AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚವ್ಹಾಣ್ ಮನವಿ

ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಗೋವುಗಳನ್ನು ದತ್ತು ಪಡೆಯಲು ಸಚಿವರು, ಸಂಸದರು, ಶಾಸಕರಿಗೆ ಪ್ರಭು ಚವ್ಹಾಣ್ ಮನವಿ
ಸಚಿವ ಪ್ರಭು ಚೌಹಾಣ್
TV9 Web
| Edited By: |

Updated on:Mar 23, 2023 | 6:24 PM

Share

ಬೆಂಗಳೂರು: ಗೋವುಗಳನ್ನು ದತ್ತು ಪಡೆಯುವಂತೆ ಸಚಿವರು, ಸಂಸದರು, ಶಾಸಕರಿಗೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಗೋವುಗಳನ್ನು ಸಂರಕ್ಷಿಸಲು ಸಚಿವರು, ಜನಪ್ರತಿನಿಧಿಗಳು, ಚಿತ್ರರಂಗದ ಕಲಾವಿದರು, ಉದ್ಯಮಿಗಳು, ಸಂಘ-ಸಂಸ್ಥೆಗಳು ಗೋವುಗಳನ್ನು ದತ್ತು ಪಡೆದು ಪೋಷಣೆಗೆ ಮುಂದಾಗಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ಮನವಿ ಮಾಡಿದ್ದಾರೆ. ಈಗಾಗಲೇ ಗೋವುಗಳನ್ನು ದತ್ತು ಪಡೆಯುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನದಲ್ಲಿ ಗೋ ಮಾತೆಯನ್ನು ರಕ್ಷಿಸಲು ಗೋ ಪ್ರೇಮಿಗಳಾದ ಎಲ್ಲರೂ ಗೋವುಗಳನ್ನು ದತ್ತು ಪಡೆದು, ಹಸುಗಳ ಪೋಷಣೆ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಭು ಚವ್ಹಾಣ್ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಿನ್ನೆ ತಮ್ಮ ಜನ್ಮದಿನದ ಅಂಗವಾಗಿ ರಾಷ್ಟ್ರೋತ್ಥಾನ ಗೋ ಶಾಲೆಯ 11 ಗೋವುಗಳನ್ನು ದತ್ತು ಪಡೆಯುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಗೋ ಸಂತತಿಯ ರಕ್ಷಣೆಗೆ ಕರೆ ನೀಡಿದ್ದಾರೆ. ಈ ಆದರ್ಶವನ್ನು ಎಲ್ಲ ಸಂಸದರು, ಶಾಸಕರು, ವಿವಿಧ ವಲಯಗಳ ಗಣ್ಯರು, ಉದ್ಯಮಿಗಳು ಪಾಲಿಸುವ ಮೂಲಕ ಗೋ ಸಂರಕ್ಷಣೆಗೆ ಮುಂದಾಗುವಂತೆ ಅವರು ಕರೆ ನೀಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೇ ನಾನು ಗೋವುಗಳನ್ನು ದತ್ತು ಪಡೆದು ಪೋಷಿಸುತ್ತಿದ್ದೇನೆ. ಔರಾಗ್ ಪಟ್ಟಣದ ಅಮರೇಶ್ವರ ಗೋ ಶಾಲೆಯಲ್ಲಿ 21 ಗೋವುಗಳನ್ನು ದತ್ತು ಪಡೆದು ಪೋಷಣೆ ಮಾಡುತ್ತಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ನಡುವೆ, ಕರ್ನಾಟಕದಲ್ಲಿ ಸಾಕಷ್ಟು ದಿನಗಳಿಂದ ಪಶು ವೈದ್ಯರ ನೇಮಕಾತಿ ನೆನೆಗುದಿಗೆ ಬಿದ್ದಿತ್ತು. ಇದೀಗ 400 ವೈದ್ಯರ ನೇಮಕಕ್ಕೆ ಸಂಪುಟದ ಒಪ್ಪಿಗೆ ಸಿಕ್ಕಿದೆ. ದೇಶದ ಇತಿಹಾಸದಲ್ಲಿ ಕರ್ನಾಟಕದಲ್ಲಿ ಪ್ರಾಣಿ ಸಂಜೀವಿನಿ ವಾಹನ ಜಾರಿಗೆ ತರಲಾಗಿದೆ. ಈಗಾಗಲೇ 291 ಆಂಬುಲೆನ್ಸ್‌ಗಳಿಗೆ ಟೆಂಡರ್‌ ಆಗಿದೆ. ಫೆಬ್ರವರಿ ಅಂತ್ಯದ ವೇಳೆಗೆ ತಾಲೂಕುವಾರು ಒಂದೊಂದು ಆಂಬುಲ್ಯೆನ್ಸ್‌ ನೀಡಲಾಗುತ್ತದೆ. ನಾನು ಅಧಿಕಾರಕ್ಕೆ ಬಂದ ಮೇಲೆ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋ ಶಾಲಾ ಆಧರಿತ ಆರ್ಥಿಕತೆ ಅಭಿವೃದ್ದಿಗೆ ಪ್ಲ್ಯಾನ್; ಭಾರತದ ಗೋ ಶಾಲೆಗಳ ಸ್ಥಿತಿಗತಿ ಪರಿಶೀಲನೆ

PM Modi in Varanasi ಗೋವುಗಳ ಬಗ್ಗೆ ಗೇಲಿ ಮಾಡುವವರು ಕೋಟಿಗಟ್ಟಲೆ ಜನರ ಜೀವನೋಪಾಯವೇ ಅವು ಎಂಬುದನ್ನು ಮರೆಯುತ್ತಾರೆ: ಮೋದಿ

Published On - 5:39 pm, Sat, 29 January 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ