AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್
ಕಮಲ್ ಪಂತ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 25, 2021 | 3:38 PM

Share

ಬೆಂಗಳೂರು: ಡಿಸೆಂಬರ್ 31 ರಂದು ಬಂದ್‌ ನಡೆಸಲಿರುವ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ. ಒತ್ತಾಯಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವ ಇಚ್ಛೆಯಿಂದ ಬಂದ್ ಆಚರಿಸಿದರೆ ಯಾವುದೇ ಅಡ್ಡಿ ಇಲ್ಲ. ಬಲವಂತವಾಗಿ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರದ ಗೈಡ್‌ಲೈನ್ಸ್‌ನಂತೆ ಹೊಸ ವರ್ಷ ಆಚರಿಸಬೇಕು. ಹೋಟೆಲ್‌, ಪಬ್‌ ಎಲ್ಲಿಯೂ ವಿಶೇಷ ಕಾರ್ಯಕ್ರಮ ಇರಲ್ಲ. ಬುಕ್ಕಿಂಗ್‌ ಇದ್ದವರು ಮಾತ್ರ ಸೆಲೆಬ್ರೇಷನ್‌ಗೆ ತೆರಳಬೇಕು. ನ್ಯೂ ಇಯರ್ ಸೆಲೆಬ್ರೇಷನ್‌ಗೆ ನಿಯಮ ಪಾಲನೆ ಕಡ್ಡಾಯ ಇರಲಿದೆ. ಬ್ರಿಗೇಡ್‌ ರೋಡ್‌ನಲ್ಲಿ ಯಾವುದೇ ಜನರು ಸೇರುವಂತಿಲ್ಲ. ಜನಜೀವನ ನಾರ್ಮಲ್‌ ಆಗಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ ಎಂದು ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್ 31ರಂದು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಓಪನ್ ಇರುತ್ತೆ. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಜನ ಸಂಚಾರಕ್ಕೆ ಅವಕಾಶ ಇರಲಿದೆ. ಆದ್ರೆ ಸಾರ್ವಜನಿಕವಾಗಿ ಹೊಸವರ್ಷಾಚರಣೆ ಮಾಡುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಬೆಂಗಳೂರು ವೈಟ್ ಫೀಲ್ಡ್ ಪೊಲೀಸರಿಂದ ಒಳ್ಳೆಯ ಕಾರ್ಯಚರಣೆ ನಡೆದಿದೆ. ತಮಿಳುನಾಡಿನ ತಿರುಚಿಯ ರಾಂಜಿ ನಗರದಿಂದ ಅರೋಪಿಗಳು ಬಂದು ಅಟೆನ್ಷನ್ ಡೈವರ್ಷನ್ ಮಾಡಿ ಕಳ್ಳತನ ಮಾಡಿದ್ದವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಹಾಗು ಇತರೆಡೆ ನಡೆದಿದ್ದ ಒಟ್ಟು ನಲವತ್ತೆರಡು ಕೇಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಬಿಗಿ ಕ್ರಮ; ಪಬ್, ಹೋಟೆಲ್​ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಅವಕಾಶ

ಇದನ್ನೂ ಓದಿ: ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

Published On - 3:22 pm, Sat, 25 December 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ