AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್​​: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ಕ್ರಮ

ದುಬಾರೆ ಆನೆ ಶಿಬಿರದ ದುರಂತದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ, ಪ್ರವಾಸಿಗರ ಸುರಕ್ಷತೆಗಾಗಿ ತೆರೆದ ವಾಹನಗಳ ವನ್ಯಜೀವಿ ಸಫಾರಿಗೆ ಬ್ರೇಕ್ ಹಾಕಿದೆ. ಉಕ್ಕಿನ ಕಂಬಿಗಳಿಂದ ಬಲಪಡಿಸಿದ ಟಫೆಂಡ್ ಗ್ಲಾಸ್ ಹೊಂದಿದ ಮುಚ್ಚಿದ ವಾಹನಗಳನ್ನು ಸಫಾರಿಗೆ ಬಳಸಲು ತೀರ್ಮಾನಿಸಲಾಗಿದ್ದು, ಇದರ ಜೊತೆಗೆ ಕೆಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್​​: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ಕ್ರಮ
ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್Image Credit source: shutterstock.com
ಪ್ರಸನ್ನ ಹೆಗಡೆ
|

Updated on: May 21, 2026 | 6:49 AM

Share

ಬೆಂಗಳೂರು, ಮೇ 21: ಆನೆಗಳ ಕಾದಾಟದ ವೇಳೆ ಕುಶಾಲನಗರದ ದುಬಾರೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟಿರುವ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್​​ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೆರೆದ ವಾಹನಗಳಲ್ಲಿ ನಡೆಸಲಾಗುತ್ತಿದ್ದ ವನ್ಯಜೀವಿ ಸಫಾರಿಗಳಿಗೆ ಬ್ರೇಕ್​​ ಹಾಕಿದೆ. ಇನ್ನುಮುಂದೆ ತೆರೆದ ವಾಹನಗಳನ್ನು ಸಫಾರಿಗೆ ಬಳಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳು ಸೇರಿದಂತೆ ಇತರ ಸಂರಕ್ಷಿತ ಪ್ರದೇಶಗಳಲ್ಲಿ ಈಗಲೂ ತೆರೆದ ಜೀಪ್‌ಗಳಲ್ಲಿ ಸಫಾರಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧಾರದಲ್ಲಿ, ಈ ವಿಷಯವನ್ನು ಕರ್ನಾಟಕದ ಮುಖ್ಯ ವನ್ಯಜೀವಿ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿರೋದಾಗಿಯೂ ಸಚಿವ ಈಶ್ವರ್​​ ಖಂಡ್ರೆ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಸಫಾರಿ ನಿಯಮಗಳಲ್ಲಿ ಕೆಲ ಬದಲಾವಣೆ ಮಾಡಿದ ಅರಣ್ಯ ಇಲಾಖೆ
  • ದುಬಾರೆ ಘಟನೆ ಬೆನ್ನಲ್ಲೇ ತೆರೆದ ವಾಹನಗಳಲ್ಲಿ ಸಫಾರಿಗೆ ಬಿತ್ತು ಬ್ರೇಕ್​​
  • ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ಎಂದ ಸಚಿವ ಈಶ್ವರ್​​ ಖಂಡ್ರೆ

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡುತೆರೆದ ವಾಹನಗಳ ಬದಲು ಉಕ್ಕಿನ ಕಂಬಿಗಳಿಂದ ಬಲಪಡಿಸಿದ ಟಫೆಂಡ್ ಗ್ಲಾಸ್ ಹೊಂದಿದ ಮುಚ್ಚಿದ ವಾಹನಗಳನ್ನು ಸಫಾರಿಗೆ ಬಳಸಲು ತೀರ್ಮಾನಿಸಿದ್ದೇವೆ. ರಾಜ್ಯದ ವಿವಿಧ ಭಾಗಗಳು ಮತ್ತು ವಿದೇಶಗಳಿಂದ ನಮ್ಮ ಸಂರಕ್ಷಿತ ಪ್ರದೇಶಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿರೋದಾಗಿ ಸಚಿವ ಖಂಡ್ರೆ ಹೇಳಿದ್ದಾರೆ. ಎಲ್ಲಾ ಸಫಾರಿ ವಾಹನಗಳಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಕಡ್ಡಾಯವಾಗಿರಬೇಕು ಮತ್ತು ತುರ್ತು ಪರಿಸ್ಥಿತಿಗೆ ಸಫಾರಿ ಕೇಂದ್ರಗಳ ಬಳಿ ಆಂಬುಲೆನ್ಸ್ ವ್ಯವಸ್ಥೆ ಇರಬೇಕು ಎಂದು ನಿರ್ದೇಶನ ನೀಡಲಾಗಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ; ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕಾವೇರಿ ನದಿಗೆ ಸ್ನಾನಕ್ಕೆಂದು ಮಾವುತರು ಕರೆತಂದಿದ್ದರು. ಈ ವೇಳೆ ಕಂಜನ್​​ ಆನೆ ಮಾರ್ತಾಂಡನ ಮೇಲೆ ದಾಳಿ ಮಾಡಿದ್ದು, ಉಭಯ ಆನೆಗಳು ಪರಸ್ಪರ ಕಾದಾಡಿಕೊಂಡಿದ್ದವು. ಇವುಗಳ ನಡುವೆ ಸಿಲುಕಿದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಆ ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಮಾರ್ತಾಂಡ ಆನೆ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ