AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್ ಕರೆ

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿದ್ದರ ಜತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.

ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ: ಕ್ಯಾಲಿಫೋರ್ನಿಯಾ ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್ ಕರೆ
ಬರ್ಟ್ ಮುಲ್ಲರ್ (ವೈರಲ್ ವಿಡಿಯೋ ಸ್ಕ್ರೀನ್​​ಗ್ರ್ಯಾಬ್)Image Credit source: Twitter
Ganapathi Sharma
|

Updated on: Apr 29, 2025 | 12:52 PM

Share

ಬೆಂಗಳೂರು, ಏಪ್ರಿಲ್ 29: ‘ಬೆಂಗಳೂರು (Bengalru) ಎಂಬುದು ಭಾರತದ ಅಮೆರಿಕ (America of India). ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ (Bert Mueller) ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.

13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ
Image
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
Image
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
Image
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
Image
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಕನ್ನಡದ ಬಗ್ಗೆ ಬರ್ಟ್ ಮುಲ್ಲರ್ ಹೇಳಿದ್ದೇನು?

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.

ಬರ್ಟ್ ಮುಲ್ಲರ್ ಕನ್ನಡ ಮಾತಿನ ವಿಡಿಯೋ

ಕನ್ನಡದ ನಟರಾದ ಅಂಬರೀಷ್, ಕಿಚ್ಚ ಸುದೀಪ್ ಅವರ ಕೆಲವು ಸಿನಿಮಾಗಳನ್ನು ನೋಡಿದ್ದಾಗಿಯೂ ಬರ್ಟ್ ಮುಲ್ಲರ್ ಹೇಳಿದ್ದಾರೆ.

ಇದನ್ನೂ ಓದಿ: ಉಗ್ರರ ದಾಳಿ: ಬೆಂಗಳೂರಿನಿಂದ ಕಾಶ್ಮೀರಕ್ಕೆ ತೆರಳುವ ವಿಮಾನ ಪ್ರಯಾಣ ದರ ಇಳಿಕೆ

35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್‌ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್​ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?