AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Traders Strike: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!

Bengaluru Tax Crackdown: ಬೇಕರಿ, ಕಾಂಡಿಮೆಂಟ್ಸ್, ಚಹಾ ಅಂಗಡಿಗಳಿಗೆ ಲಕ್ಷ ಲಕ್ಷ ರೂ. ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದ್ದು, ಇದರಿಂದ ಮಾಲೀಕರು ಕಂಗಲಾಗಿದ್ದಾರೆ. ತೆರಿಗೆ ಮನ್ನಾ ಮಾಡದೇ ಇದ್ದರೆ ಬಂದ್ ಅಸ್ತ್ರಕ್ಕೆ ಮುಂದಾಗಿದ್ದು, ಬೇಕರಿ, ಕಾಂಡಿಮೆಂಟ್ಸ್ ಜತೆ ಹಾಲು ಮಾರಾಟವೂ ಬಂದ್ ಆಗಲಿದೆ. ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಮೂರು ದಿನ ಬಂದ್ ಆಗಲಿದೆ. ಯಾವಾಗಲೆಲ್ಲ ಎಂಬ ಮಾಹಿತಿ ಇಲ್ಲಿದೆ.

Karnataka Traders Strike: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Jul 17, 2025 | 11:18 AM

Share

ಬೆಂಗಳೂರು, ಜುಲೈ 17: ಮೂವತ್ತು ಲಕ್ಷ, 60 ಲಕ್ಷ, ಕೊನೆಗೆ 1 ಕೋಟಿ ರೂ. ಹೀಗೆ ಲಕ್ಷ ಕೋಟಿ ರೂ. ಲೆಕ್ಕದಷ್ಟು ತೆರಿಗೆ ಪಾವತಿ (Tax Payment)  ಮಾಡಿ ಎಂದು ಬೇಕರಿ, ಚಹಾ ಅಂಗಡಿ, ಕಾಂಡಿಮೆಂಟ್ಸ್​ಗಳಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Karnataka Commercial Tax Department) ನೋಟಿಸ್ ನೀಡಲಾಗಿದ್ದೇ ತಡ ಮಾಲೀಕರು ಗಾಬರಿಯಾಗಿದ್ದಾರೆ. ಅಲ್ಲದೇ ಜುಲೈ 21 ರೊಳಗೆ ಪಾವತಿ ಮಾಡದೇ ಇದ್ದರೆ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ತೆರಿಗೆ ಇಲಾಖೆ ನೀಡಿದೆ. ಈ ತೆರಿಗೆಯನ್ನು ಮನ್ನಾ ಮಾಡುವಂತೆ ಸರ್ಕಾರ ಹಾಗೂ ತೆರಿಗೆ ಇಲಾಖೆಗೆ ಈಗಾಗಲೇ ವರ್ತಕರು ಮನವಿ ಸಲ್ಲಿಕೆ ಮಾಡಿದ್ದು, ಹತ್ತು ದಿನಗಳ ಗಡುವು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಡಿಮೆಂಟ್ಸ್ ಮಾಲೀಕ ಚಿಕ್ಕಯ್ಯ, ಸರ್ಕಾರ ಈ ತೆರಿಗೆ ಮನ್ನಾ ಮಾಡದಿದ್ದರೆ ವಿಷ ತಗೊಂಡು ಸಾಯುವುದಷ್ಟೇ ನಮಗೆ ದಾರಿ. ನಮ್ದು ಸಣ್ಣದಾದ ಕಾಂಡಿಮೆಂಟ್ಸ್ ಇದೆ. ಟೀ,ಕಾಫಿ, ಬ್ರೇಡ್‌, ಪೇಪರ್ ಮಾರಾಟ ಮಾಡುತ್ತೇವೆ. ನಮಗೆ ಈ ಜಿಎಸ್​​ಟಿ ಅಂದರೆ ಏನು ಎಂದು ಗೊತ್ತಿಲ್ಲ. ಏಕಾಏಕಿ 23 ಲಕ್ಷ ರೂ. ತೆರಿಗೆ ಪಾವತಿಸಿ ಎಂದರೆ ಹೇಗೆ? ನಾವು ಮಾಡಿರುವ ಸಾಲವನ್ನು ಪಾವತಿಸಲು ಆಗುತ್ತಿಲ್ಲ. ಜುಲೈ 25 ರಂದು ನಮ್ಮ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಧರಣಿ ಮಾಡುತ್ತೇವೆ. ನಾವು ಸಾಯಲು ಸಿದ್ದರಾಗಿದ್ದೇವೆ ಎಂದರು.

ಹಾಲು, ಹಾಲಿನ ಉತ್ಪನ್ನ ಮಾರಾಟ ಮೂರು ದಿನ ಬಂದ್

  • ಜುಲೈ 23, 24, 25 ರಂದು ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಬಂದ್.
  • ಜುಲೈ 25 ರಂದು ರಾಜ್ಯಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡ ಅಂಗಡಿ ಬಂದ್.
  • ಸಿಗರೇಟ್ ಮಾರಾಟವೂ ಬಂದ್.
  • ಕೆಲ ತರಕಾರಿ ಅಂಗಡಿಯೂ ಬಂದ್.

ಬೇಕರಿ ಮಾಲೀಕ ದಿನೇಶ್ ಆರ್.ಕೆ. ಪ್ರತಿಕ್ರಿಯಿಸಿ, ನಮಗೆ ನಾಲ್ಕು ವರ್ಷದ ವ್ಯಾಪಾರ ವಹಿವಾಟಿನ ಮೇಲೆ 62 ಲಕ್ಷ ರೂ. ಟ್ಯಾಕ್ಸ್ ನೋಟಿಸ್ ಕೊಟ್ಟಿದ್ದಾರೆ. 62 ಲಕ್ಷ ರೂ. ಹಣವನ್ನು ನೋಡಿಯೇ ಇಲ್ಲ ನಾನು. ವ್ಯಾಪಾರ ಮಾಡುವುದೆಲ್ಲ ಅಲ್ಲಿಗೆ ಸರಿ ಆಗುತ್ತದೆ. 62 ಲಕ್ಷ ರುಪಾಯಿ ಕಟ್ಟಲು ಆಗುವುದಿಲ್ಲ. ಇನ್ಮುಂದೆ ಆಗುವ ವ್ಯಾಪಾರ ವಹಿವಾಟಿಗೆ ಟ್ಯಾಕ್ಸ್ ಪಾವತಿ ಮಾಡುತ್ತೇನೆ. 23 ರಿಂದ ಹಾಲು, ಮೊಸರು, ಬ್ರೆಡ್ ಎಲ್ಲಾ ವ್ಯಾಪಾರ ನಿಲ್ಲಿಸುತ್ತೇವೆ. 25ಕ್ಕೆ ನಮ್ಮ ಅಂಗಡಿ ಬಂದ್ ಮಾಡಿ ಕುಟುಂಬದ ಜೊತೆಯಲ್ಲಿ, ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತೇವೆ. ಈ ಬಾರಿ ತೆರಿಗೆ ಮನ್ನಾ ಮಾಡಿಕೊಡಿ. ಮುಂದಿನ ದಿನಗಳಲ್ಲಿ ಪಾವತಿ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ
Image
ಶಾಸಕರು, ಸಚಿವರ ಜತೆ ಸುರ್ಜೇವಾಲ ಸಭೆಗೆ ಕಾಂಗ್ರೆಸ್​ನಲ್ಲೇ ಆಕ್ಷೇಪ!
Image
ಎಐಸಿಸಿ ಒಬಿಸಿ ಮಂಡಳಿ ಸಭೆಯಲ್ಲಿ 3 ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ: ಸಿಎಂ
Image
ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ
Image
ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ

ಇದನ್ನೂ ಓದಿ: ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ

ಒಟ್ಟಿನಲ್ಲಿ ಫೋನ್ ಪೇ, ಗೂಗಲ್ ಪೇ ಸಂಸ್ಥೆಯೇ ಖುದ್ದಾಗಿ ಮಾಲೀಕರ ಹಣಕಾಸು ವಹಿವಾಟಿನ ವಿವರ ನೀಡಿವೆ ಎಂದು ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರಂತೆ. ಟ್ಯಾಕ್ಸ್ ಜಟಾಪಟಿ ಯಾವ ಹಂತವನ್ನು ಮುಟ್ಟುತ್ತದೆಯೋ ಕಾದು ನೋಡಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Thu, 17 July 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್