ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ

Karnataka Bandh: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್ 13) ಕರ್ನಾಟಕ ಬಂದ್​​ಗೆ ಕರೆ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ಮತ್ತು ಸ್ಥಳೀಯ ಸಾರಿಗೆ ವ್ಯವಸ್ಥೆ ಎಂದಿನಂತೆ ಆರಂಭವಾಗಿದೆ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿಗೆ ತೆರಳುವ ಬಸ್‌ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಕಾರಣ ನೆರೆ ರಾಜ್ಯದ ಪ್ರಯಾಣಿಕರಿಗೆ ಕೊಂಚ ಅನಾನುಕೂಲವಾಗಿದೆ.

ಕರ್ನಾಟಕ ಬಂದ್​​: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ
ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ
Image Credit source: Tv9 Kannada
Edited By:

Updated on: Aug 13, 2026 | 7:38 AM

ಮುಖ್ಯಾಂಶಗಳು

  • ಕಾವೇರಿ ಜಲ ವಿವಾದ ಸಂಬಂಧ ಇಂದು ಕರ್ನಾಟಕ ಬಂದ್​​
  • ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್​ಗಳಿಗೆ ತಾತ್ಕಾಲಿಕ ತಡೆ
  • ಉಳಿದಂತೆ ನಗರದಲ್ಲಿ ಎಂದಿನಂತೆ ಬಸ್​​, ವಾಹನಗಳ ಸಂಚಾರ

ಬೆಂಗಳೂರು, ಆಗಸ್ಟ್​​ 13: ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್​ 13) ಕರ್ನಾಟಕ ಬಂದ್​​ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್​​ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸ್ಯಾಟ್​ಲೈಟ್​ ಬಸ್ ನಿಲ್ದಾಣದಿಂದ ತಮಿಳುನಾಡಿನ ಪ್ರಮುಖ ನಗರಗಳಾದ ಊಟಿ, ತಿರುವಣ್ಣಾಮಲೈ, ತಲ್ಲಕುರ್ಚಿ, ಸೇಲಂ, ವೇಲೂರು, ಕಲ್ಪಕಂ,‌ ಕಾಂಜಿವರಂ, ವಂದಾವಾಸಿ, ತಿರುವಳ್ಳೂರು, ಉಳುಂದೂರು ಪೇಟೆ, ತಿರುಪ್ಪತ್ತೂರು, ಕಡಲೂರು, ತಿರುತ್ತಣಿ, ತಿಟ್ಟಕುಡಿ, ತಿರುಕ್ಕೋವಿಲೂರು, ಚಿದಂಬರಂ, ವಿರುತ್ತಾಚಲಂ ಸೇರಿ ಹಲವು ಊರುಗಳಿಗೆ ತೆರಳಬೇಕಿದ್ದ ಬಸ್​​ಗಖ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಸಹಜ ಸ್ಥಿತಿಯಲ್ಲಿರುವ ವಾಹನಗಳ ಸಂಚಾರ

Karnataka Bandh: ಬಂದ್ ಕರೆ ಇದ್ದರೂ ವಾಹನ ಸಂಚಾರಕ್ಕಿಲ್ಲ ಅಡ್ಡಿ! ಬಿಎಂಟಿಸಿ ಬಸ್ ಗಳ ಸಂಚಾರ ಆರಂಭ!

ಉಳಿದಂತೆ ರಾಜ್ಯದ ವಿವಿಧೆಡೆ ಸಂಚರಿಸುವ ಬಸ್​ಗಳ ಸಹಜ ಸ್ಥಿತಿಯಲ್ಲಿ ಆರಂಭವಾಗಿದ್ದು, ಮೈಸೂರು, ಟಿ.ನರಸೀಪುರ, ಹುಣಸೂರು, ರಾಮನಗರ, ಚನ್ನಪಟ್ಟಣ, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ಮಡಿಕೇರಿ, ಕುಶಾಲ ನಗರ, ಮಂಗಳೂರು ಸೇರಿ ಹಲವು ಕಡೆಗೆ KSRTC ಬಸ್​ಗಳು ಸಂಚಾರ ಆರಂಭಿಸಿವೆ.

ಇದನ್ನೂ ಓದಿ: ಇಂದು ಕರ್ನಾಟಕ ಬಂದ್​​; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್​​

ಹೇಗಿದೆ ಏರ್​ಪೋರ್ಟ್​​ ಬಳಿಯ ಸ್ಥಿತಿ?

ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯಾ ವಿಮಾನ ನಿಲ್ಥಾಣದಲ್ಲಿಯೂ ಎಂದಿನಂತೆ ಕ್ಯಾಬ್ಗಳ ಸಂಚಾರವಿದ್ದು, ಬಂದ್ ಹಿನ್ನೆಲೆ ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ಓಡಾಟ ಕಂಡುಬಂದಿದೆ. ಬಂದ್​​ನಿಂದ‌ ಕ್ಯಾಬ್ಗಳು ಇರುತ್ತೋ? ಇಲ್ವೋ? ಎಂಬ ಆತಂಕದಲ್ಲಿಯೇ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ಟರ್ಮಿನಲ್ 1 ಮತ್ತು 2ರಲ್ಲಿ ಎಂದಿನಂತೆ ಕ್ಯಾಬ್ ಸೇರಿದಂತೆ ಖಾಸಗಿ ವಾಹನಗಳ ಸಂಚಾರವಿದೆ. ಡ್ರಾಪ್ ಮತ್ತು ಪಿಕಪ್​​ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೀಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಏರ್ಪೋಟ್ ಆವರಣದಲ್ಲಿಯೂ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:31 am, Thu, 13 August 26

Loading...
Unable to load recommendations.
Follow Us