
ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರದಲ್ಲಿ ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಉತ್ತಮವಾಗಿದೆ ಎಂದು ಹವಾಮಾನ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಮಳೆ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು (PM2.5 ಮತ್ತು PM10) ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ಸರಾಸರಿ 29 ರಿಂದ 60 ರ ಆಸುಪಾಸಿನಲ್ಲಿ ದಾಖಲಾಗಿದ್ದು, ಕೆಲೆವೆಡೆ ವಾಯುಗುಣಮಟ್ಟ ಉತ್ತಮ ಮಟ್ಟದಲ್ಲಿದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಟ್ಟದಲ್ಲಿದೆ.
ಮುಂಗಾರು ಮಳೆಯ ಮಾರುತಗಳು ನಗರದ ಸಾರಿಗೆ ಮತ್ತು ಕೈಗಾರಿಕಾ ವಲಯದಿಂದ ಹೊರಹೊಮ್ಮುವ ಮಾಲಿನ್ಯಕಾರಕ ಕಣಗಳನ್ನು ನಿಯಂತ್ರಣದಲ್ಲಿಟ್ಟಿವೆ. ಹೀಗಾಗಿ ಇಂದು ಹೊರಗಿನ ದೈಹಿಕ ಚಟುವಟಿಕೆಗಳು ಹಾಗೂ ವಾಸಕ್ಕೆ ಬೆಂಗಳೂರಿನ ವಾತಾವರಣ ಅತ್ಯಂತ ಯೋಗ್ಯವಾಗಿದೆ.
ರಾಜ್ಯದ ಇತರೆ ನಗರಗಳಲ್ಲೂ ಸಹ ವಾಯು ಮಾಲಿನ್ಯದ ಪ್ರಮಾಣ ಇಳಿಕೆಯಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ನಗರಗಳಲ್ಲಿ ಇಂದು ಶುದ್ಧ ಗಾಳಿ ಲಭ್ಯವಿದೆ. ಯಾದಗಿರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ರಾಜ್ಯದಲ್ಲೇ ಅತ್ಯಂತ ಕಡಿಮೆ ಮಾಲಿನ್ಯ ಹೊಂದಿದ್ದು, ಇಲ್ಲಿನ AQI 17 ಮತ್ತು 23ರಷ್ಟಿದೆ.
ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದರಿಂದ ಇಲ್ಲಿನ AQI 25 ಕ್ಕಿಂತ ಕಡಿಮೆ ದಾಖಲಾಗಿದ್ದು, ಅತ್ಯಂತ ಶುದ್ಧವಾದ ಗಾಳಿ ಹೊಂದಿವೆ. ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು AQI 35 ರಿಂದ 45ರ ಆಸುಪಾಸಿನಲ್ಲಿದ್ದು, ಸಂಪೂರ್ಣವಾಗಿ ಸುರಕ್ಷಿತ ವಲಯದಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ