AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶವನ್ನ ವಿರೋಧಿಸಿ ಇಂದು(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಬಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ.

Karnataka Bandh: ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​
CM Home
Sunil MH
| Edited By: |

Updated on:Sep 29, 2023 | 11:07 AM

Share

ಬೆಂಗಳೂರು, ಸೆ.29: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶವನ್ನ ವಿರೋಧಿಸಿ ಇಂದು(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​(Karnataka Bandh)ಗೆ ಕರೆ ನೀಡಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಬಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ. ಹೌದು, ಸಿಎಂ ನಿವಾಸ ಕಾವೇರಿ ಹಾಗೂ ಕಚೇರಿ ಕೃಷ್ಣಾ ಬಳಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದ್ದು,  3 ಕೆಎಸ್ ಆರ್ ಪಿ ತುಕಡಿಗಳು, ವಾಟರ್ ಜೆಟ್ ವಾಹನ ಸೇರಿ 30 ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ.

ಸಿಎಂ ನಿವಾಸದಲ್ಲಿ ಬಳಿ ಖಾಕಿ ಆಲರ್ಟ್

ಹೌದು, ಬಂದ್​ ಹಿನ್ನಲೆ ಸಿಎಂ ಮನೆ ಮುಂದೆ ಭದ್ರತೆ ಅಳವಡಿಸಲಾಗಿತ್ತು. ಆದರೆ, ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸಿಎಂ ನಿವಾಸ ಮತ್ತು ಗೃಹ ಕಛೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ದಿಢೀರ್‌ ಪೊಲೀಸ್ ಭದ್ರತೆಯನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ. ಜೊತೆಗೆ ಸಿಎಂ ನಿವಾಸಕ್ಕೆ ಡಿಜಿಪಿ ಅಲೋಕ್ ಮೋಹನ್ ಮತ್ತು ಪೊಲೀಸ್ ಆಯುಕ್ತ ದಯಾನಂದ ಆಗಮಿಸಿ, ಬಂದ್ ಪರಿಸ್ಥಿತಿ ಬಗ್ಗೆ ಹಾಗೂ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬಂದ್ ಹಿನ್ನಲೆ ಕಾನೂನು ಸುವ್ಯವಸ್ಥೆಯ ಕಡೆ ಹೆಚ್ಚು ಗಮನ ನೀಡುವಂತೆ ಸೂಚಿಸಿದ್ದು, ಪ್ರತಿ ಜಿಲ್ಲೆಯ ಬಂದ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ:Karnataka Bandh: ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ, ಬಿಎಂಟಿಸಿ ಬಸ್ ನಿಲ್ದಾಣದಿಂದ ಕದಲದ ವಾಹನಗಳು, ಜನರ ಪರದಾಟ

ಕೆಪಿಸಿಸಿ ಕಚೇರಿಗೂ ತಟ್ಟಿದ ಕಾವೇರಿ ಕಿಚ್ಚು

ಇನ್ನು ಕಾವೇರಿ ಕಿಚ್ಚು ಬೆಂಗಳೂರಿನ ಕೆಪಿಸಿಸಿ ಕಚೇರಿಗೂ ತಟ್ಟಿದೆ. ಹೌದು, ಬೈಕ್ ರ್ಯಾಲಿ ಮೂಲಕ ತೆರಳುತ್ತಿದ್ದ ಕನ್ನಡಪರ ಹೋರಾಟಗಾರು, ಈ ವೇಳೆ ಕೆಪಿಸಿಸಿ ಕಚೇರಿ ಎದುರು ಬೈಕ್ ನಿಲ್ಲಿಸಿ ಕನ್ನಡಪರ ಸಂಘಟನೆಗಳು  ಘೋಷಣೆ ಕೂಗಿ ಪ್ರತಿಭಟನೆ ನಡೆಸಿವೆ. ‘ಕಾವೇರಿ ನಮ್ಮದು ಎಂದು ಘೋಷಣೆ ಕೂಗುವ ಮೂಲಕ ಸರ್ಕಾರಕ್ಕೆ ದಿಕ್ಕಾರ ಎಂದು ಕೂಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Fri, 29 September 23

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?