AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ

ಇಂದಿನ ಕರ್ನಾಟಕ ಹಾಗೂ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ. ಸಕ್ರಿಯ ಮುಂಗಾರು ಮಳೆಯಿಂದಾಗಿ ರಾಜಧಾನಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಮಾಲಿನ್ಯ ನಿಯಂತ್ರಣದಲ್ಲಿದ್ದು, ವಾಯು ಶುದ್ಧತೆ 'ಸಾಧಾರಣ'ದಿಂದ 'ಉತ್ತಮ' ಮಟ್ಟದಲ್ಲಿದೆ. ಪ್ರದೇಶವಾರು ವಿವರ ಹಾಗೂ ಉಸಿರಾಟದ ಸಮಸ್ಯೆ ಇರುವವರಿಗೆ ಅಗತ್ಯ ಆರೋಗ್ಯ ಸಲಹೆಗಳು ಇಲ್ಲಿವೆ.

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ
ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ Image Credit source: The economic times
ಭಾವನಾ ಹೆಗಡೆ
|

Updated on: Jul 22, 2026 | 6:58 AM

Share

ಮುಖ್ಯಾಂಶಗಳು

  • ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣವಾಗಿದೆ.
  • ಮಳೆಯ ವಾತಾವರಣದಿಂದಾಗಿ ಧೂಳಿನ ಕಣಗಳು ಕಡಿಮೆಯಾಗಿ ಶುದ್ಧ ಗಾಳಿ ಸಿಗುತ್ತಿದೆ.
  • ಆಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿದ್ದವರು ಹೊರಗಡೆ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ಬೆಂಗಳೂರು, ಜುಲೈ 22: ಮುಂಗಾರು ಮಳೆ ಶುರುವಾಗುವ ಮೊದಲು ಅತ್ಯಂತ ಕಳಪೆ ವಾಯು ಗುಣಮಟ್ಟ (AQI) ನೋಡಿದ್ದ ರಾಜ್ಯ ಇದೀಗ ಕ್ರಮೇಣವಾಗಿ ಸುಧಾರಿಸುತ್ತಿದೆ. ಮಳೆಯ ಕಾರಣದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಕ್ಯೂಐ ಉತ್ತಮವಾಗಿದೆ. ತಾವರಣದಲ್ಲಿದ್ದ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ?

ಇಂದು ಬೆಂಗಳೂರು ನಗರದ ಸರಾಸರಿ AQI ಮಟ್ಟವು 50 ರಿಂದ 59 ರ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಇದನ್ನು ವಾಯು ಗುಣಮಟ್ಟದ ಮಾನದಂಡಗಳ ಪ್ರಕಾರ ಸಾಧಾರಣ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ನಗರದಲ್ಲಿ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮತ್ತು PM10 ಮಟ್ಟವು ಹತೋಟಿಯಲ್ಲಿದ್ದು, ಗಾಳಿಯಲ್ಲಿನ ಆಮ್ಲಜನಕದ ಸಾಂದ್ರತೆ ಉತ್ತಮವಾಗಿದೆ. ಜಯನಗರ, ಬಸವನಗುಡಿ, ಹಾಗೂ ಬಿಟಿಎಂ ಲೇಔಟ್ ಪ್ರದೇಶಗಳಲ್ಲಿ ಗಾಳಿಯ ಶುದ್ಧತೆ ‘ಉತ್ತಮ’ (Good) ಹಂತದಲ್ಲಿದ್ದರೆ, ಬೊಮ್ಮನಹಳ್ಳಿ ಮತ್ತು ಔಟರ್ ರಿಂಗ್ ರೋಡ್ ಭಾಗಗಳಲ್ಲಿ ವಾಹನ ಸಂಚಾರ ದಟ್ಟಣೆಯಿಂದಾಗಿ AQI ಪ್ರಮಾಣ ತುಸು ಹೆಚ್ಚಾಗಿ ದಾಖಲಾಗಿದೆ.

ರಾಜ್ಯದ ಇತರ ನಗರಗಳ ವಾಯು ಪರಿಸ್ಥಿತಿ

ಕರ್ನಾಟಕದ ಇತರ ಜಿಲ್ಲೆಗಳು ಮತ್ತು ಪ್ರಮುಖ ನಗರಗಳಲ್ಲೂ ವಾಯು ಮಾಲಿನ್ಯದ ಮಟ್ಟ ನಿಯಂತ್ರಣದಲ್ಲಿದೆ.

  • ಚಿಕ್ಕಮಗಳೂರು ಮತ್ತು ಬೆಳಗಾವಿ: 35 – 43 (Good)
  • ಮೈಸೂರು: 40 – 48: (Good)
  • ಹುಬ್ಬಳ್ಳಿ – ಧಾರವಾಡ: 50 – 58 (Moderate)
  • ಮಂಗಳೂರು ಮತ್ತು ಬಳ್ಳಾರಿ: 52 – 62 (Moderate)

ನಗರದಲ್ಲಿ ಗಾಳಿಯ ಗುಣಮಟ್ಟ ಒಟ್ಟಾರೆಯಾಗಿ ತೃಪ್ತಿಕರವಾಗಿದ್ದರೂ, ಆಸ್ತಮಾ ಹಾಗೂ ಉಸಿರಾಟದ ತೊಂದರೆ ಇರುವ ಸೂಕ್ಷ್ಮ ಆರೋಗ್ಯದ ವ್ಯಕ್ತಿಗಳು ಮುಂಜಾನೆ ಮತ್ತು ಸಂಜೆ ವಾಹನ ದಟ್ಟಣೆ ಹೆಚ್ಚಿರುವ ವೇಳೆಯಲ್ಲಿ ಮುನ್ನೆಚ್ಚರಿಕೆ ವಹಿಸುವುದು ಒಳಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ