AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ

ಮನ್ರೇಗಾ ಹೆಸರು ಬದಲಾಯಿಸಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ನಡೆಯನ್ನ ಖಂಡಿಸಲೆಂದೇ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ನಿನ್ನೆ ಸಿಎಂ ಸಿದ್ದರಾಮಯ್ಯ ಕಾಯ್ದೆ ವಿರುದ್ಧ ನಿರ್ಣಯವನ್ನೂ ಮಂಡಿಸಿದ್ದರು. ಇಂದು ಅಂಗೀಕಾರವೂ ಆಗಿದೆ. ಸರ್ಕಾರ ತಂದಿರುವ ಈ ನಿರ್ಣಯ ಅಕ್ರಮ ಎಂದು ಆರ್​​. ಅಶೋಕ್ ಕಿಡಿಕಾರಿದ್ದಾರೆ.​

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ
ವಿಧಾನಸಭೆImage Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on: Feb 04, 2026 | 9:52 PM

Share

ಬೆಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ (G-RAM-G) ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಜಾರಿಗೊಳಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದ ಅಧಿಕೃತ ನಿರ್ಣಯವನ್ನು, ವಿರೋಧದ ಮಧ್ಯೆ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕೇಂದ್ರ ಜಾರಿಗೆ ತಂದ ಜಿ ರಾಮ್ ಜಿ ಕಾಯ್ದೆ ವಿರುದ್ಧವೇ ನಿರ್ಣಯ ಮಂಡಿಸಲು ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ಮನ್ರೇಗಾ ಪರವಾಗಿ, ವಿಬಿ ಜಿ ರಾಮ್‌ ಜಿ ವಿರುದ್ಧವಾಗಿ ಸಿಎಂ ಸಿದ್ದರಾಮಯ್ಯ ಸದನದಲ್ಲಿ ನಿನ್ನೆ ನಿರ್ಣಯ ಮಂಡಿಸಿದ್ದರು. ಈ ನಿರ್ಣಯವನ್ನು ಸ್ಪೀಕರ್ ಮತಕ್ಕೆ ಹಾಕಿದ್ದರು. ಧ್ವನಿ ಮತದ ಮೂಲಕ ಖಂಡನಾ ನಿರ್ಣಯ ಅಂಗೀಕಾರವಾಗಿದೆ ಎಂದು ಸ್ಪೀಕರ್ U.T.ಖಾದರ್​ ಪ್ರಕಟಿಸಿದರು. ನಿರ್ಣಯ ಅಂಗೀಕಾರವಾದ ಬಳಿಕ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ನರೇಗಾ ಯೋಜನೆಯನ್ನು ಎಲ್.ಕೆ.ಅಡ್ವಾಣಿ ಹೊಗಳಿದ್ದರು. ಈಗ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಏನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಕಾರ್ಮಿಕರ ಬದುಕಿನ ಬಗ್ಗೆ ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ವರುಣ್ ಗಾಂಧಿ ಪ್ರಶ್ನಿಸಿದ್ದಾರೆ. ಆಗ ಕೇಂದ್ರ ಸರ್ಕಾರ ಪಾದರ್ಶಕವಾಗಿದೆ ಎಂದು ಉತ್ತರಿಸಿದೆ. ಆದರೆ ಈಗ ಮನ್​ರೇಗಾ ಕಾಯ್ದೆಯನ್ನೇ ಬದಲಾಯಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರ ತಂದಿರುವ ನಿರ್ಣಯ ಅಕ್ರಮ ಎಂದ ಆರ್.ಅಶೋಕ್

ಇನ್ನು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಿಧಾನಸಭೆಯಲ್ಲಿ ದೌರ್ಜನ್ಯ ಮಾಡಿ ನಿರ್ಣಯ ತಂದಿದ್ದಾರೆ. ಸರ್ಕಾರ ತಂದಿರುವ ನಿರ್ಣಯ ಅಕ್ರಮ. 5 ಗಂಟೆಗಳ ಮೇಲೆ ಚರ್ಚೆ ಆಗಬಾರದೆಂದು ನಿಯಮವಿದೆ, ಏಳು ದಿನ ಮೊದಲೇ ನೋಟಿಸ್ ಕೊಟ್ಟಿಲ್ಲ. ಸ್ಪೀಕರ್ ನಡೆ ಸರಿ ಇಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು

ಜಿ ರಾಮ್ ಜಿ ಯೋಜನೆ ಪಾರದರ್ಶಕವಾಗಿದೆ. ಕಮಿಷನ್ ಹೊಡೆಯಲು ಆಗಲ್ಲ, ಕೇಂದ್ರದ ನಿಗಾ ಇರುತ್ತೆ. BJB-ಜೆಡಿಎಸ್ ಒಟ್ಟಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. 40-50 ಸಾವಿರ ಕೋಟಿ ರೂ ಹಣವನ್ನು ಲೂಟಿ ಮಾಡಿದ್ದಾರೆ. ಅಬಕಾರಿ ಇಲಾಖೆ ಲೂಟಿ, ಹಗರಣ ಬಯಲಿಗೆಳೆದಿದ್ದೇವೆ. ತನಿಖೆ ಆಗಬೇಕು, ಅಬಕಾರಿ ಮಂತ್ರಿ ರಾಜೀನಾಮೆ ಕೊಡಬೇಕು. ನಮ್ಮ ಧರಣಿ ನಿಲ್ಲಲ್ಲ, ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಅರವಿಂದ ಬೆಲ್ಲದ್ ಹೇಳಿದಿಷ್ಟು 

ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿ, ವಿಬಿ ಜಿ ರಾಮ್‌ ಜಿ ಯೋಜನೆಗೆ ಕೇಂದ್ರ ಸರ್ಕಾರ ಹಣವನ್ನು ಕೊಡಬೇಕು ಎನ್ನುವುದು ಕಾಂಗ್ರೆಸ್ ಟೀಕೆ. ವಾಜಪೇಯಿ ಸರ್ವಶಿಕ್ಷಾ ಅಭಿಯಾನ‌ ತಂದಿದ್ದರು. ನಂತರ ಯುಪಿಎ ಸರ್ಕಾರ ಆ ಯೋಜನೆಗೆ 50-50 ಅನುಪಾತ ಜಾರಿಗೆ ತಂದರು. ಯುಪಿಎ ಅವಧಿಯಲ್ಲಿಯೂ ಕೇಂದ್ರದ ಪಾಲನ್ನು ಕಡಿಮೆ ಮಾಡಿಕೊಳ್ಳುತ್ತಾ ಬಂದರು. ಕಾಂಗ್ರೆಸ್ ಸಹ ಹೊಸ ಕಾನೂನು ಜಾರಿ ಮಾಡಲು ಅನುದಾನ ಕಡಿಮೆ ಮಾಡಿತು. ಮನ್ರೇಗಾದಲ್ಲಿ ಲೂಟಿ ಹೊಡೆಯುತ್ತಿದ್ದರೆಂದು ಹಳ್ಳಿಯ ಜನರು ಹೇಳುತ್ತಾರೆ. ವೋಟ್ ಚೋರಿ ಎನ್ನುವ ಅಭಿಯಾನ ಮಾಡಿದರು. ಈಗ ಇದನ್ನು ಆರಂಭಿಸಿದ್ದಾರೆ, ಇದರಲ್ಲೂ ಮುಖಭಂಗ ಅನುಭವಿಸುತ್ತಾರೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ