AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ

ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳನ್ನು ಕಡಿಯಲಿ ಬಿಬಿಎಂಪಿ ಅನುಮತಿ ನೀಡಿದೆ. ಯೋಜನೆಯ ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಆರಂಭಿಸಲಾಗಿದೆ.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 04, 2023 | 9:14 PM

Share

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ (Bengaluru Suburban Rail project) ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (K-RIDE) ಆರಂಭಿಸಿದೆ. ಮೊದಲ ಹಂತದ 2 ಕಾರಿಡಾರ್​​ಗಳು ಬೈಯಪ್ಪನಹಳ್ಳಿ ಹಾಗೂ ಚಿಕ್ಕಬಾಣಾವರ ಮಧ್ಯೆ ನಿರ್ಮಾಣವಾಗಲಿವೆ. ಇದಕ್ಕಾಗಿ 1,500 ಮರಗಳನ್ನು ಕಡಿಯಲು ಅನುಮತಿ ಕೋರಿ ಬಿಬಿಎಂಪಿಗೆ ಕೆಆರ್​ಐಡಿಇ ಮನವಿ ಸಲ್ಲಿಸಿತ್ತು. ಆದರೆ, ಸದ್ಯ ಬಿಬಿಎಂಪಿ 764 ಮರಗಳನ್ನು ಕಡಿಯಲು ಅನುಮತಿ ನೀಡಿದೆ. 56 ಮರಗಳನ್ನು ಸ್ಥಳಾಂತರಗೊಳಿಸುವಂತೆಯೂ ಕೆಆರ್​ಐಡಿಇಗೆ ಬಿಬಿಎಂಪಿ ಸೂಚಿಸಿದೆ. ಪ್ರಸ್ತಾವನೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಈಗಲೂ ಪರಿಶೀಲನೆ ನಡೆಸುತ್ತಿದ್ದಾರೆ.

764 ಮರಗಳನ್ನು ಕಡಿಯಲು ಸದ್ಯ ಅನುಮತಿ ನೀಡಲಾಗಿದೆ. ಆದರೆ, ಈ ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವೇ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಡಿಯಲಾಗುವ ಮರಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಮರ ಕಡಿಯುವ ವಿಚಾರವಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಕ್ಕೆ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎನ್ನಲಾಗಿದೆ.

ಮೊದಲ ಹಂತದ ಎರಡು ಕಾರಿಡಾರ್​ಗಳಿಗಾಗಿ ಶೇ 80ರಷ್ಟು ಭಾರತೀಯ ರೈಲ್ವೆಗೆ ಸೇರಿದ ಭೂಪ್ರದೇಶವನ್ನೇ ಬಳಸಲಾಗುವುದು. ಉಳಿದವುಗಳನ್ನು ಭೂಸ್ವಾಧೀನ ಪ್ರಕ್ರಿಯೆಯ ಮೂಲಕ ಪಡೆಯಲಾಗುವುದು ಎಂದು ಕೆಆರ್​ಐಡಿಇ ತಿಳಿಸಿದೆ.

ಇದನ್ನೂ ಓದಿ: Suburban Railway: ಬೆಂಗಳೂರು ಉಪನಗರ ರೈಲು ಯೋಜನೆಗೆ ಕೊನೆಗೂ ಸಿಕ್ಕಿತು ವೇಗ; 4ನೇ ಕಾರಿಡಾರ್ ಕಾಮಗಾರಿಗೆ ಟೆಂಡರ್

ಹಳಿಗಳ ನಿರ್ಮಾಣಕ್ಕೆ, ನಿಲ್ದಾಣಗಳನ್ನು ನಿರ್ಮಿಸಲು ಮತ್ತು ಇತರ ಮೂಲಸೌಕರ್ಯಗಳಿಗಾಗಿ ಮರಗಳನ್ನು ಕಡಿಯಲಾಗುತ್ತದೆ. ಮೊದಲ ಹಂತದ ಎರಡು ಕಾರಿಡಾರ್​​ಗಳ ಒಟ್ಟು ವ್ಯಾಪ್ತಿ 25.01 ಕಿಲೋ ಮೀಟರ್ ಇರಲಿದೆ. ಈ ಮಾರ್ಗದಲ್ಲಿ 14 ನಿಲ್ದಾಣಗಳು ಬರಲಿವೆ. ಈ ನಿಲ್ದಾಣಗಳ ಪೈಕಿ ಆರು ನಿಲ್ದಾಣಗಳು ಎಲಿವೇಟೆಡ್ ಮತ್ತು ಉಳಿದ 8 ಸಾಮಾನ್ಯ ನಿಲ್ದಾಣಗಳಾಗಿರಲಿವೆ ಎಂದು ಕೆಆರ್​ಐಡಿಇ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ