AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿರುವ ಮಲಯಾಳಿಗರಿಗೆ ಕನ್ನಡ ಕಲಿಸಲು ಆರಂಭವಾಗಲಿದೆ ತರಗತಿ!

ಒಂದೆಡೆ ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ವಿವಾದಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನಲ್ಲಿರುವ ಮಲಯಾಳಂ ಭಾಷಿಕರಿಗೆ ಕನ್ನಡ ಕಲಿಸಲು ಹೊರಟಿದೆ. ಆದರೆ, ಇದು ಮಲಯಾಳಿ ಭಾಷಿಕರ ಮನವಿಯ ಮೇರೆಗೆ ಎಂಬುದು ಗಮನಾರ್ಹ. ಬೆಂಗಳೂರಿನಲ್ಲಿ ಯಾವಾಗ ಕನ್ನಡ ತರಗತಿಗಳು ಆರಂಭವಾಗಲಿವೆ ಮತ್ತು ರೂಪುರೇಷೆ ಹೇಗಿರಲಿದೆ ಎಂಬುದನ್ನು ತಿಳಿಯಲು ಮುಂದೆ ಓದಿ.

ಬೆಂಗಳೂರಿನಲ್ಲಿರುವ ಮಲಯಾಳಿಗರಿಗೆ ಕನ್ನಡ ಕಲಿಸಲು ಆರಂಭವಾಗಲಿದೆ ತರಗತಿ!
ಕನ್ನಡ ಅಭಿವೃದ್ಧಿ ಪ್ರಾಧಿಕಾರImage Credit source: Kannada Development Authority
ಗಣಪತಿ ಶರ್ಮಾ
|

Updated on: Jul 24, 2024 | 9:09 AM

Share

ಬೆಂಗಳೂರು, ಜುಲೈ 24: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬಂದ ಜನ ಜೀವನ ಮಾಡುತ್ತಿದ್ದಾರೆ. ಅದರಲ್ಲಿಯೂ ನೆರೆಯ ಕೇರಳ ರಾಜ್ಯದ ಮಲಯಾಳ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಕನ್ನಡ ಕಲಿಸಲು ಇದೀಗ ರಾಜ್ಯ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಿಶೇಷ ಯೋಜನೆ ರೂಪಿಸಿದೆ. ಬೆಂಗಳೂರಿನಲ್ಲಿ ಮಲಯಾಳಂ ಭಾಷಿಕರಿಗೆ ಕನ್ನಡ ಕಲಿಕೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಚಾಲನೆ ನೀಡಲಿದೆ.

ವಿಕಾಸ ಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ 20 ಕಲಿಕಾ ಕೇಂದ್ರ

ಈ ಉಪಕ್ರಮವು ಅನ್ಯಭಾಷಿಕರಿಗೆ ಭಾಷೆಯನ್ನು ಕಲಿಸಲು ನೆರವಾಗಲಿದೆ. ಇದಕ್ಕಾಗಿ ಬೆಂಗಳೂರು ನಗರದಾದ್ಯಂತ 20 ಕನ್ನಡ ಕಲಿಕಾ ಕೇಂದ್ರಗಳನ್ನು ಸ್ಥಾಪಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವಿಶಾಲ ಯೋಜನೆಯ ಭಾಗವಾಗಿದೆ.

ಉದ್ಘಾಟನಾ ಸಂದರ್ಭದ ತರಗತಿಗಳು ಮಲಯಾಳಂ ಮಿಷನ್, ಕೇರಳ ಸರ್ಕಾರದ ಸದಸ್ಯರನ್ನು ಒಳಗೊಂಡಿರುತ್ತವೆ. ಅವರು ಬೆಂಗಳೂರಿನಲ್ಲಿ ಮಲಯಾಳಂ ಮಾತನಾಡುವ ಸಮುದಾಯಕ್ಕೆ ಕನ್ನಡ ಶಿಕ್ಷಣವನ್ನು ಕೊಡುವಂತೆ ಮೊದಲು ವಿನಂತಿಸಿದವರು ಎನ್ನಲಾಗಿದೆ.

ವಿವಿಧ ವೃತ್ತಿಪರರಿಗೆ ಅವಕಾಶ ಕಲ್ಪಿಸಲು ವಾರಕ್ಕೆ ಮೂರು ಬಾರಿ ಸಂಜೆ 6 ರಿಂದ 7 ರವರೆಗೆ ತರಗತಿಗಳು ಮೂರು ತಿಂಗಳ ಕಾಲ ನಡೆಯಲಿವೆ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಈ ಹಿಂದೆಯೇ ತಿಳಿಸಿದ್ದರು ಎಂಬುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಆಗಸ್ಟ್ ಎರಡನೇ ವಾರದಲ್ಲಿ ನಿಯಮಿತ ತರಗತಿಗಳು ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಮಲಯಾಳಂ ಮಿಷನ್ ಮತ್ತು ಕನ್ನಡ ಕಲಿಕೆ ತರಗತಿಗಳ ಸಂಚಾಲಕ ಟಾಮಿ ಜೆ ಅಲುಂಕಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಕಲಿಕಾ ಕಾರ್ಯಕ್ರಮದ ಉದ್ಘಾಟನೆಯ ನಂತರ ತರಗತಿಗಳಿಗೆ ಸಂಬಂಧಿಸಿದ ವಿವರವಾದ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?