AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ವಿಚಾರ ಕೈಬಿಟ್ಟ ಕಸಾಪ

ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆಗೆ ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಕನ್ನಡ ಸಾಹಿತ್ಯ ಪರಿಷತ್ ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ವಿಚಾರ ಕೈಬಿಟ್ಟಿದೆ.

ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ವಿಚಾರ ಕೈಬಿಟ್ಟ ಕಸಾಪ
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ
TV9 Web
| Edited By: |

Updated on:Sep 12, 2022 | 5:58 PM

Share

ಬೆಂಗಳೂರು: ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆಗೆ ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಕನ್ನಡ ಸಾಹಿತ್ಯ ಪರಿಷತ್ ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ವಿಚಾರ ಕೈಬಿಟ್ಟಿದೆ. ಕಸಾಪ ಮಹಾಕವಿ ಪಂಪ ರಸ್ತೆ ಹೆಸರು ಬದಲಾಯಿಸಿ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಅಂತಾ ಮರುನಾಮಕರಣಕ್ಕೆ ಮುಂದಾಗಿತ್ತು.ಜೈನ ಸಮುದಾಯದಿಂದ ತೀವ್ರ ವಿರೋಧ ಬೆನ್ನಲೆ ಮಹಾಕವಿ ಪಂಪನ ಹೆಸರು ಬದಲಾಯಿಸುವ ಚಿಂತನೆ ಕಸಾಪ ಕೈಬಿಟ್ಟಿದೆ.

ಈ ಬಗ್ಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಹೆಸರಿಡುವ ಬಗ್ಗೆ ಸಲಹೆ ಬಂದಿತ್ತು. ನಾವು ಯಾವುದೇ ಕಾರಣಕ್ಕೆ ಪಂಪ ಮಹಾಕವಿ ರಸ್ತೆ ಹೆಸರು ಬದಲಾಯಿಸಲ್ಲ. ಮಹಾಕವಿ ಪಂಪನ ಹೆಸರೇ ಇರುತ್ತೆ ಎಂದು ತಿಳಿಸಿದರು.

ನಾವು ನಾಡೋಜ ಪಂಪ ಮಹಾಕವಿ ರಸ್ತೆ ಅಂತಾನೇ ಮುಂದುವರೆಸುತ್ತೇವೆ. ಕನ್ನಡಕ್ಕೆ ಜೈನ ಕವಿ ಪಂಪನ ಕೊಡುಗೆ ಅಪಾರವಾಗಿದೆ. ಮಹಾಕವಿ ಪಂಪ ರಸ್ತೆಯ ಹೆಸರು ಬದಲಾವಣೆ ಇಲ್ಲ ಎಂದು ಟಿವಿ9ಗೆ ಹೇಳಿದ್ದಾರೆ.

ಹಿನ್ನೆಲೆ

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ’ ಎನ್ನುವ ಶ್ರೇಯಸ್ಸು ಪಡೆದಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕೇಂದ್ರ ಕಚೇರಿ ಇರುವ ರಸ್ತೆಯ ಹೆಸರು ಬದಲಿಸಬೇಕು ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್​ ಜೋಶಿ  ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ವಿದ್ಯಮಾನವು ಇದೀಗ ಕನ್ನಡ ಬೌದ್ಧಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು., ‘ಹೆಸರು ಬದಲಿಸುವುದು ಸರಿಯಾದ ನಿರ್ಧಾರವಲ್ಲ’ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಬೆಂಗಳೂರು ಚಾಮರಾಜಪೇಟೆಯ ಮಿಂಟೊ ಆಸ್ಪತ್ರೆ ಮತ್ತು ಮಕ್ಕಳ ಕೂಟ ಉದ್ಯಾನದ ನಡುವಣ ರಸ್ತೆಗೆ ‘ಸಾಹಿತ್ಯ ಪರಿಷತ್ ರಸ್ತೆ’ ಎಂದು ಹೊಸ ನಾಮಕರಣ ಮಾಡಬೇಕು ಎಂದು ಮಹೇಶ್​ಜೋಶಿ ಕೋರಿದ್ದಾರೆ. ಈ ಇಡೀ ರಸ್ತೆಯನ್ನು ‘ಕನ್ನಡಮಯ’ಗೊಳಿಸಲಾಗುವುದು ಎಂದು ಸಾಹಿತ್ಯ ಪರಿಷತ್ ತಿಳಿಸಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂಬ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಹೇಳಿಕೆಯನ್ನು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿತ್ತು.

‘ಹೆಸರು ಬದಲಿಸುವ ಪ್ರಸ್ತಾವ ಕುರಿತು ಚರ್ಚಿಸಲು ಈ ರಸ್ತೆಯಲ್ಲಿರುವ ಇತರ ಸಂಘ ಸಂಸ್ಥೆಗಳು, ಕಚೇರಿಗಳ ಪ್ರತಿನಿಧಿಗಳನ್ನೂ ಆಹ್ವಾನಿಸಿದ್ದೇವೆ. ಪೊಲೀಸ್ ಠಾಣೆ, ಕರ್ನಾಟಕ ಸಂಸ್ಕೃತ ವಿವಿ, ಕನ್ನಡ ದಿನಪತ್ರಿಕೆ, ಕೆಲ ಬ್ಯಾಂಕ್​ಗಳು, ಉದ್ಯಾನವನ, ಮಿಂಟೊ ಕಣ್ಣಿನ ಅಸ್ಪತ್ರೆ ಸೇರಿದಂತೆ ಎಲ್ಲರ ಗಮನಕ್ಕೆ ತಂದಿದ್ದೇವೆ’ ಎಂದು ಮಹೇಶ್ ಜೋಶಿ ಹೇಳಿದ್ದಾರೆ. ಕೆಲವು ದೇಶಗಳಲ್ಲಿ ನಿರ್ದಿಷ್ಟ ಥೀಮ್​ಗಳ ಮೇಲೆ ರಸ್ತೆಗಳನ್ನು ರೂಪಿಸಿದ್ದಾರೆ. ಅಂಥ ಹಲವು ಉದಾಹರಣೆಗಳನ್ನು ಗಮನಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಈ ರಸ್ತೆಯು ಕನ್ನಡ ಪ್ರೇಮಿಗಳ ಕಣ್ಣಿಗೆ ಹಬ್ಬದಂತೆ ಆಗುತ್ತದೆ. ಬೆಂಗಳೂರಿಗೆ ಬರುವ ಪ್ರತಿಯೊಬ್ಬರೂ ಸಾಹಿತ್ಯ ಪರಿಷತ್​ಗೆ ಭೇಟಿ ನೀಡುವಂತೆ ಮಾಡುತ್ತೇವೆ ಎಂದು ಜೋಶಿ ಹೇಳಿದ್ದರು.

ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ಖ್ಯಾತ ಸಾಹಿತಿಗಳ ಪ್ರತಿಮೆಗಳು, ಕನ್ನಡದ ಲೈವ್ ಹಾಡುಗಳು ಮತ್ತು ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗುವುದು. ಜನಪ್ರಿಯ ಕನ್ನಡಪರ ಹೇಳಿಕೆಗಳನ್ನು ಅಳವಡಿಸಲಾಗುವುದು ಎಂದು ಸಾಹಿತ್ಯ ಪರಿಷತ್ ಹೇಳಿತ್ತು.

ಪರಿಷತ್​ನ ನಿರ್ಧಾರಕ್ಕೆ ಕರ್ನಾಟಕ ಜೈನ್ ಅಸೋಷಿಯೇಷನ್ ತೀರ್ವ ವಿರೋಧ ವ್ಯಕ್ತಪಡಿಸಿತ್ತು. ಈ ನಿರ್ಧಾರ ಜೈನ್ ಕವಿಗೆ ಮಾಡುವ ಅವಮಾನ ಅಂತಾ ವಿರೋಧ ವ್ಯಕ್ತಪಡಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಸಾಹಿತಿಗಳಿಂದಲೂ ವಿರೋಧ ವ್ಯಕ್ತವಾಗಿತ್ತು.

ಕನ್ನಡ ಸಾಹಿತ್ಯದಲ್ಲಿ ಆದಿ ಕವಿ ಪಂಪಾ ಅವರಿಗೆ ವಿಶೇಷ ಅಸ್ಮಿತೆ ಇದೆ. ಜೈನ್ ಕವಿ ಪಂಪನ ಹೆಸರು ಬದಲಾಯಿಸುವ ಚಿಂತನೆ ಕೈಬಿಡಬೇಕೆಂದು ಒತ್ತಾಯ ಮಾಡಿದ್ದರು. ಜೈನ ಸಮುದಾಯ ಕಸಪಾ ಅಧ್ಯಕ್ಷರ ಜೊತೆ ವಾಗ್ವದಕ್ಕೆ ಮುಂದಾಗಿತ್ತು.

ಪಂಪನ ಹೆಸರು ಬದಲಾಯಿಸದಂತೆ ಅಧ್ಯಕ್ಷರ ಜೊತೆ ಮಾತಿನ ಚಕುಮಕಿ ನಡೆದಿತ್ತು. ಬೇರೆ ಬೇರೆ ಜಿಲ್ಲಗಳಿಂದ ಬಂದಿರುವ ಜೈನ್ ಸಮುದಾಯದ ಜಿಲ್ಲಾ ಅಧ್ಯಕ್ಷರುಗಳಿಂದ ಯಾವುದೇ ಕಾರಣಕ್ಕೂ ಜೈನ್ ಕವಿ ಪಂಪನ ಹೆಸರಿನ ರಸ್ತೆ ಬದಲಾಯಿಸದಂತೆ ಕಸಾಪ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 12 September 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ