AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಮಳೆಯ ಹಿನ್ನೆಲೆ ರಾಜ್ಯದ ಹಲವೆಡೆ ಶುದ್ಧ ಗಾಳಿ, ವಾಯು ಗುಣಮಟ್ಟದಲ್ಲಿ ಸುಧಾರಣೆ

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರವಾಗಿದೆ. ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್, ಜಯನಗರ ಸೇರಿದಂತೆ ಹಲವೆಡೆ ಶುದ್ಧ ಗಾಳಿ ದಾಖಲಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಯಾದಗಿರಿಯಲ್ಲಿ ಮಾಲಿನ್ಯದ ಮಟ್ಟ ಗಣನೀಯವಾಗಿ ಕುಸಿದಿದೆ. ಒಟ್ಟಾರೆ ವಾತಾವರಣ ಆರೋಗ್ಯಕರವಾಗಿದೆ.

ಮುಂಗಾರು ಮಳೆಯ ಹಿನ್ನೆಲೆ ರಾಜ್ಯದ ಹಲವೆಡೆ ಶುದ್ಧ ಗಾಳಿ, ವಾಯು ಗುಣಮಟ್ಟದಲ್ಲಿ ಸುಧಾರಣೆ
ವಾಯು ಗುಣಮಟ್ಟದಲ್ಲಿ ಸುಧಾರಣೆ
ಭಾವನಾ ಹೆಗಡೆ
|

Updated on: Jun 30, 2026 | 7:41 AM

Share

ಮುಖ್ಯಾಂಶಗಳು

  • ಮಳೆಯಿಂದಾಗಿ ರಾಜಧಾನಿಯಲ್ಲಿ ವಾಯು ಗುಣಮಟ್ಟ ಅತ್ಯಂತ ತೃಪ್ತಿಕರವಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಕನಿಷ್ಠ ಮಾಲಿನ್ಯದೊಂದಿಗೆ ಶುದ್ಧ ಗಾಳಿ ದಾಖಲು.
  • ರಾಜ್ಯದಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ಮಾಲಿನ್ಯ ಕಂಡುಬಂದಿದೆ.

ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರದಲ್ಲಿ ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಉತ್ತಮವಾಗಿದೆ ಎಂದು ಹವಾಮಾನ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಮಳೆ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು (PM2.5 ಮತ್ತು PM10) ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ಸರಾಸರಿ 29 ರಿಂದ 60 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಕೆಲೆವೆಡೆ ವಾಯುಗುಣಮಟ್ಟ ಉತ್ತಮ ಮಟ್ಟದಲ್ಲಿದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಟ್ಟದಲ್ಲಿದೆ.

  • ಬಿಟಿಎಂ ಲೇಔಟ್: 50-60 (ಸಾಧಾರಣ – ಸೂಕ್ಷ್ಮ ಆರೋಗ್ಯ ಸಮಸ್ಯೆ ಇರುವವರಿಗೆ ಮಾತ್ರ ಸಣ್ಣ ಮಟ್ಟದ ಜಾಗ್ರತೆ ಅಗತ್ಯ)
  • ಬಸವನಗುಡಿ ಹಾಗೂ ಜಯನಗರ: 33-50 (ಉತ್ತಮ)
  • ಆನಂದ್ ರಾವ್ ಸರ್ಕಲ್ ಮತ್ತು ಹೆಬ್ಬಾಳ:55 (ಸಾಧಾರಣ)
  • ಅದರ್ಶ್ ಪಾಮ್ ರಿಟ್ರೀಟ್: 22 (ಅತ್ಯುತ್ತಮ)

ಮುಂಗಾರು ಮಳೆಯ ಮಾರುತಗಳು ನಗರದ ಸಾರಿಗೆ ಮತ್ತು ಕೈಗಾರಿಕಾ ವಲಯದಿಂದ ಹೊರಹೊಮ್ಮುವ ಮಾಲಿನ್ಯಕಾರಕ ಕಣಗಳನ್ನು ನಿಯಂತ್ರಣದಲ್ಲಿಟ್ಟಿವೆ. ಹೀಗಾಗಿ ಇಂದು ಹೊರಗಿನ ದೈಹಿಕ ಚಟುವಟಿಕೆಗಳು ಹಾಗೂ ವಾಸಕ್ಕೆ ಬೆಂಗಳೂರಿನ ವಾತಾವರಣ ಅತ್ಯಂತ ಯೋಗ್ಯವಾಗಿದೆ.

ಕರ್ನಾಟಕದ ಇತರೆ ಪ್ರಮುಖ ನಗರಗಳ ವಾಯು ಸ್ಥಿತಿ

ರಾಜ್ಯದ ಇತರೆ ನಗರಗಳಲ್ಲೂ ಸಹ ವಾಯು ಮಾಲಿನ್ಯದ ಪ್ರಮಾಣ ಇಳಿಕೆಯಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ನಗರಗಳಲ್ಲಿ ಇಂದು ಶುದ್ಧ ಗಾಳಿ ಲಭ್ಯವಿದೆ. ಯಾದಗಿರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ರಾಜ್ಯದಲ್ಲೇ ಅತ್ಯಂತ ಕಡಿಮೆ ಮಾಲಿನ್ಯ ಹೊಂದಿದ್ದು, ಇಲ್ಲಿನ AQI 17 ಮತ್ತು 23ರಷ್ಟಿದೆ.

ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದರಿಂದ ಇಲ್ಲಿನ AQI 25 ಕ್ಕಿಂತ ಕಡಿಮೆ ದಾಖಲಾಗಿದ್ದು, ಅತ್ಯಂತ ಶುದ್ಧವಾದ ಗಾಳಿ ಹೊಂದಿವೆ. ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು AQI 35 ರಿಂದ 45ರ ಆಸುಪಾಸಿನಲ್ಲಿದ್ದು, ಸಂಪೂರ್ಣವಾಗಿ ಸುರಕ್ಷಿತ ವಲಯದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ