AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ಸಮರ: ಡಿಸಿಎಂ, ರೇವಣ್ಣ, ಕೋಳಿವಾಡ ಹಕ್ಕು ಚಲಾವಣೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲೂ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು, ಅಭ್ಯರ್ಥಿಗಳು ಸೇರಿದಂತೆ ಪಕ್ಷದ ನಾಯಕರು ಹಾಗು ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುತ್ತಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಉಪಚುನಾವಣೆ ಹಿನ್ನೆಲೆಯಲ್ಲಿ ಎಂಎಲ್​ಸಿ ಹೆಚ್.ಎಂ.ರೇವಣ್ಣ ಮತದಾನ ಮಾಡಿದ್ದಾರೆ. ಮಹಾಲಕ್ಷ್ಮೀಪುರದ ಅಂಬೇಡ್ಕರ್ ಕಾಲೇಜಿನಲ್ಲಿ ಪತ್ನಿ ವತ್ಸಲ ಜತೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ಬೆಂಬಲಿಗರೊಂದಿಗೆ ಬಂದು ವೋಟ್ ಮಾಡಿದ ಡಿಸಿಎಂ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನಾಗನೂರ ಪಿ.ಕೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಕ್ಕು ಚಲಾವಣೆ ಮಾಡಿದ್ದಾರೆ. ಬೆಂಬಲಿಗರೊಂದಿಗೆ […]

ಉಪಚುನಾವಣೆ ಸಮರ: ಡಿಸಿಎಂ, ರೇವಣ್ಣ, ಕೋಳಿವಾಡ ಹಕ್ಕು ಚಲಾವಣೆ
ಸಾಧು ಶ್ರೀನಾಥ್​
|

Updated on:Dec 05, 2019 | 1:57 PM

Share

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲೂ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು, ಅಭ್ಯರ್ಥಿಗಳು ಸೇರಿದಂತೆ ಪಕ್ಷದ ನಾಯಕರು ಹಾಗು ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುತ್ತಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಉಪಚುನಾವಣೆ ಹಿನ್ನೆಲೆಯಲ್ಲಿ ಎಂಎಲ್​ಸಿ ಹೆಚ್.ಎಂ.ರೇವಣ್ಣ ಮತದಾನ ಮಾಡಿದ್ದಾರೆ. ಮಹಾಲಕ್ಷ್ಮೀಪುರದ ಅಂಬೇಡ್ಕರ್ ಕಾಲೇಜಿನಲ್ಲಿ ಪತ್ನಿ ವತ್ಸಲ ಜತೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಬೆಂಬಲಿಗರೊಂದಿಗೆ ಬಂದು ವೋಟ್ ಮಾಡಿದ ಡಿಸಿಎಂ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನಾಗನೂರ ಪಿ.ಕೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಕ್ಕು ಚಲಾವಣೆ ಮಾಡಿದ್ದಾರೆ. ಬೆಂಬಲಿಗರೊಂದಿಗೆ ಬಂದು ತಮ್ಮ ನೆಚ್ಚಿನ ಅಭ್ಯರ್ಥಿಗೆ ಸವದಿ ವೋಟ್ ಹಾಕಿದ್ದಾರೆ.

ಹಕ್ಕು ಚಲಾಯಿಸಿದ ಕೋಳಿವಾಡ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡುಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಕ್ಕು ಚಲಾಯಿಸಿದ್ದಾರೆ. ಪುತ್ರ ಪ್ರಕಾಶ್ ಕೋಳಿವಾಡ, ಸೊಸೆ, ಮಕ್ಕಳು,‌ ಮೊಮ್ಮಕ್ಕಳ ಜೊತೆ ಆಗಮಿಸಿ ಮತಗಟ್ಟೆ 20 ರಲ್ಲಿ ಮತದಾನ ಮಾಡಿದ್ದಾರೆ.

Published On - 12:05 pm, Thu, 5 December 19