AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಈ ವೇಳೆ ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಎಲ್ಲರನ್ನೂ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?
ಕರವೇ ಕಾರ್ಯಕರ್ತರ ಪ್ರತಿಭಟನೆ (ಸಂಗ್ರಹ ಚಿತ್ರ)
ಕಿರಣ ಹೆಚ್​. ವಿ.
| Edited By: |

Updated on: Dec 29, 2023 | 3:15 PM

Share

ಬೆಂಗಳೂರು, ಡಿಸೆಂಬರ್​ 29: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)  ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಬಂದ್​ ಮಾಡುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಎಲ್ಲರನ್ನೂ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ರೆ ಬೆಂಗಳೂರು ನಗರ ಬಂದ್​ ಕರೆಗೆ ಮತ್ತೊಂದು ಸುತ್ತಿನ ಸಭೆ ಮಾಡಲಾಗುವುದು ಎನ್ನಲಾಗಿದೆ. ಫೆ.28ಕ್ಕೆ ಕನ್ನಡ ನಾಮಫಲಕ ಕಡ್ಡಾಯ ಆಗಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿರುದ್ಧ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ

ನಿನ್ನೆ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರು ಅಕ್ಷರಶಃ ಕೆರಳಿ ಕೆಂಡವಾಗಿದ್ದರು. ನಾಮಫಲಕಗಳಲ್ಲಿ ಕನ್ನಡ ಕಡೆಗಣಿಸಿದ್ದ ಉದ್ಯಮಿಗಳು, ವರ್ತಕರಿಗೆ ಬಿಸಿ ಮುಟ್ಟಿಸಿದ್ದರು. ಇಂಗ್ಲಿಷ್ ಬೋರ್ಡ್​ಗಳನ್ನ ಪುಡಿಗಟ್ಟಿದ್ದರು. ಹೀಗಾಗಿ ಕರವೇ ಕಾರ್ಯಕರ್ತರ ವಿರುದ್ಧ ಪೊಲೀಸ್​ ಕೇಸ್​ ದಾಖಲಿಸಿಕೊಂಡಿದ್ದರು. 10 ಠಾಣೆಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಕರವೇ ನಾರಾಯಣಗೌಡ ಸೇರಿದಂತೆ 53 ಕಾರ್ಯಕರ್ತರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಿನ್ನೆಯೇ ಹೋರಾಟಗಾರರನ್ನ ಬಂಧಿಸಿದ್ದ ಪೊಲೀಸ್​​ ಇವತ್ತು ನಸುಕಿನ ಜಾವ ನಾರಾಯಣಗೌಡ ಸೇರಿ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಬಳಿಕ ಪರಪ್ಪನ ಅಗ್ರಹಾರದ ಕಾರಗೃಹಕ್ಕೆ ಶಿಫ್ಟ್ ಮಾಡಿದ್ದರು.

ಇದನ್ನೂ ಓದಿ: ಕರವೇ ಪ್ರತಿಭಟನೆ ಸಂಬಂಧ 10 FIR ದಾಖಲು, 53 ಜನರು ಅರೆಸ್ಟ್: ಕಮಿಷನರ್​​ ಬಿ ದಯಾನಂದ್

ಅತ್ತ ನಾರಾಯಣಗೌಡ ಅರೆಸ್ಟ್ ಆಗ್ತಿದ್ದಂತೆ ಇತ್ತ ಕಾರ್ಯಕರ್ತರು ಬೀದಿಗೆ ಇಳಿದಿದ್ದರು. ಮೆಡಿಕಲ್ ಟೆಸ್ಟ್​ಗೆ ಕರೆದೊಯ್ಯುವಾಗ ಕೋಗಿಲು ಕ್ರಾಸ್ ಬಳಿ ಹೈಡ್ರಾಮವೇ ನಡೆದಿತ್ತು. ನಾರಾಯಣಗೌಡರನ್ನ ಕರೆದೊಯ್ಯುತ್ತಿದ್ದ ಬಸ್​​​ಗೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಪೊಲೀಸ್​ ಅರೆಸ್ಟ್ ಮಾಡಲು ಮುಂದಾಗ್ತಿದ್ದಂತೆ ಕೆಲವರು ಓಡಿ ಹೋಗಿದ್ದಾರೆ.

ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೋರ್ಡ್​ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ. ಜಾಹಿರಾತು ಫಲಕಗಳಲ್ಲೂ ಇದು ಜಾರಿಗೆ ಬರಬೇಕು. ಈ ಬಗ್ಗೆ ಶಾಂತಿಯುತ ಹೋರಾಟ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಕಾನೂನು ಕೈಗೆತ್ತಿಕೊಂಡರೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು