Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​

ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶವನ್ನ ವಿರೋಧಿಸಿ ಇಂದು(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಬಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ.

Karnataka Bandh: ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್​
CM Home
Follow us
Sunil MH
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 29, 2023 | 11:07 AM

ಬೆಂಗಳೂರು, ಸೆ.29: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶವನ್ನ ವಿರೋಧಿಸಿ ಇಂದು(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​(Karnataka Bandh)ಗೆ ಕರೆ ನೀಡಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಬಿಗಿ ಪೊಲೀಸ್ ಭದ್ರತೆ ಅಳವಡಿಸಲಾಗಿದೆ. ಹೌದು, ಸಿಎಂ ನಿವಾಸ ಕಾವೇರಿ ಹಾಗೂ ಕಚೇರಿ ಕೃಷ್ಣಾ ಬಳಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದ್ದು,  3 ಕೆಎಸ್ ಆರ್ ಪಿ ತುಕಡಿಗಳು, ವಾಟರ್ ಜೆಟ್ ವಾಹನ ಸೇರಿ 30 ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ.

ಸಿಎಂ ನಿವಾಸದಲ್ಲಿ ಬಳಿ ಖಾಕಿ ಆಲರ್ಟ್

ಹೌದು, ಬಂದ್​ ಹಿನ್ನಲೆ ಸಿಎಂ ಮನೆ ಮುಂದೆ ಭದ್ರತೆ ಅಳವಡಿಸಲಾಗಿತ್ತು. ಆದರೆ, ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸಿಎಂ ನಿವಾಸ ಮತ್ತು ಗೃಹ ಕಛೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ದಿಢೀರ್‌ ಪೊಲೀಸ್ ಭದ್ರತೆಯನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ. ಜೊತೆಗೆ ಸಿಎಂ ನಿವಾಸಕ್ಕೆ ಡಿಜಿಪಿ ಅಲೋಕ್ ಮೋಹನ್ ಮತ್ತು ಪೊಲೀಸ್ ಆಯುಕ್ತ ದಯಾನಂದ ಆಗಮಿಸಿ, ಬಂದ್ ಪರಿಸ್ಥಿತಿ ಬಗ್ಗೆ ಹಾಗೂ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬಂದ್ ಹಿನ್ನಲೆ ಕಾನೂನು ಸುವ್ಯವಸ್ಥೆಯ ಕಡೆ ಹೆಚ್ಚು ಗಮನ ನೀಡುವಂತೆ ಸೂಚಿಸಿದ್ದು, ಪ್ರತಿ ಜಿಲ್ಲೆಯ ಬಂದ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ:Karnataka Bandh: ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ, ಬಿಎಂಟಿಸಿ ಬಸ್ ನಿಲ್ದಾಣದಿಂದ ಕದಲದ ವಾಹನಗಳು, ಜನರ ಪರದಾಟ

ಕೆಪಿಸಿಸಿ ಕಚೇರಿಗೂ ತಟ್ಟಿದ ಕಾವೇರಿ ಕಿಚ್ಚು

ಇನ್ನು ಕಾವೇರಿ ಕಿಚ್ಚು ಬೆಂಗಳೂರಿನ ಕೆಪಿಸಿಸಿ ಕಚೇರಿಗೂ ತಟ್ಟಿದೆ. ಹೌದು, ಬೈಕ್ ರ್ಯಾಲಿ ಮೂಲಕ ತೆರಳುತ್ತಿದ್ದ ಕನ್ನಡಪರ ಹೋರಾಟಗಾರು, ಈ ವೇಳೆ ಕೆಪಿಸಿಸಿ ಕಚೇರಿ ಎದುರು ಬೈಕ್ ನಿಲ್ಲಿಸಿ ಕನ್ನಡಪರ ಸಂಘಟನೆಗಳು  ಘೋಷಣೆ ಕೂಗಿ ಪ್ರತಿಭಟನೆ ನಡೆಸಿವೆ. ‘ಕಾವೇರಿ ನಮ್ಮದು ಎಂದು ಘೋಷಣೆ ಕೂಗುವ ಮೂಲಕ ಸರ್ಕಾರಕ್ಕೆ ದಿಕ್ಕಾರ ಎಂದು ಕೂಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Fri, 29 September 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ