ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಈ ವೇಳೆ ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಎಲ್ಲರನ್ನೂ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?
ಕರವೇ ಕಾರ್ಯಕರ್ತರ ಪ್ರತಿಭಟನೆ (ಸಂಗ್ರಹ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2023 | 3:15 PM

ಬೆಂಗಳೂರು, ಡಿಸೆಂಬರ್​ 29: ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)  ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಗರದಲ್ಲಿ ಇಂದು ಕನ್ನಡ ಹೋರಾಟಗಾರರ ಖಂಡನಾ ಸಭೆ ಮಾಡಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಬಂದ್​ ಮಾಡುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಎಲ್ಲರನ್ನೂ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ರೆ ಬೆಂಗಳೂರು ನಗರ ಬಂದ್​ ಕರೆಗೆ ಮತ್ತೊಂದು ಸುತ್ತಿನ ಸಭೆ ಮಾಡಲಾಗುವುದು ಎನ್ನಲಾಗಿದೆ. ಫೆ.28ಕ್ಕೆ ಕನ್ನಡ ನಾಮಫಲಕ ಕಡ್ಡಾಯ ಆಗಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿರುದ್ಧ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಕರವೇ ನಾರಾಯಾಣಗೌಡ ಬಂಧನ: ಸರ್ಕಾರದ ಧೋರಣೆಯನ್ನ ನಾವು ಖಂಡಿಸುತ್ತೇವೆ; ಸಾಹಿತಿ ದೊಡ್ಡರಂಗೇಗೌಡ

ನಿನ್ನೆ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರರು ಅಕ್ಷರಶಃ ಕೆರಳಿ ಕೆಂಡವಾಗಿದ್ದರು. ನಾಮಫಲಕಗಳಲ್ಲಿ ಕನ್ನಡ ಕಡೆಗಣಿಸಿದ್ದ ಉದ್ಯಮಿಗಳು, ವರ್ತಕರಿಗೆ ಬಿಸಿ ಮುಟ್ಟಿಸಿದ್ದರು. ಇಂಗ್ಲಿಷ್ ಬೋರ್ಡ್​ಗಳನ್ನ ಪುಡಿಗಟ್ಟಿದ್ದರು. ಹೀಗಾಗಿ ಕರವೇ ಕಾರ್ಯಕರ್ತರ ವಿರುದ್ಧ ಪೊಲೀಸ್​ ಕೇಸ್​ ದಾಖಲಿಸಿಕೊಂಡಿದ್ದರು. 10 ಠಾಣೆಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಕರವೇ ನಾರಾಯಣಗೌಡ ಸೇರಿದಂತೆ 53 ಕಾರ್ಯಕರ್ತರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಿನ್ನೆಯೇ ಹೋರಾಟಗಾರರನ್ನ ಬಂಧಿಸಿದ್ದ ಪೊಲೀಸ್​​ ಇವತ್ತು ನಸುಕಿನ ಜಾವ ನಾರಾಯಣಗೌಡ ಸೇರಿ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಬಳಿಕ ಪರಪ್ಪನ ಅಗ್ರಹಾರದ ಕಾರಗೃಹಕ್ಕೆ ಶಿಫ್ಟ್ ಮಾಡಿದ್ದರು.

ಇದನ್ನೂ ಓದಿ: ಕರವೇ ಪ್ರತಿಭಟನೆ ಸಂಬಂಧ 10 FIR ದಾಖಲು, 53 ಜನರು ಅರೆಸ್ಟ್: ಕಮಿಷನರ್​​ ಬಿ ದಯಾನಂದ್

ಅತ್ತ ನಾರಾಯಣಗೌಡ ಅರೆಸ್ಟ್ ಆಗ್ತಿದ್ದಂತೆ ಇತ್ತ ಕಾರ್ಯಕರ್ತರು ಬೀದಿಗೆ ಇಳಿದಿದ್ದರು. ಮೆಡಿಕಲ್ ಟೆಸ್ಟ್​ಗೆ ಕರೆದೊಯ್ಯುವಾಗ ಕೋಗಿಲು ಕ್ರಾಸ್ ಬಳಿ ಹೈಡ್ರಾಮವೇ ನಡೆದಿತ್ತು. ನಾರಾಯಣಗೌಡರನ್ನ ಕರೆದೊಯ್ಯುತ್ತಿದ್ದ ಬಸ್​​​ಗೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಪೊಲೀಸ್​ ಅರೆಸ್ಟ್ ಮಾಡಲು ಮುಂದಾಗ್ತಿದ್ದಂತೆ ಕೆಲವರು ಓಡಿ ಹೋಗಿದ್ದಾರೆ.

ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೋರ್ಡ್​ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ. ಜಾಹಿರಾತು ಫಲಕಗಳಲ್ಲೂ ಇದು ಜಾರಿಗೆ ಬರಬೇಕು. ಈ ಬಗ್ಗೆ ಶಾಂತಿಯುತ ಹೋರಾಟ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಕಾನೂನು ಕೈಗೆತ್ತಿಕೊಂಡರೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ