆ. ಪ್ರಸ್ತುತ 927 ಕೋಟಿ ಮೀಸಲಿಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ದೇವದುರ್ಗದ 28 ಕೆರೆಗಳಿಗೂ ನೀರು ತುಂಬಿಸಲಾಗುತ್ತದೆ. ಇದಕ್ಕಾಗಿ 339 ಕೋಟಿ ಹಣವನ್ನ ಮೀಸಲಿಡಲಾಗಿದೆ. ಸುಮಾರು 150.05 ಕೋಟಿ ವೆಚ್ಚದಲ್ಲಿ ಬೆಂಗಳೂರು ಹೊರವಲಯದ ವರ್ತೂರು ಕೋಡಿ ಪ್ಲೈಓವರ್ ರಸ್ತೆ ನಿರ್ಮಾಣ ಮಾಡುತ್ತೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ರು.

ಇಸ್ಕಾನ್‌ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಸ್ಕಾನ್‌ಗೆ ಜಾಗ ನೀಡಲು ಅನುಮೋದನೆ ಸಿಗಲಿಲ್ಲ ಎಂದು ಸಂಪುಟ ಸಭೆಯ ಬಳಿಕ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:59 pm, Thu, 12 May 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ