AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ‌!

ಬೆಂಗಳೂರಿನಲ್ಲಿ ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋಪಾತ್ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈತ ಒಂದು ತಿಂಗಳಿನಿಂದ ಸಂಜೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ. ಡಿ.2ರಂದೂ ಇದೇ ರೀತಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದಾಗ, ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರು ಇಂತಹ ಪ್ರಕರಣಗಳ ಬಗ್ಗೆ ತಕ್ಷಣ ದೂರು ನೀಡಲು ಪೊಲೀಸರು ಮನವಿ ಮಾಡಿದ್ದಾರೆ.

ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ‌!
ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 15, 2025 | 8:34 AM

Share

ಬೆಂಗಳೂರು, ಡಿಸೆಂಬರ್ 15: ಕಾಲ ಎಷ್ಟೇ ಮುಂದುವರೆದರೂ ಹೆಣ್ಣು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವ ಸುಧಾರಣೆಯೂ ಕಂಡಂತಿಲ್ಲ. ಕತ್ತಲಾದರೆ ಸಾಕು ರಸ್ತೆಯಲ್ಲಿ ಒಬ್ಬಂಟಿಯಾಗಿ ಓಡಾಡುವ ಮಹಿಳೆಗೆ ಭಯದಿಂದ ಬೆವರಿಳಿಯುತ್ತದೆ. ಬೆಂಗಳೂರಿನಲ್ಲಂತೂ (Bengaluru) ಹೆಣ್ಣು ಮಕ್ಕಳು ಒಂಟಿಯಾಗಿ ಓಡಾಡುವುದು ಕನಸೇ ಎಂಬಷ್ಟರಮಟ್ಟಿಗೆ ಸುರಕ್ಷತೆ ಹದಗೆಟ್ಟಿದೆ. ಹೀಗಿರುವಾಗ ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟುಮಾಡುತ್ತಿದ್ದ ವಿಚಿತ್ರ ಸೈಕೋಪಾತ್‌ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತಿ

ಆರೋಪಿ ವಿನೋದ್, ಕಳೆದ ಒಂದು ತಿಂಗಳಿಂದ ಸಂಜೆ 6 ಗಂಟೆಯ ಬಳಿಕ ಒಂಟಿಯಾಗಿ ಸಂಚರಿಸುವ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಒಬ್ಬಂಟಿಯಾಗಿ ನಡೆದುಕೊಂಡು ಬರುವವರನ್ನಷ್ಟೇ ಅಲ್ಲದೇ ಬೈಕ್​ನಲ್ಲಿ ಬರುವ ಹೆಣ್ಣು ಮಕ್ಕಳನ್ನೂ ಈತ ಬಿಡುತ್ತಿರಲಿಲ್ಲ. ಒಂಟಿ ಮಹಿಳೆಯರ ಹತ್ತಿರ ಹೋಗಿ ತಬ್ಬಿಕೊಳ್ಳುತ್ತಿದ್ದ ಆರೋಪಿ, ರಸ್ತೆಗುಂಡಿ ಬಳಿ ಮಹಿಳೆಯರು ಗಾಡಿಯನ್ನು ನಿಧಾನಿಸಿದಾಗಲೂ ಹೋಗಿ ತಬ್ಬಿಕೊಂಡು ಅಸಭದ್ಯವಾಗಿ ವರ್ತಿಸುತ್ತಿದ್ದ. ಅಷ್ಟಕ್ಕೆ ಸಮ್ಮನಾಗದ ಸೈಕೋ ವಿನೋದ್, ಮಹಿಳೆಯರ ಖಾಸಗಿ ಅಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ತಿಂಗಳಾನುಗಟ್ಟಲೆ ಈತನ ಕಾಮುಕತೆಗೆ ಬ್ರೇಕ್ ಬಿದ್ದಿರಲಿಲ್ಲ.

ಇದನ್ನೂ ಓದಿ ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಅಪರಿಚಿತ ವ್ಯಕ್ತಿ ಕಾಟಕ್ಕೆ ಬೇಸತ್ತ ವೈದ್ಯೆ

ಡಿಸೆಂಬರ್ 2ರಂದು ಸುಂಕದಕಟ್ಟೆಯ ಶ್ರೀನಿವಾಸ ಸರ್ಕಲ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ರಸ್ತೆ ಗುಂಡಿಯಿಂದಾಗಿ ವೇಗ ಕಡಿಮೆ ಮಾಡಿದಾಗ, ವಿನೋದ್ ತಕ್ಷಣ ಓಡಿ ಬಂದು ಆಕೆಯನ್ನು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆ ಹಿಂದೆ ಕಾರಿನಲ್ಲಿ ಬರುತ್ತಿದ್ದ ಮಹಿಳೆಯ ಪತಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಕಾಮುಕ ತಪ್ಪಿಸಿಕೊಂಡು ಪರಾರಿಯಾಗಿದ್ದ. ತಕ್ಷಣ 112ಕ್ಕೆ ಕರೆ ಮಾಡಲಾಗಿದ್ದು, ಹೊಯ್ಸಳ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸಲಾಗಿದೆ.

ಯಾರೂ ಕಂಪ್ಲೇಂಟ್ ಕೊಡಲ್ಲ ಎಂದೇ ಹೀಗೆ ಮಾಡಿದೆ ಎಂದ ಕಾಮುಕ

ಯಾರೂ ದೂರು ನೀಡುವುದಿಲ್ಲ ಎಂಬ ಧೈರ್ಯದಿಂದಲೇ ನಿರಂತರವಾಗಿ ಈ ರೀತಿಯ ಕೃತ್ಯ ನಡೆಸುತ್ತಿದ್ದುದಾಗಿ ವಿಚಾರಣೆ ವೇಳೆ ಪಾಪಿ ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿ ವಿನೋದ್‌ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಮಹಿಳೆಯರು ಇಂತಹ ಘಟನೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?