AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್‌ಮೆಂಟ್‌ ವಿಧೇಯಕ-2026 ಅಂಗೀಕಾರ

Apartment Bill 2026: ಅಪಾರ್ಟ್‌ಮೆಂಟ್‌ಗಳ ಆಡಳಿತಕ್ಕೆ ಸಂಬಂಧಿಸಿ ನಿರ್ದಿಷ್ಟ ಕಾರ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬುಧಾವರ ವಿಧಾನ ಸಭೆಯಲ್ಲಿ ಮಂಡಿಸಿದ್ದ ಅಪಾರ್ಟ್‌ಮೆಂಟ್‌(ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ-2026 ಇಂದು ಅಂಗೀಕಾರಗೊಂಡಿದೆ. ಅಪಾರ್ಟ್‌ಮೆಂಟ್‌ ಸಂಘಗಳ ನೋಂದಣಿ ಕಡ್ಡಾಯದ ಜೊತೆಗೆ ಹಲವು ಪ್ರಮುಖ ವಿಚಾರಗಳನ್ನು ವಿಧೇಯಕ ಒಳಗೊಂಡಿದೆ.

ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್‌ಮೆಂಟ್‌ ವಿಧೇಯಕ-2026 ಅಂಗೀಕಾರ
ವಿಧಾನಸಭೆImage Credit source: webcast.gov.in
ಸುನಿಲ್​ ಎಮ್​ ಹೆಚ್​
| Edited By: |

Updated on: Aug 21, 2026 | 2:06 PM

Share

ಬೆಂಗಳೂರು, ಆಗಸ್ಟ್​​ 21: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನ ಸಭೆಯಲ್ಲಿ ಅಪಾರ್ಟ್‌ಮೆಂಟ್‌(ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ-2026 ಅಂಗೀಕಾರವಾಗಿದೆ. ರಾಜ್ಯದ ಅಪಾರ್ಟ್‌ಮೆಂಟ್‌ಗಳ ಆಡಳಿತಕ್ಕೆ ಸಂಬಂಧಿಸಿ ನಿರ್ದಿಷ್ಟ ಕಾರ್ಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ವಿಧೇಯಕವನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿತ್ತು.

ವಿಧೇಯಕ ಹೇಳೋದೇನು?

  • ಅಪಾರ್ಟ್‌ಮೆಂಟ್‌ ಸಂಘಗಳ ನೋಂದಣಿ ಕಡ್ಡಾಯ
  • ಒಸಿ ಪಡೆದ 60 ದಿನಗಳೊಳಗೆ ಸಂಘಕ್ಕೆ ದಾಖಲೆ ಹಸ್ತಾಂತರಿಸಬೇಕು
  • ಮಾರಾಟವಾಗದ ಫ್ಲ್ಯಾಟ್‌ ನಿರ್ವಹಣಾ ಶುಲ್ಕ ಬಿಲ್ಡರ್‌ಗಳೇ ಪಾವತಿಸಬೇಕು
  • ಪ್ರಮುಖ ಪುನರ್‌ ನಿರ್ಮಾಣಕ್ಕೆ ಕನಿಷ್ಠ 75% ಮಾಲೀಕರ ಒಪ್ಪಿಗೆ ಕಡ್ಡಾಯ
  • ಸಂಘದ ಕಾರ್ಯಕಾರಿ ಸಮಿತಿ ಅವಧಿ ಗರಿಷ್ಠ 2 ವರ್ಷ
  • ನಿಯಮ ಉಲ್ಲಂಘನೆಗೆ ಗರಿಷ್ಠ 1 ಲಕ್ಷ ರೂಪಾಯಿ ದಂಡ
  • ಮುಂದುವರಿದರೆ ದಿನಕ್ಕೆ ₹1,000 ಹೆಚ್ಚುವರಿ ದಂಡ ವಿಧಿಸಲು ಅವಕಾಶ
  • ಅಪಾರ್ಟ್‌ಮೆಂಟ್‌ ಮಾಲೀಕರ ಸಮಸ್ಯೆಗಳ ಪರಿಹಾರಕ್ಕೆ ಸಮಿತಿ ರಚನೆ
  • ಸಮಸ್ಯೆಗಳ ಪರಿಹಾರಕ್ಕೆ ರಾಜ್ಯಮಟ್ಟದ ಸಲಹಾ ಸಮಿತಿ ರಚನೆಗೆ ಅವಕಾಶ

ಇದನ್ನೂ ಓದಿ:  ರಾಜ್ಯದಲ್ಲಿ 911 ಅಕ್ರಮ ನುಸುಳುಕೋರರ ಪತ್ತೆ: ಪರಿಷತ್‌ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ 1961ರ(1963ರ ಕರ್ನಾಟಕ ಅಧಿನಿಯಮ 11) ಅಡಿಯಲ್ಲಿ ಮಂಜೂರಾದ ಏಕ ಫ್ಲ್ಯಾಟ್‌ ಅನುಮೋದನೆಗಳು/ಅಭಿವೃದ್ಧಿ ಯೋಜನೆ ಅನುಮೋದನೆಗಳ ಭಾಗವಾಗಿರುವ ವಿಲ್ಲಾಗಳನ್ನು ಒಳಗೊಂಡಂತೆ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಕಟ್ಟಡಗಳಲ್ಲಿ 8ಕ್ಕಿಂತ ಹೆಚ್ಚಿನ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಯೋಜನೆಗಳಿಗೆ ಮತ್ತು ಅನುಮೋದಿತ ಬಡಾವಣೆಗಳಲ್ಲಿ ರೂಪುಗೊಂಡಿರುವ ಕಟ್ಟಡ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲಾದ 8ಕ್ಕಿಂತ ಹೆಚ್ಚಿನ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಯೋಜನೆಗಳಿಗೆ ಈ ವಿಧೇಯಕ ಅನ್ವಯವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ