
ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಮುಂಗಾರು ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ‘ಉತ್ತಮ’ದಿಂದ ‘ಸಾಧಾರಣ’ ಮಟ್ಟದಲ್ಲಿದೆ. ಇಂದು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಗಾಳಿಯ ಗುಣಮಟ್ಟ ಸೂಚ್ಯಂಕ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಇಂದು ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 41 ರಿಂದ 78ರ ನಡುವೆ ದಾಖಲಾಗಿದ್ದು, ಸಾಧಾರಣ ಹಾಗೂ ಉತ್ತಮ ವಿಭಾಗದಲ್ಲಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರೂ, ವಾತಾವರಣದಲ್ಲಿನ ತೇವಾಂಶ ಮತ್ತು ಮಳೆಯ ಪ್ರಭಾವದಿಂದ ಮಾಲಿನ್ಯಕಾರಕ ಕಣಗಳಾದ PM2.5 ಮತ್ತು PM10 ನಿಯಂತ್ರಣದಲ್ಲಿದೆ.
ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದ ನಗರಗಳಾದ ಹುಬ್ಬಳ್ಳಿ, ಬೆಳಗಾವಿ, ಗದಗ ಹಾಗೂ ಶಿವಮೊಗ್ಗಗಳಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಶ್ರೇಷ್ಠ ಮಟ್ಟದಲ್ಲಿದ್ದು ಶುದ್ಧ ವಾತಾವರಣ ಕಂಡುಬರುತ್ತಿದೆ. ಆಸ್ತಮಾ ಹಾಗೂ ಶ್ವಾಸಕೋಶದ ಅಲರ್ಜಿ ಇರುವ ಸೂಕ್ಷ್ಮ ಆರೋಗ್ಯದ ವ್ಯಕ್ತಿಗಳು ಬೆಂಗಳೂರಿನಂತಹ ವಾಹನ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಮುಂಜಾನೆ ಹೊತ್ತು ಮಾಸ್ಕ್ ಧರಿಸುವುದು ಸೂಕ್ತ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ