Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ!

ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ತಗ್ಗಿದೆ. ಮೂಸೂರು, ಕೊಪ್ಪಳ ಸೇರಿದಂತೆ ಹಲವೆಡೆ ಗಾಳಿಯ ಗುಣಮಟ್ಟ ಸುಧಾರಿಸಿದೆ. ಗದಗ ಅತ್ಯಂತ ಶುದ್ಧ ಗಾಳಿಯನ್ನು ಹೊಂದಿದ್ದರೆ, ಧಾರವಾಡದಲ್ಲಿ ಕೊಂಚ ಕಳಪೆ ವಾತಾವರಣವಿದೆ. ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿರುವುದರಿಂದ ಸಾರ್ವಜನಿಕರು ನಿರಾಳವಾಗಿದ್ದಾರೆ.

Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ!
ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ!
Image Credit source: Deccan herald

Updated on: Jun 14, 2026 | 7:58 AM

ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ.

ಮುಖ್ಯಾಂಶಗಳು

  • ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ.
  • ಗದಗ ನಗರದಲ್ಲಿ ಅತ್ಯಂತ ಸ್ವಚ್ಛ ಹಾಗೂ ಶುದ್ಧ ಗಾಳಿ ದಾಖಲಾಗಿದೆ.
  • ಧಾರವಾಡ ಮತ್ತು ಮಂಗಳೂರಿನಲ್ಲಿ ಮಾಲಿನ್ಯದ ಪ್ರಮಾಣ ಕೊಂಚ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ ಇಂದು 33 ರಿಂದ 56ರ ಆಸುಪಾಸಿನಲ್ಲಿ ದಾಖಲಾಗಿದ್ದು, ಉತ್ತಮ ಹಾಗೂ ಸಾಧಾರಣ ಶ್ರೇಣಿಯಲ್ಲಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ಕಡಿಮೆಯಾಗಿವೆ.

  • ಹೆಬ್ಬಾಳ: 30 (ಉತ್ತಮ – ಅತ್ಯಂತ ಶುದ್ಧ ಗಾಳಿ)
  • ಸಿಲ್ಕ್ ಬೋರ್ಡ್: 54 (ಸಾಧಾರಣ)
  • ಹೊಂಬೇಗೌಡ ನಗರ: 51 (ಸಾಧಾರಣ)
  • ಬಿಟಿಎಂ ಲೇಔಟ್: 63 (ಸಾಧಾರಣ)
  • ಕಡಬೀಸನಹಳ್ಳಿ : 97 (ಅಪಾಯಕಾರಿ)

ಒಟ್ಟಾರೆಯಾಗಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾದ ಪೂರಕ ವಾತಾವರಣವಿದೆ. ರಾಜ್ಯದ ಇತರೆ ನಗರಗಳ ಇಂದಿನ ವಾಯು ಗುಣಮಟ್ಟದ ಶ್ರೇಯಾಂಕಗಳನ್ನು ಗಮನಿಸಿದರೆ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಧೂಳಿನಿಂದಾಗಿ ಮಾಲಿನ್ಯ ಕೊಂಚ ಏರಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳು ಅತ್ಯಂತ ಶುದ್ಧ ಗಾಳಿಯನ್ನು ಹೊಂದಿವೆ.

ಹೆಚ್ಚು ಮಾಲಿನ್ಯವಿರುವ ನಗರಗಳು

  • ಧಾರವಾಡ: 153 (ಕಳಪೆ)
  • ಮಂಗಳೂರು: 108 (ಸಾಧಾರಣಕ್ಕಿಂತ ಕೊಂಚ ಹೆಚ್ಚು)
  • ಹುಬ್ಬಳ್ಳಿ: 86 (ಸಾಧಾರಣ)

ಅತ್ಯಂತ ಶುದ್ಧ ಗಾಳಿಯಿರುವ ನಗರಗಳು

  • ಗದಗ: 19 (ಅತ್ಯುತ್ತಮ ಹಾಗೂ ಅತ್ಯಂತ ಸ್ವಚ್ಛ ಗಾಳಿ)
  • ಕೊಪ್ಪಳ: 44 (ಉತ್ತಮ)
  • ಮೈಸೂರು: 56 (ಸಾಧಾರಣ)
  • ಶಿವಮೊಗ್ಗ: 77 (ಸಾಧಾರಣ)

ಮಳೆಯ ಮುನ್ಸೂಚನೆ ಇರುವುದರಿಂದ ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಇನ್ನಷ್ಟು ಸುಧಾರಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಳೇ ವಾಹನಗಳ ಬಳಕೆ ಕಡಿಮೆ ಮಾಡುವುದು ಮತ್ತು ಹಸಿರು ವಲಯವನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us