AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಶಾಕ್ ಕೊಟ್ಟ ಕಮಲ್‌ ಪಂತ್, 1817 ಸಿಬ್ಬಂದಿ ವರ್ಗಾವಣೆ

Kamal Pant: ನಗರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಕ್ರಮ ಚಟುವಟಿಕೆಗಳ ಜೊತೆ ಅಧಿಕಾರಿಗಳ ಮೇಲೆ ಕಮಿಷನರ್ ನಿಗಾ ಇಟ್ಟಿದ್ದು ಬೆಂಗಳೂರಿನ ಠಾಣೆಗಳ ಆಡಳಿತ ಮಾರ್ಪಾಡು ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಶಾಕ್ ಕೊಟ್ಟ ಕಮಲ್‌ ಪಂತ್, 1817 ಸಿಬ್ಬಂದಿ ವರ್ಗಾವಣೆ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on: Aug 05, 2021 | 7:38 AM

Share

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಕಮಲ್‌ ಪಂತ್ ಶಾಕ್ ಕೊಟ್ಟಿದ್ದಾರೆ. ಒಂದೇ ಕಡೆಯಿದ್ದು ಹಿಡಿತ ಸಾಧಿಸಿದ್ದವರಿಗೆ ಎತ್ತಂಗಡಿ ಮಾಡಿದ್ದಾರೆ. ಸುಮಾರು 1,817 ಸಿಬ್ಬಂದಿ ವರ್ಗಾವಣೆ ಮಾಡಿ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಕ್ರಮ ಚಟುವಟಿಕೆಗಳ ಜೊತೆ ಅಧಿಕಾರಿಗಳ ಮೇಲೆ ಕಮಿಷನರ್ ನಿಗಾ ಇಟ್ಟಿದ್ದು ಬೆಂಗಳೂರಿನ ಠಾಣೆಗಳ ಆಡಳಿತ ಮಾರ್ಪಾಡು ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್ ಇಂತಹ ನಿರ್ಧಾರ ಮಾಡಿದ್ದು ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಸಿಬ್ಬಂದಿಯ ಮಾಹಿತಿ ಪಡೆದಿದ್ದಾರೆ. ಎಷ್ಟು ವರ್ಷದಿಂದಿದ್ದಾರೆ, ಅವರ ಕಾರ್ಯವೈಖರಿ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ.

7-8 ವರ್ಷದಿಂದ ಒಂದೇ ಠಾಣೆಯಲ್ಲಿದ್ದುಕೊಂಡು ಠಾಣೆಯಲ್ಲಿರುವ ಇತರ ಸಿಬ್ಬಂದಿ ಮೇಲೆ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಹಿಡಿತ ಸಾಧಿಸಿರುವ ಸಿಬ್ಬಂದಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಂಕಿಅಂಶಗಳ ಆಧಾರದಲ್ಲಿ ಸಿಬ್ಬಂದಿಗೆ ವರ್ಗಾವಣೆಯ ಬಿಸಿ ಮುಟ್ಟಿಸಿದ್ದಾರೆ. 127 ಪಿಎಸ್‌ಐ, 130 ಎಎಸ್‌ಐ, 999 ಸಿಹೆಚ್‌ಸಿ, 561 ಸಿಪಿಸಿ ಸೇರಿ ಒಟ್ಟು 1817 ಸಿಬ್ಬಂದಿಯ ವರ್ಗಾವಣೆ ಮಾಡಿ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತೀವ್ರ ಸಂಕಷ್ಟದ ನಡುವೆಯೂ ಬಿಗ್​ ಬಾಸ್​ ಓಟಿಟಿಗೆ ಬರ್ತಾರಾ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?