AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನ ವಾಯು ಗುಣಮಟ್ಟ ವರದಿ: ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ; ನಿಮ್ಮ ಊರಿನ AQI ಮಟ್ಟ ಚೆಕ್ ಮಾಡಿ

ರಾಜ್ಯದಲ್ಲಿ ನಿರಂತರ ಮಳೆ ಮತ್ತು ತಂಪು ಗಾಳಿಯಿಂದ ವಾಯು ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ 'ಉತ್ತಮ' AQI ದಾಖಲಾಗಿದೆ. ಮೈಸೂರಿನಲ್ಲಿ ರಾಜ್ಯದಲ್ಲೇ ಅತ್ಯಂತ ಶುದ್ಧ ಗಾಳಿ ಇದೆ. ಆದರೆ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಕೈಗಾರಿಕೆ, ನಿರ್ಮಾಣ ಕಾರ್ಯಗಳಿಂದ ಮಾಲಿನ್ಯ ಹೆಚ್ಚಿದ್ದು, ಅಸ್ತಮಾ ರೋಗಿಗಳಿಗೆ ಎಚ್ಚರಿಕೆ ನೀಡಲಾಗಿದೆ. N95 ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಇಂದಿನ ವಾಯು ಗುಣಮಟ್ಟ ವರದಿ: ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ; ನಿಮ್ಮ ಊರಿನ AQI ಮಟ್ಟ ಚೆಕ್ ಮಾಡಿ
ಮಳೆಯಿಂದ ಗಾಳಿ ಶುದ್ಧಿImage Credit source: PTI
TV9 Web
| Edited By: |

Updated on:Jun 20, 2026 | 7:30 AM

Share

ಬೆಂಗಳೂರು, ಜೂ.20: ರಾಜ್ಯದಲ್ಲಿ ನಿರಂತರವಾಗಿ ಬೀಸುತ್ತಿರುವ ತಂಪು ಗಾಳಿ ಮತ್ತು ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ಗಣನೀಯವಾಗಿ ಕಡಿಮೆಯಾಗಿವೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಉತ್ತಮ’ (Good) ಹಾಗೂ ‘ತೃಪ್ತಿಕರ’ (Satisfactory) ಮಟ್ಟದಲ್ಲಿದೆ.

ಸಿಲಿಕಾನ್ ಸಿಟಿಯ ಹೆಬ್ಬಾಳ, ಸಿಲ್ಕ್ ಬೋರ್ಡ್, ಜಯನಗರ ಮತ್ತು ಮೈಸೂರು ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳಲ್ಲಿ ಗಾಳಿಯು ಅತ್ಯಂತ ಶುದ್ಧವಾಗಿದೆ. ಯಾವುದೇ ಆರೋಗ್ಯದ ಅಪಾಯಗಳಿಲ್ಲ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಜ್ಯದಲ್ಲೇ ಅತ್ಯಂತ ಸ್ವಚ್ಛ ಹಾಗೂ ಶುದ್ಧ ಗಾಳಿ ದಾಖಲಾಗಿದೆ. ಇನ್ನು ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ವಾಯು ಮಾಲಿನ್ಯ ಶೂನ್ಯ ಮಟ್ಟಕ್ಕೆ ಕುಸಿದಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಧೂಳಿನ ವಾತಾವರಣವಿದ್ದರೂ ಗಾಳಿಯ ಗುಣಮಟ್ಟ ನಿಯಂತ್ರಣದಲ್ಲಿದೆ.

ಕರ್ನಾಟಕದ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟ

ನಗರ / ಜಿಲ್ಲೆ ಇಂದಿನ AQI ಮಟ್ಟ ಗಾಳಿಯ ಗುಣಮಟ್ಟದ ಸ್ಥಿತಿ (Status)
ಕೊಪ್ಪಳ 44 ಅತ್ಯಂತ ಉತ್ತಮ (Good)
ಬಳ್ಳಾರಿ 18 ಅತ್ಯಂತ ಉತ್ತಮ (Good)
ದಾವಣಗೆರೆ 51 ತೃಪ್ತಿಕರ (Satisfactory)
ಚಿಕ್ಕಮಗಳೂರು 58 ತೃಪ್ತಿಕರ (Satisfactory)
ಚಾಮರಾಜನಗರ 62 ತೃಪ್ತಿಕರ (Satisfactory)
ಶಿವಮೊಗ್ಗ 67 ತೃಪ್ತಿಕರ (Satisfactory)
ವಿಜಯಾಪುರ 69 ತೃಪ್ತಿಕರ (Satisfactory)
ತುಮಕೂರು 71 ತೃಪ್ತಿಕರ (Satisfactory)
ಗೌರಿಬಿದನೂರು / ಚಿಕ್ಕಬಳ್ಳಾಪುರ 84 ಸಾಧಾರಣ (Moderate)
ರಾಮನಗರ 84 ಸಾಧಾರಣ (Moderate)
ಹುಬ್ಬಳ್ಳಿ – ಧಾರವಾಡ 82 – 131 ಸಾಧಾರಣದಿಂದ ಕಳಪೆ (Moderate to Poor)

ಪ್ರಸುತ್ತ ವಾಯು ಗುಣಮಟ್ಟವು ಮನುಷ್ಯರು ಹಾಗೂ ಪ್ರಾಣಿಗಳಿಗೆ ಸಂಪೂರ್ಣ ಸುರಕ್ಷಿತವಾಗಿದೆ. ಉಸಿರಾಟದ ಸಮಸ್ಯೆ ಅಥವಾ ಅಸ್ತಮಾ ಇರುವವರು ಕೂಡ ಮುಕ್ತವಾಗಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು. ಬಳ್ಳಾರಿ, ಕೊಪ್ಪಳ ಮತ್ತು ಕರಾವಳಿಯ ಮಂಗಳೂರು ಭಾಗಗಳಲ್ಲಿ ವಾಯು ಮಾಲಿನ್ಯ ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು, ಹಸಿರು ವಲಯದಲ್ಲಿದೆ. ಉತ್ತರ ಕರ್ನಾಟಕದ ಈ ಭಾಗದಲ್ಲಿ ಕೈಗಾರಿಕಾ ಪ್ರದೇಶ ಹಾಗೂ ಧೂಳಿನ ವಾತಾವರಣದ ಕಾರಣದಿಂದಾಗಿ ಗಾಳಿಯ ಗುಣಮಟ್ಟ ಸ್ವಲ್ಪ ‘ಕಳಪೆ’ (Poor) ಮಟ್ಟ ತಲುಪಿದೆ. ಅಸ್ತಮಾ ಅಥವಾ ಅಲರ್ಜಿ ಸಮಸ್ಯೆ ಇರುವವರು ಮುಂಜಾಗ್ರತೆ ವಹಿಸುವುದು ಒಳಿತು.

ಇದನ್ನೂ ಓದಿ: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್

ಹುಬ್ಬಳ್ಳಿ – ಧಾರವಾಡದಲ್ಲಿ ರಸ್ತೆ ಕಾಮಗಾರಿಗಳು, ಕಟ್ಟಡ ನಿರ್ಮಾಣದ ಧೂಳು ಮತ್ತು ಹೆದ್ದಾರಿಯಲ್ಲಿ ಸಂಚರಿಸುವ ಭಾರಿ ವಾಹನಗಳ ಹೊಗೆಯಿಂದ ಅಲ್ಲಿನ ಗಾಳಿ ಗುಣಮಟ್ಟದಲ್ಲಿ ಸ್ವಲ್ಪ ವ್ಯಾತ್ಯಾಸ ಕಾಣುಬಹುದು. ಕಲಬುರಗಿಯಲ್ಲಿ ಸಿಮೆಂಟ್ ಕಾರ್ಖಾನೆಗಳ ಧೂಳು ಮತ್ತು ಪ್ರಸ್ತುತ ಇರುವ ಒಣ ಹವಾಮಾನದ ಗಾಳಿಯಿಂದ ಅಲ್ಲಿಯೂ ಗಾಳಿಯ ಗುಣಮಟ್ಟದಲ್ಲಿ ಕಳಪೆ ಕಾಣಿಸಬಹುದು. ಮಾಲಿನ್ಯ ಹೆಚ್ಚಿರುವ ಕೈಗಾರಿಕಾ ವಲಯಗಳಲ್ಲಿ ಓಡಾಡುವಾಗ N95 ಮಾಸ್ಕ್ ಧರಿಸುವುದು ಗಾಳಿಯಲ್ಲಿನ ಸೂಕ್ಷ್ಮ ಕಣಗಳನ್ನು (PM 2.5) ತಡೆಯಲು ನೆರವಾಗುತ್ತದೆ. AQI ಮಟ್ಟ 100 ದಾಟಿರುವ ಪ್ರದೇಶಗಳಲ್ಲಿ ಮುಂಜಾನೆಯ ವಾಕಿಂಗ್ ಅಥವಾ ಹೊರಾಂಗಣ ವ್ಯಾಯಾಮಗಳನ್ನು ಮಾಡಬೇಡಿ. ಮನೆಯ ಒಳಗೇ ಯೋಗ ಅಥವಾ ಲಘು ವ್ಯಾಯಾಮ ಮಾಡಿ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Sat, 20 June 26

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು