AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಶಾಕ್ ಕೊಟ್ಟ ಕಮಲ್‌ ಪಂತ್, 1817 ಸಿಬ್ಬಂದಿ ವರ್ಗಾವಣೆ

Kamal Pant: ನಗರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಕ್ರಮ ಚಟುವಟಿಕೆಗಳ ಜೊತೆ ಅಧಿಕಾರಿಗಳ ಮೇಲೆ ಕಮಿಷನರ್ ನಿಗಾ ಇಟ್ಟಿದ್ದು ಬೆಂಗಳೂರಿನ ಠಾಣೆಗಳ ಆಡಳಿತ ಮಾರ್ಪಾಡು ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಶಾಕ್ ಕೊಟ್ಟ ಕಮಲ್‌ ಪಂತ್, 1817 ಸಿಬ್ಬಂದಿ ವರ್ಗಾವಣೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on: Aug 05, 2021 | 7:38 AM

Share

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಕಮಲ್‌ ಪಂತ್ ಶಾಕ್ ಕೊಟ್ಟಿದ್ದಾರೆ. ಒಂದೇ ಕಡೆಯಿದ್ದು ಹಿಡಿತ ಸಾಧಿಸಿದ್ದವರಿಗೆ ಎತ್ತಂಗಡಿ ಮಾಡಿದ್ದಾರೆ. ಸುಮಾರು 1,817 ಸಿಬ್ಬಂದಿ ವರ್ಗಾವಣೆ ಮಾಡಿ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಕ್ರಮ ಚಟುವಟಿಕೆಗಳ ಜೊತೆ ಅಧಿಕಾರಿಗಳ ಮೇಲೆ ಕಮಿಷನರ್ ನಿಗಾ ಇಟ್ಟಿದ್ದು ಬೆಂಗಳೂರಿನ ಠಾಣೆಗಳ ಆಡಳಿತ ಮಾರ್ಪಾಡು ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್ ಇಂತಹ ನಿರ್ಧಾರ ಮಾಡಿದ್ದು ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯ ಮಾಹಿತಿ ಪಡೆದಿದ್ದಾರೆ. ಎಷ್ಟು ವರ್ಷದಿಂದಿದ್ದಾರೆ, ಅವರ ಕಾರ್ಯವೈಖರಿ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ.

7-8 ವರ್ಷದಿಂದ ಒಂದೇ ಠಾಣೆಯಲ್ಲಿದ್ದುಕೊಂಡು ಠಾಣೆಯಲ್ಲಿರುವ ಇತರ ಸಿಬ್ಬಂದಿ ಮೇಲೆ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಹಿಡಿತ ಸಾಧಿಸಿರುವ ಸಿಬ್ಬಂದಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಂಕಿಅಂಶಗಳ ಆಧಾರದಲ್ಲಿ ಸಿಬ್ಬಂದಿಗೆ ವರ್ಗಾವಣೆಯ ಬಿಸಿ ಮುಟ್ಟಿಸಿದ್ದಾರೆ. 127 ಪಿಎಸ್‌ಐ, 130 ಎಎಸ್‌ಐ, 999 ಸಿಹೆಚ್‌ಸಿ, 561 ಸಿಪಿಸಿ ಸೇರಿ ಒಟ್ಟು 1817 ಸಿಬ್ಬಂದಿಯ ವರ್ಗಾವಣೆ ಮಾಡಿ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತೀವ್ರ ಸಂಕಷ್ಟದ ನಡುವೆಯೂ ಬಿಗ್​ ಬಾಸ್​ ಓಟಿಟಿಗೆ ಬರ್ತಾರಾ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ?

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ