AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಶಾಂತಿಯುತ: ಸಹಜ ಸ್ಥಿತಿಯತ್ತ ರಾಜಧಾನಿ

ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರು ನಗರದ ಬಹುತೇಕ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಮಲ್ಲೇಶ್ವರಂ ಭಾಗದಲ್ಲಿ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗಿಳಿದಿವೆ. ಹೂವಿನ ಮಾರುಕಟ್ಟೆ ಓಪನ್ ಇದ್ದರೂ ವ್ಯಾಪಾರ ಇಲ್ಲ ಎಂದು ಮಾಲೀಕರು ಅಳಲುತೋಡಿಕೊಂಡಿದ್ದಾರೆ. ನೀರು ಬೇಕು ವ್ಯಾಪಾರವೂ ಬೇಕು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಶಾಂತಿಯುತ: ಸಹಜ ಸ್ಥಿತಿಯತ್ತ ರಾಜಧಾನಿ
ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆಯೇ ರಸ್ತೆಗಿಳಿದ ಬಸ್​ಗಳು
Jagadisha B
| Edited By: |

Updated on: Sep 29, 2023 | 6:10 PM

Share

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ (Karnataka Bandh) ಬೆಂಗಳೂರಿನಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ (B Dayanand) ತಿಳಿಸಿದರು. ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕೆಲವು ಸಂಘಟನೆ, ರಾಜಕೀಯ ಪಕ್ಷಗಳು ಇವತ್ತಿನ ಬಂದ್​ಗೆ ಕರೆ ಕೊಟ್ಟಿದ್ದವು. ಬೆಂಗಳೂರಿನಲ್ಲಿ ಶಾಂತಿಯುತವಾಗಿ ನಡೆದಿದೆ. ಗುರುವಾರ ರಾತ್ರಿಯಿಂದಲೇ ಪೊಲೀಸರನ್ನು ನಿಯೋಜಿಸಲಾಗಿತ್ತು. ಇಡೀ ದಿನ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಬೆಂಗಳೂರಿನಲ್ಲಿ ನಡೆದಿಲ್ಲ ಎಂದು ತಿಳಿಸಿದರು.

ಕೆಲವು ಭಾಗಗಳಲ್ಲಿ ರ್ಯಾಲಿ, ಪ್ರತಿಭಟನೆ ಮಾಡಿದಾಗ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಯಲ್ಲಿ ಇದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಹಲವರನ್ನು ಬಂಧಿಸಲಾಗಿದೆ. ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿತ್ತು. ವಿವಿಧ ಸಂಘಟನೆಗಳ ಸುಮಾರು ಒಂದೂವರೆ ಸಾವಿರದಷ್ಟು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದ 785 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ಮಧ್ಯೆ, ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರು ನಗರದ ಬಹುತೇಕ ಪ್ರದೇಶಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಮಲ್ಲೇಶ್ವರಂ ಭಾಗದಲ್ಲಿ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ರಸ್ತೆಗಿಳಿದಿವೆ. ಹೂವಿನ ಮಾರುಕಟ್ಟೆ ಓಪನ್ ಇದ್ದರೂ ವ್ಯಾಪಾರ ಇಲ್ಲ ಎಂದು ಮಾಲೀಕರು ಅಳಲುತೋಡಿಕೊಂಡಿದ್ದಾರೆ. ನೀರು ಬೇಕು ವ್ಯಾಪಾರವೂ ಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಾದಕ್ಕಿಲ್ಲ ಕಿಂಚಿತ್ತೂ ಕಿಮ್ಮತ್ತು: ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ

ರಾಜ್ಯದ ಇತರ ನಗರಗಳಾದ ಮೈಸೂರು, ಹಾಸನಗಳಲ್ಲಿಯೂ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಹಾಸನದಲ್ಲಿ ಬಂದ್ ಅವದಿ ಮುಗಿಯುತ್ತಲೇ ವರ್ತಕರು ವ್ಯಾಪಾರ ವಹಿವಾಟು ಆರಂಬಿಸಿದರು. ಹಾಸನದ ಮುಖ್ಯ ರಸ್ತೆಗಳು ಸಹಜ ಸ್ಥಿತಿಯತ್ತ ಮರಳಿವೆ. ಸಾರಿಗೆ ಬಸ್ ಸಂಚಾರ ಕೂಡ ಸಹಜ ಸ್ಥಿತಿಗೆ ಮರಳಿದೆ. ಮೈಸೂರಿನಲ್ಲಿ ಕೂಡ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು, ವರ್ತಕರು ಅಂಗಡಿ ಮುಂಗಟ್ಟುಗಳನ್ನು ತೆರೆಯುತ್ತಿದ್ದಾರೆ. ಮೈಸೂರು ಹಾಗೂ ಬೆಂಗಳೂರು ಮಧ್ಯೆ ಬಸ್​ ಸಂಚಾರವೂ ಆರಂಭಗೊಂಡಿದೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!