AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷದ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ: ಸಂಪ್ರದಾಯದಂತೆ ದರ್ಗಾಕ್ಕೆ ಭೇಟಿ

ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನೂ ಈ ಬಾರಿ ಅನುಸರಿಸಲಾಯಿತು. ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿತ್ತು.

2 ವರ್ಷದ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ: ಸಂಪ್ರದಾಯದಂತೆ ದರ್ಗಾಕ್ಕೆ ಭೇಟಿ
ಬೆಂಗಳೂರು ಕರಗ ಉತ್ಸವ (ಸಂಗ್ರಹ ಚಿತ್ರ)
TV9 Web
| Edited By: |

Updated on: Apr 17, 2022 | 7:14 AM

Share

ಬೆಂಗಳೂರು: ಕರ್ನಾಟಕದ ಅತ್ಯಂತ ಪ್ರಮುಖ ಧಾರ್ಮಿಕ ಆಚರಣೆಯಾಗಿರುವ ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ಕರಗ (Bengaluru Karaga) ಭಾನುವಾರ (ಏಪ್ರಿಲ್ 17) ನಸುಕಿನಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನೂ ಅನುಸರಿಸಲಾಯಿತು. ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿತ್ತು. ಒಬ್ಬ ಡಿಸಿಪಿ, ಐವರು ಎಸಿಪಿ, 15 ಇನ್​ಸ್ಪೆಕ್ಟರ್​ಗಳು, 30 ಪಿಎಸ್​ಐ, 300 ಕಾನ್​ಸ್ಟೆಬಲ್​ಗಳು ಮತ್ತು 6 ಕೆಎಸ್​ಆರ್​ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.

ಎರಡು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ ನಡೆಯಿತು. ದೇಗುಲ ಆವರಣದಲ್ಲಿ ಧಾರ್ಮಿಕ ವಿಧಿಗಳು ನಡೆದವು. ನಸುಕಿನ ಎರಡು ಗಂಟೆ ವೇಳೆಗೆ ತಾಯಿ ದ್ರೌಪದಿ ದೇವಿಯ ಅಪ್ಪಣೆಯ ನಂತರ ಕರಗವನ್ನು ಭಕ್ತರು ಕಣ್ತುಂಬಿಕೊಂಡರು. ಕರಗ ಉತ್ಸವದಲ್ಲಿ ಪಾಲ್ಗೊಂಡಿದ್ದ ವೀರಕುಮಾರರ ನಡುವೆ ಪುನೀತ್ ರಾಜ್ ಕುಮಾರ್ ಚಿತ್ರಗಳು ಕಾಣಿಸಿದವು. ವೀರಕುಮಾರರು ಅಲಗು ಸೇವೆ (ಎದೆಗೆ ಕತ್ತಿ ತಾಗಿಸಿಕೊಳ್ಳುವುದು) ಮಾಡಿದರು. ಪ್ರತಿಬಾರಿಯಂತೆ ಈ ಬಾರಿಯೂ ಕರಗ ಮಹೋತ್ಸವವು ಮಸ್ತಾನ್ ದರ್ಗಾಕ್ಕೆ ಕರಗ ಪ್ರವೇಶಿಸಿತು. ದರ್ಗಾಕ್ಕೆ ಮುಸ್ಲಿಮರು ಸಾಂಪ್ರದಾಯಿಕ ಸ್ವಾಗತ ನೀಡಿದರು. ಕರಗ ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದ ಮುಸ್ಲಿಮರು ಹಿಂದೂಗಳಿಗೆ ಸಿಹಿತಿಂಡಿ, ನೀರು, ಡ್ರೈಫ್ರೂಟ್ಸ್ ನೀಡಿ ಸ್ವಾಗತಿಸಿದರು.

ದರ್ಗಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದರ್ಗಾದ ಮುಜಾವರ್ ಮಹಮ್ಮದ್ ಗೌಸ್, ‘ಹಿಂದೂ-ಮುಸ್ಲಿಮರ ಪ್ರೀತಿ ಇದು. ಬೆಂಗಳೂರು ಕರಗ ಕರ್ನಾಟಕದ ದೊಡ್ಡ ಹಬ್ಬ. ಈ ಬಾರಿ ರಂಜಾನ್ ಮತ್ತು ಕರಗ ಒಟ್ಟಿಗೆ ಬಂದಿದೆ. ಎಲ್ಲವೂ ಒಳ್ಳೆಯ ರೀತಿಯಲ್ಲಿ ನಡೆದಿದೆ. ದರ್ಗಾ ಸುತ್ತಲೂ ಮೂರು ಸುತ್ತು ಕರಗ ಪ್ರದಕ್ಷಿಣೆ ಹಾಕಿತು. ಕೆಲವರು ಕರಗ ಬರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಅದೆಲ್ಲಾ ರಾಜಕೀಯ ಅಷ್ಟೇ’ ಎಂದು ಹೇಳಿದರು.

ಕರಗ ನೋಡಲು ದರ್ಗಾ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಜಮಾಯಿಸಿದ್ದರು. ಅವರೂ ಸಹ ‘ಗೋವಿಂದಾ ಗೋವಿಂದಾ’ ಎಂದು ಕೂಗಿದರು. ದರ್ಗಾದಿಂದ ಕರಗ ಗಾಂಧಿನಗರದ ಅಣ್ಣಮ್ಮ ದೇವಸ್ಥಾನ ತಲುಪಿತು.

ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಉತ್ಸವಕ್ಕೆ ಅಧಿಕೃತ ಚಾಲನೆ; ರಥದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ

ಇದನ್ನೂ ಓದಿ: ಸಂಚಾರದಟ್ಟಣೆಗೆ ಕಾರಣವಾಗದಂತೆ ಬೆಂಗಳೂರು ಕರಗ ಮೆರವಣಿಗೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?