Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ಕರ್ನಾಟಕ ಬಂದ್: ಯಾವುದು ಓಪನ್​, ಯಾವುದು ಕ್ಲೋಸ್​?

ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22) ರಂದು ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿದ್ದು, ಸಿಪಿಎಂ ಕೂಡ ಬೆಂಬಲ ನೀಡಿದೆ.

Karnataka Bandh: ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ಕರ್ನಾಟಕ ಬಂದ್: ಯಾವುದು ಓಪನ್​, ಯಾವುದು ಕ್ಲೋಸ್​?
ಕರ್ನಾಟಕ ಬಂದ್​
Follow us
ಕಿರಣ್ ಹನುಮಂತ್​ ಮಾದಾರ್
| Updated By: ರಮೇಶ್ ಬಿ. ಜವಳಗೇರಾ

Updated on:Jun 22, 2023 | 9:12 AM

ಬೆಂಗಳೂರು: ವಿದ್ಯುತ್ ದರ ಏರಿಕೆ(Electricity price hike)ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22)  ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್ (Karnataka Bandh)​ಗೆ ಕರೆ ಕೊಡಲಾಗಿದ್ದು, ಬೆಂಬಲ ಸೂಚಿಸುವಂತೆ ಕೇಳಲಾಗಿದೆ. ಇದರಿಂದ ಜನಸಾಮಾನ್ಯರಿಗೆ ಸ್ವಲ್ಪ ಮಟ್ಟದಲ್ಲಿ ತೊಂದರೆಯಾಗುವ ನಿರೀಕ್ಷೆಯಿದ್ದು, ಜೊತೆಗೆ ಕರ್ನಾಟಕ ಬಂದ್‌ಗೆ ಸಿಪಿಎಂ ಕೂಡ ಬೆಂಬಲ ನೀಡಿದೆ.

ಕರ್ನಾಟಕದಲ್ಲಿ ವ್ಯಾಪಾರ ಬಂದ್: ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಿಲ್ಲ

ಇನ್ನು ಕರ್ನಾಟಕ ಬಂದ್​ ಕುರಿತು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡಿ, ‘ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್‌ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತವೆ. ಆದರೆ, ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ:Shivamogga: ವಿದ್ಯುತ್ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಸಂಸದ ಬಿವೈ ರಾಘವೇಂದ್ರ ಪೊಲೀಸ್ ವಶಕ್ಕೆ

ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನ ಕಂಡಿಸಿ, ಇಂದು ಎಲ್ಲಾ ವ್ಯಾಪಾರ ಮತ್ತು ಕೈಗಾರಿಕೆಗಳು ಮುಚ್ಚಲು ನಾವು ವಿನಂತಿಸಿದ್ದೇವೆ. ಕಳೆದ ಎಂಟು ದಿನಗಳಿಂದ ನಾವು ಇದರ ಅನಾನುಕೂಲತೆಯ ಗಂಭೀರತೆಯನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಇನ್ನು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳ ಆದರೂ ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಶನಿವಾರ ಹೇಳಿದ್ದರು.

ಇಂದು ಕರ್ನಾಟಕ ಬಂದ್: ಯಾರೆಲ್ಲ ಭಾಗವಹಿಸುತ್ತಿದ್ದಾರೆ

ಇಂದು ರಾಜ್ಯದ ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್‌ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್‌ನಲ್ಲಿ ಪಾಲ್ಗೊಳ್ಳಲಿವೆ. ಆದರೆ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಬಂದ್ ಕರೆಗೆ ಸ್ಪಂದಿಸಿಲ್ಲ.

ಇದನ್ನೂ ಓದಿ:Karnataka Breaking news Live: ವಿದ್ಯುತ್ ದರ ಏರಿಕೆ ಖಂಡಿಸಿ ಇಂದು ಧಾರವಾಡ ಬಂದ್​ಗೆ ಕರೆ

ವಿದ್ಯುತ್ ದರಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಬಂದ್​ಗೆ ಕರೆ; ಏನಿದು ಸಮಸ್ಯೆ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಮೇ 12 ರಂದು ತನ್ನ ಸುಂಕದ ಆದೇಶದಲ್ಲಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳಕ್ಕೆ ಅನುಮೋದಿಸಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸಲು, ಕಾಂಗ್ರೆಸ್ ಸರ್ಕಾರ ಹೊಸ ದರವನ್ನು ಹೆಚ್ಚಿಸಿದೆ ಎಂದು ಬಿಜೆಪಿ ಆರೋಪಿಸಿದ್ದರಿಂದ ಈ ವಿಷಯ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಸಾವಿರಾರು ಜನರು, ಈ ತಿಂಗಳು ವಿಪರೀತ ಬಿಲ್ ಅನ್ನು ಪಡೆದಿದ್ದರು. ಈ ಕುರಿತು ಅದು ಕೆಲವು ದೋಷದಿಂದಾಗಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ತಿಳಿಸಿತ್ತು.

ಗೃಹ ಜ್ಯೋತಿ ಯೋಜನೆಯು 200 ಯೂನಿಟ್‌ಗಳಿಗೆ ಮತ್ತು ಅದಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ವಿದ್ಯುತ್ ಸಚಿವ ಕೆಜೆ ಜಾರ್ಜ್ ಹೇಳಿದ್ದರು. “ಸರಾಸರಿ ವಿದ್ಯುತ್ ಬಳಕೆ ಮತ್ತು ಶೇಕಡ10 ರಷ್ಟು 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಅದಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಪಾವತಿಸಬೇಕಾಗುತ್ತದೆ. ನಿಗದಿಪಡಿಸಿದ ಘಟಕಗಳಿಗಿಂತ ಹೆಚ್ಚು ಬಳಸುವ ಗ್ರಾಹಕರು ಬಳಸಿದ ಹೆಚ್ಚುವರಿ ಘಟಕಗಳಿಗೆ ಪಾವತಿಸಬೇಕಾಗುತ್ತದೆ. 9 ಶೇಕಡ ತೆರಿಗೆಯನ್ನು ಇದರಲ್ಲಿ ಸೇರಿಸಲಾಗುವುದು ಎಂದು ಜಾರ್ಜ್ ಹೇಳಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 am, Thu, 22 June 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​