AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷದ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ: ಸಂಪ್ರದಾಯದಂತೆ ದರ್ಗಾಕ್ಕೆ ಭೇಟಿ

ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನೂ ಈ ಬಾರಿ ಅನುಸರಿಸಲಾಯಿತು. ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿತ್ತು.

2 ವರ್ಷದ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ: ಸಂಪ್ರದಾಯದಂತೆ ದರ್ಗಾಕ್ಕೆ ಭೇಟಿ
ಬೆಂಗಳೂರು ಕರಗ ಉತ್ಸವ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Apr 17, 2022 | 7:14 AM

Share

ಬೆಂಗಳೂರು: ಕರ್ನಾಟಕದ ಅತ್ಯಂತ ಪ್ರಮುಖ ಧಾರ್ಮಿಕ ಆಚರಣೆಯಾಗಿರುವ ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ಕರಗ (Bengaluru Karaga) ಭಾನುವಾರ (ಏಪ್ರಿಲ್ 17) ನಸುಕಿನಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ದರ್ಗಾಕ್ಕೆ ಭೇಟಿ ನೀಡುವ ಸಂಪ್ರದಾಯವನ್ನೂ ಅನುಸರಿಸಲಾಯಿತು. ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿತ್ತು. ಒಬ್ಬ ಡಿಸಿಪಿ, ಐವರು ಎಸಿಪಿ, 15 ಇನ್​ಸ್ಪೆಕ್ಟರ್​ಗಳು, 30 ಪಿಎಸ್​ಐ, 300 ಕಾನ್​ಸ್ಟೆಬಲ್​ಗಳು ಮತ್ತು 6 ಕೆಎಸ್​ಆರ್​ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ದೇವಸ್ಥಾನದ ಸುತ್ತಮುತ್ತಲಿನ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.

ಎರಡು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅದ್ಧೂರಿ ಕರಗ ಶಕ್ತ್ಯೋತ್ಸವ ನಡೆಯಿತು. ದೇಗುಲ ಆವರಣದಲ್ಲಿ ಧಾರ್ಮಿಕ ವಿಧಿಗಳು ನಡೆದವು. ನಸುಕಿನ ಎರಡು ಗಂಟೆ ವೇಳೆಗೆ ತಾಯಿ ದ್ರೌಪದಿ ದೇವಿಯ ಅಪ್ಪಣೆಯ ನಂತರ ಕರಗವನ್ನು ಭಕ್ತರು ಕಣ್ತುಂಬಿಕೊಂಡರು. ಕರಗ ಉತ್ಸವದಲ್ಲಿ ಪಾಲ್ಗೊಂಡಿದ್ದ ವೀರಕುಮಾರರ ನಡುವೆ ಪುನೀತ್ ರಾಜ್ ಕುಮಾರ್ ಚಿತ್ರಗಳು ಕಾಣಿಸಿದವು. ವೀರಕುಮಾರರು ಅಲಗು ಸೇವೆ (ಎದೆಗೆ ಕತ್ತಿ ತಾಗಿಸಿಕೊಳ್ಳುವುದು) ಮಾಡಿದರು. ಪ್ರತಿಬಾರಿಯಂತೆ ಈ ಬಾರಿಯೂ ಕರಗ ಮಹೋತ್ಸವವು ಮಸ್ತಾನ್ ದರ್ಗಾಕ್ಕೆ ಕರಗ ಪ್ರವೇಶಿಸಿತು. ದರ್ಗಾಕ್ಕೆ ಮುಸ್ಲಿಮರು ಸಾಂಪ್ರದಾಯಿಕ ಸ್ವಾಗತ ನೀಡಿದರು. ಕರಗ ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದ ಮುಸ್ಲಿಮರು ಹಿಂದೂಗಳಿಗೆ ಸಿಹಿತಿಂಡಿ, ನೀರು, ಡ್ರೈಫ್ರೂಟ್ಸ್ ನೀಡಿ ಸ್ವಾಗತಿಸಿದರು.

ದರ್ಗಾ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದರ್ಗಾದ ಮುಜಾವರ್ ಮಹಮ್ಮದ್ ಗೌಸ್, ‘ಹಿಂದೂ-ಮುಸ್ಲಿಮರ ಪ್ರೀತಿ ಇದು. ಬೆಂಗಳೂರು ಕರಗ ಕರ್ನಾಟಕದ ದೊಡ್ಡ ಹಬ್ಬ. ಈ ಬಾರಿ ರಂಜಾನ್ ಮತ್ತು ಕರಗ ಒಟ್ಟಿಗೆ ಬಂದಿದೆ. ಎಲ್ಲವೂ ಒಳ್ಳೆಯ ರೀತಿಯಲ್ಲಿ ನಡೆದಿದೆ. ದರ್ಗಾ ಸುತ್ತಲೂ ಮೂರು ಸುತ್ತು ಕರಗ ಪ್ರದಕ್ಷಿಣೆ ಹಾಕಿತು. ಕೆಲವರು ಕರಗ ಬರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಅದೆಲ್ಲಾ ರಾಜಕೀಯ ಅಷ್ಟೇ’ ಎಂದು ಹೇಳಿದರು.

ಕರಗ ನೋಡಲು ದರ್ಗಾ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಜಮಾಯಿಸಿದ್ದರು. ಅವರೂ ಸಹ ‘ಗೋವಿಂದಾ ಗೋವಿಂದಾ’ ಎಂದು ಕೂಗಿದರು. ದರ್ಗಾದಿಂದ ಕರಗ ಗಾಂಧಿನಗರದ ಅಣ್ಣಮ್ಮ ದೇವಸ್ಥಾನ ತಲುಪಿತು.

ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಉತ್ಸವಕ್ಕೆ ಅಧಿಕೃತ ಚಾಲನೆ; ರಥದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ

ಇದನ್ನೂ ಓದಿ: ಸಂಚಾರದಟ್ಟಣೆಗೆ ಕಾರಣವಾಗದಂತೆ ಬೆಂಗಳೂರು ಕರಗ ಮೆರವಣಿಗೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ