AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್
ಕಮಲ್ ಪಂತ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 25, 2021 | 3:38 PM

Share

ಬೆಂಗಳೂರು: ಡಿಸೆಂಬರ್ 31 ರಂದು ಬಂದ್‌ ನಡೆಸಲಿರುವ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ. ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವ ಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಬಲವಂತವಾಗಿ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಗೈಡ್‌ಲೈನ್ಸ್‌ನಂತೆ ಹೊಸ ವರ್ಷ ಆಚರಿಸಬೇಕು. ಹೋಟೆಲ್‌, ಪಬ್‌ ಎಲ್ಲಿಯೂ ವಿಶೇಷ ಕಾರ್ಯಕ್ರಮ ಇರಲ್ಲ. ಬುಕ್ಕಿಂಗ್‌ ಇದ್ದವರು ಮಾತ್ರ ಸೆಲೆಬ್ರೇಷನ್‌ಗೆ ತೆರಳಬೇಕು. ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್ 31ರಂದು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಓಪನ್ ಇರುತ್ತೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದ್ರೆ ಸಾರ್ವಜನಿಕವಾಗಿ ಹೊಸವರ್ಷಾಚರಣೆ ಮಾಡುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬೆಂಗಳೂರು ವೈಟ್ ಫೀಲ್ಡ್ ಪೊಲೀಸರಿಂದ ಒಳ್ಳೆಯ ಕಾರ್ಯಚರಣೆ ನಡೆದಿದೆ. ತಮಿಳುನಾಡಿನ ತಿರುಚಿಯ ರಾಂಜಿ ನಗರದಿಂದ ಅರೋಪಿಗಳು ಬಂದು ಅಟೆನ್ಷನ್ ಡೈವರ್ಷನ್ ಮಾಡಿ ಕಳ್ಳತನ ಮಾಡಿದ್ದವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಹಾಗು ಇತರೆಡೆ ನಡೆದಿದ್ದ ಒಟ್ಟು ನಲವತ್ತೆರಡು ಕೇಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ

ಇದನ್ನೂ ಓದಿ: ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

Published On - 3:22 pm, Sat, 25 December 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!