AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ

ದೇಶಿ ಪ್ರಜೆ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಆರೋಪಿಯ ಸಂಪರ್ಕದಲ್ಲಿದ್ದವರ ಮೇಲೆ ಇಂದು ದಾಳಿ ನಡೆದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಮುಂದಿನ ದಿನದಲ್ಲಿ ಉಳಿದ ಮಾಹಿತಿ ಗೊತ್ತಾಗಲಿದೆ.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Updated By: ಆಯೇಷಾ ಬಾನು|

Updated on:Aug 30, 2021 | 1:53 PM

Share

ಬೆಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದು ಪೂರ್ವ ವಿಭಾಗದಲ್ಲಿ ಓರ್ವ ವಿದೇಶಿ ಪ್ರಜೆ ಅರೆಸ್ಟ್ ಆಗಿದ್ದಾನೆ. ಬಂಧಿತನಿಂದ 403 ಗ್ರಾಂ ಡ್ರಗ್ಸ್, 200 ಗ್ರಾಂ ಕೊಕೇನ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿದೇಶಿ ಪ್ರಜೆ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಆರೋಪಿಯ ಸಂಪರ್ಕದಲ್ಲಿದ್ದವರ ಮೇಲೆ ಇಂದು ದಾಳಿ ನಡೆದಿದೆ. ಈ ವೇಳೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಮುಂದಿನ ದಿನದಲ್ಲಿ ಉಳಿದ ಮಾಹಿತಿ ಗೊತ್ತಾಗಲಿದೆ.

ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ. ಏನು ಇರುತ್ತೋ ಅದರಂತೆ ನಾವು ಪ್ರಕರಣ ದಾಖಲಿಸುತ್ತೇವೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮಾಡುತ್ತಾರೆ ಎಂದು ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್​ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಿಂದಪುರ ಡ್ರಗ್ಸ್​ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ಸೋನಿಯಾ​, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದು ಮೂವರನ್ನೂ ವಶಕ್ಕೆ ಪಡೆಯಲಾಗಿದೆ.

ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದ್ದು, ಹಲವರಿಗೆ ಬಂಧನ ಭೀತಿ ಎದುರಾಗಿದೆ.

ಇದನ್ನೂ ಓದಿ: ತರಕಾರಿ ಮಾರುವವರ ಮೈಕ್ ಬಳಕೆಯಿಂದ ಆನ್​ಲೈನ್ ಕ್ಲಾಸ್​ಗೆ ತೊಂದರೆ: ಕಮಲ್ ಪಂತ್ ಫೇಸ್ಬುಕ್ ಲೈವ್​ನಲ್ಲಿ ಸಾರ್ವಜನಿಕರ ಅಳಲು

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

Published On - 1:44 pm, Mon, 30 August 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!