AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Traders Strike: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!

Bengaluru Tax Crackdown: ಬೇಕರಿ, ಕಾಂಡಿಮೆಂಟ್ಸ್, ಚಹಾ ಅಂಗಡಿಗಳಿಗೆ ಲಕ್ಷ ಲಕ್ಷ ರೂ. ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದ್ದು, ಇದರಿಂದ ಮಾಲೀಕರು ಕಂಗಲಾಗಿದ್ದಾರೆ. ತೆರಿಗೆ ಮನ್ನಾ ಮಾಡದೇ ಇದ್ದರೆ ಬಂದ್ ಅಸ್ತ್ರಕ್ಕೆ ಮುಂದಾಗಿದ್ದು, ಬೇಕರಿ, ಕಾಂಡಿಮೆಂಟ್ಸ್ ಜತೆ ಹಾಲು ಮಾರಾಟವೂ ಬಂದ್ ಆಗಲಿದೆ. ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಮೂರು ದಿನ ಬಂದ್ ಆಗಲಿದೆ. ಯಾವಾಗಲೆಲ್ಲ ಎಂಬ ಮಾಹಿತಿ ಇಲ್ಲಿದೆ.

Karnataka Traders Strike: ಬೇಕರಿ, ಕಾಂಡಿಮೆಂಡ್ಸ್ ಬಂದ್ ಅಷ್ಟೇ ಅಲ್ಲ: ಈ ಮೂರು ದಿನ ಹಾಲು, ಹಾಲಿನ ಉತ್ಪನ್ನವೂ ಸಿಗಲ್ಲ!
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on:Jul 17, 2025 | 11:18 AM

Share

ಬೆಂಗಳೂರು, ಜುಲೈ 17: ಮೂವತ್ತು ಲಕ್ಷ, 60 ಲಕ್ಷ, ಕೊನೆಗೆ 1 ಕೋಟಿ ರೂ. ಹೀಗೆ ಲಕ್ಷ ಕೋಟಿ ರೂ. ಲೆಕ್ಕದಷ್ಟು ತೆರಿಗೆ ಪಾವತಿ (Tax Payment)  ಮಾಡಿ ಎಂದು ಬೇಕರಿ, ಚಹಾ ಅಂಗಡಿ, ಕಾಂಡಿಮೆಂಟ್ಸ್​ಗಳಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Karnataka Commercial Tax Department) ನೋಟಿಸ್ ನೀಡಲಾಗಿದ್ದೇ ತಡ ಮಾಲೀಕರು ಗಾಬರಿಯಾಗಿದ್ದಾರೆ. ಅಲ್ಲದೇ ಜುಲೈ 21 ರೊಳಗೆ ಪಾವತಿ ಮಾಡದೇ ಇದ್ದರೆ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ತೆರಿಗೆ ಇಲಾಖೆ ನೀಡಿದೆ. ಈ ತೆರಿಗೆಯನ್ನು ಮನ್ನಾ ಮಾಡುವಂತೆ ಸರ್ಕಾರ ಹಾಗೂ ತೆರಿಗೆ ಇಲಾಖೆಗೆ ಈಗಾಗಲೇ ವರ್ತಕರು ಮನವಿ ಸಲ್ಲಿಕೆ ಮಾಡಿದ್ದು, ಹತ್ತು ದಿನಗಳ ಗಡುವು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಡಿಮೆಂಟ್ಸ್ ಮಾಲೀಕ ಚಿಕ್ಕಯ್ಯ, ಸರ್ಕಾರ ಈ ತೆರಿಗೆ ಮನ್ನಾ ಮಾಡದಿದ್ದರೆ ವಿಷ ತಗೊಂಡು ಸಾಯುವುದಷ್ಟೇ ನಮಗೆ ದಾರಿ. ನಮ್ದು ಸಣ್ಣದಾದ ಕಾಂಡಿಮೆಂಟ್ಸ್ ಇದೆ. ಟೀ,ಕಾಫಿ, ಬ್ರೇಡ್‌, ಪೇಪರ್ ಮಾರಾಟ ಮಾಡುತ್ತೇವೆ. ನಮಗೆ ಈ ಜಿಎಸ್​​ಟಿ ಅಂದರೆ ಏನು ಎಂದು ಗೊತ್ತಿಲ್ಲ. ಏಕಾಏಕಿ 23 ಲಕ್ಷ ರೂ. ತೆರಿಗೆ ಪಾವತಿಸಿ ಎಂದರೆ ಹೇಗೆ? ನಾವು ಮಾಡಿರುವ ಸಾಲವನ್ನು ಪಾವತಿಸಲು ಆಗುತ್ತಿಲ್ಲ. ಜುಲೈ 25 ರಂದು ನಮ್ಮ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಧರಣಿ ಮಾಡುತ್ತೇವೆ. ನಾವು ಸಾಯಲು ಸಿದ್ದರಾಗಿದ್ದೇವೆ ಎಂದರು.

ಹಾಲು, ಹಾಲಿನ ಉತ್ಪನ್ನ ಮಾರಾಟ ಮೂರು ದಿನ ಬಂದ್

  • ಜುಲೈ 23, 24, 25 ರಂದು ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಬಂದ್.
  • ಜುಲೈ 25 ರಂದು ರಾಜ್ಯಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡ ಅಂಗಡಿ ಬಂದ್.
  • ಸಿಗರೇಟ್ ಮಾರಾಟವೂ ಬಂದ್.
  • ಕೆಲ ತರಕಾರಿ ಅಂಗಡಿಯೂ ಬಂದ್.

ಬೇಕರಿ ಮಾಲೀಕ ದಿನೇಶ್ ಆರ್.ಕೆ. ಪ್ರತಿಕ್ರಿಯಿಸಿ, ನಮಗೆ ನಾಲ್ಕು ವರ್ಷದ ವ್ಯಾಪಾರ ವಹಿವಾಟಿನ ಮೇಲೆ 62 ಲಕ್ಷ ರೂ. ಟ್ಯಾಕ್ಸ್ ನೋಟಿಸ್ ಕೊಟ್ಟಿದ್ದಾರೆ. 62 ಲಕ್ಷ ರೂ. ಹಣವನ್ನು ನೋಡಿಯೇ ಇಲ್ಲ ನಾನು. ವ್ಯಾಪಾರ ಮಾಡುವುದೆಲ್ಲ ಅಲ್ಲಿಗೆ ಸರಿ ಆಗುತ್ತದೆ. 62 ಲಕ್ಷ ರುಪಾಯಿ ಕಟ್ಟಲು ಆಗುವುದಿಲ್ಲ. ಇನ್ಮುಂದೆ ಆಗುವ ವ್ಯಾಪಾರ ವಹಿವಾಟಿಗೆ ಟ್ಯಾಕ್ಸ್ ಪಾವತಿ ಮಾಡುತ್ತೇನೆ. 23 ರಿಂದ ಹಾಲು, ಮೊಸರು, ಬ್ರೆಡ್ ಎಲ್ಲಾ ವ್ಯಾಪಾರ ನಿಲ್ಲಿಸುತ್ತೇವೆ. 25ಕ್ಕೆ ನಮ್ಮ ಅಂಗಡಿ ಬಂದ್ ಮಾಡಿ ಕುಟುಂಬದ ಜೊತೆಯಲ್ಲಿ, ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತೇವೆ. ಈ ಬಾರಿ ತೆರಿಗೆ ಮನ್ನಾ ಮಾಡಿಕೊಡಿ. ಮುಂದಿನ ದಿನಗಳಲ್ಲಿ ಪಾವತಿ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ
Image
ಶಾಸಕರು, ಸಚಿವರ ಜತೆ ಸುರ್ಜೇವಾಲ ಸಭೆಗೆ ಕಾಂಗ್ರೆಸ್​ನಲ್ಲೇ ಆಕ್ಷೇಪ!
Image
ಎಐಸಿಸಿ ಒಬಿಸಿ ಮಂಡಳಿ ಸಭೆಯಲ್ಲಿ 3 ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ: ಸಿಎಂ
Image
ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ
Image
ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ

ಇದನ್ನೂ ಓದಿ: ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ

ಒಟ್ಟಿನಲ್ಲಿ ಫೋನ್ ಪೇ, ಗೂಗಲ್ ಪೇ ಸಂಸ್ಥೆಯೇ ಖುದ್ದಾಗಿ ಮಾಲೀಕರ ಹಣಕಾಸು ವಹಿವಾಟಿನ ವಿವರ ನೀಡಿವೆ ಎಂದು ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರಂತೆ. ಟ್ಯಾಕ್ಸ್ ಜಟಾಪಟಿ ಯಾವ ಹಂತವನ್ನು ಮುಟ್ಟುತ್ತದೆಯೋ ಕಾದು ನೋಡಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Thu, 17 July 25

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ