AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಮಳೆಯ ಹಿನ್ನೆಲೆ ರಾಜ್ಯದ ಹಲವೆಡೆ ಶುದ್ಧ ಗಾಳಿ, ವಾಯು ಗುಣಮಟ್ಟದಲ್ಲಿ ಸುಧಾರಣೆ

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿಕರವಾಗಿದೆ. ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್, ಜಯನಗರ ಸೇರಿದಂತೆ ಹಲವೆಡೆ ಶುದ್ಧ ಗಾಳಿ ದಾಖಲಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಯಾದಗಿರಿಯಲ್ಲಿ ಮಾಲಿನ್ಯದ ಮಟ್ಟ ಗಣನೀಯವಾಗಿ ಕುಸಿದಿದೆ. ಒಟ್ಟಾರೆ ವಾತಾವರಣ ಆರೋಗ್ಯಕರವಾಗಿದೆ.

ಮುಂಗಾರು ಮಳೆಯ ಹಿನ್ನೆಲೆ ರಾಜ್ಯದ ಹಲವೆಡೆ ಶುದ್ಧ ಗಾಳಿ, ವಾಯು ಗುಣಮಟ್ಟದಲ್ಲಿ ಸುಧಾರಣೆ
ವಾಯು ಗುಣಮಟ್ಟದಲ್ಲಿ ಸುಧಾರಣೆ
ಭಾವನಾ ಹೆಗಡೆ
|

Updated on: Jun 30, 2026 | 7:41 AM

Share

ಮುಖ್ಯಾಂಶಗಳು

  • ಮಳೆಯಿಂದಾಗಿ ರಾಜಧಾನಿಯಲ್ಲಿ ವಾಯು ಗುಣಮಟ್ಟ ಅತ್ಯಂತ ತೃಪ್ತಿಕರವಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಕನಿಷ್ಠ ಮಾಲಿನ್ಯದೊಂದಿಗೆ ಶುದ್ಧ ಗಾಳಿ ದಾಖಲು.
  • ರಾಜ್ಯದಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ಮಾಲಿನ್ಯ ಕಂಡುಬಂದಿದೆ.

ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರದಲ್ಲಿ ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಉತ್ತಮವಾಗಿದೆ ಎಂದು ಹವಾಮಾನ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಮಳೆ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು (PM2.5 ಮತ್ತು PM10) ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ಸರಾಸರಿ 29 ರಿಂದ 60 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಕೆಲೆವೆಡೆ ವಾಯುಗುಣಮಟ್ಟ ಉತ್ತಮ ಮಟ್ಟದಲ್ಲಿದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಟ್ಟದಲ್ಲಿದೆ.

  • ಬಿಟಿಎಂ ಲೇಔಟ್: 50-60 (ಸಾಧಾರಣ – ಸೂಕ್ಷ್ಮ ಆರೋಗ್ಯ ಸಮಸ್ಯೆ ಇರುವವರಿಗೆ ಮಾತ್ರ ಸಣ್ಣ ಮಟ್ಟದ ಜಾಗ್ರತೆ ಅಗತ್ಯ)
  • ಬಸವನಗುಡಿ ಹಾಗೂ ಜಯನಗರ: 33-50 (ಉತ್ತಮ)
  • ಆನಂದ್ ರಾವ್ ಸರ್ಕಲ್ ಮತ್ತು ಹೆಬ್ಬಾಳ:55 (ಸಾಧಾರಣ)
  • ಅದರ್ಶ್ ಪಾಮ್ ರಿಟ್ರೀಟ್: 22 (ಅತ್ಯುತ್ತಮ)

ಮುಂಗಾರು ಮಳೆಯ ಮಾರುತಗಳು ನಗರದ ಸಾರಿಗೆ ಮತ್ತು ಕೈಗಾರಿಕಾ ವಲಯದಿಂದ ಹೊರಹೊಮ್ಮುವ ಮಾಲಿನ್ಯಕಾರಕ ಕಣಗಳನ್ನು ನಿಯಂತ್ರಣದಲ್ಲಿಟ್ಟಿವೆ. ಹೀಗಾಗಿ ಇಂದು ಹೊರಗಿನ ದೈಹಿಕ ಚಟುವಟಿಕೆಗಳು ಹಾಗೂ ವಾಸಕ್ಕೆ ಬೆಂಗಳೂರಿನ ವಾತಾವರಣ ಅತ್ಯಂತ ಯೋಗ್ಯವಾಗಿದೆ.

ಕರ್ನಾಟಕದ ಇತರೆ ಪ್ರಮುಖ ನಗರಗಳ ವಾಯು ಸ್ಥಿತಿ

ರಾಜ್ಯದ ಇತರೆ ನಗರಗಳಲ್ಲೂ ಸಹ ವಾಯು ಮಾಲಿನ್ಯದ ಪ್ರಮಾಣ ಇಳಿಕೆಯಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ನಗರಗಳಲ್ಲಿ ಇಂದು ಶುದ್ಧ ಗಾಳಿ ಲಭ್ಯವಿದೆ. ಯಾದಗಿರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ರಾಜ್ಯದಲ್ಲೇ ಅತ್ಯಂತ ಕಡಿಮೆ ಮಾಲಿನ್ಯ ಹೊಂದಿದ್ದು, ಇಲ್ಲಿನ AQI 17 ಮತ್ತು 23ರಷ್ಟಿದೆ.

ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದರಿಂದ ಇಲ್ಲಿನ AQI 25 ಕ್ಕಿಂತ ಕಡಿಮೆ ದಾಖಲಾಗಿದ್ದು, ಅತ್ಯಂತ ಶುದ್ಧವಾದ ಗಾಳಿ ಹೊಂದಿವೆ. ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು AQI 35 ರಿಂದ 45ರ ಆಸುಪಾಸಿನಲ್ಲಿದ್ದು, ಸಂಪೂರ್ಣವಾಗಿ ಸುರಕ್ಷಿತ ವಲಯದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ