AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Diwas: ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಸಿಎಂ ಬಿ.ಎಸ್.ಯಡಿಯೂರಪ್ಪ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ. ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಸಿಎಂ ಬಿಎಸ್‌ವೈ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Kargil Vijay Diwas: ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ
TV9 Web
| Edited By: ಆಯೇಷಾ ಬಾನು|

Updated on: Jul 26, 2021 | 12:01 PM

Share

ಬೆಂಗಳೂರು: ಜಮ್ಮು ಕಾಶ್ಮೀರದ ಕಾರ್ಗಿಲ್ನಲ್ಲಿ ನಡೆದ ಯುದ್ದದಲ್ಲಿ ಪಾಕಿಸ್ತಾನವನ್ನು ಭಾರತದ ವೀರ ಯೋಧರು ಸದೆ ಬಡಿದು, ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದ ದಿನವೇ ಕಾರ್ಗಿಲ್ ವಿಜಯ ದಿವಸ(Kargil Vijay Diwas). ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 22 ವರ್ಷ (22 Years) ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸೈನಿಕ ಸ್ಮಾರಕ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ. ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು. ಸಿಎಂ ಬಿಎಸ್‌ವೈ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 22ನೇ ಕಾರ್ಗಿಲ್ ವಿಜಯ್ ದಿನದಲ್ಲಿ ಭಾಗಿಯಾಗಿದ್ದಕ್ಕೆ ಖುಷಿಯಾಗಿದೆ. ಯುದ್ಧದಲ್ಲಿ ನಮ್ಮ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದರು. ಹುತಾತ್ಮ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಕೊರೆಯುವ ಚಳಿಯಲ್ಲೂ ಶತ್ರುಸೇನೆ ಹಿಮ್ಮೆಟ್ಟಿಸಿದ್ದರು. ಯೋಧರ ಜೊತೆಗೆ ನಾವು ಎಂದೆಂದಿಗೂ ಇರುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜೊತೆಗೆ ದಿ ಸಗಾ ಆಫ್ ಏ ಬ್ರೇವ್ ಹಾರ್ಟ್ ಪುಸ್ತಕ ಬಿಡುಗಡೆ ಮಾಡಿದರು. ಶಕುಂತಲಾ ಭಂಡಾರ್ಕರ್ ಬರೆದಿರುವ ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಇದಾಗಿದೆ.

Kargil Vijay Diwas

ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಇದನ್ನೂ ಓದಿ: Kargil Vijay Diwas: ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ