AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ

ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳನ್ನು ಕಡಿಯಲಿ ಬಿಬಿಎಂಪಿ ಅನುಮತಿ ನೀಡಿದೆ. ಯೋಜನೆಯ ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಆರಂಭಿಸಲಾಗಿದೆ.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 04, 2023 | 9:14 PM

Share

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ (Bengaluru Suburban Rail project) ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (K-RIDE) ಆರಂಭಿಸಿದೆ. ಮೊದಲ ಹಂತದ 2 ಕಾರಿಡಾರ್​​ಗಳು ಬೈಯಪ್ಪನಹಳ್ಳಿ ಹಾಗೂ ಚಿಕ್ಕಬಾಣಾವರ ಮಧ್ಯೆ ನಿರ್ಮಾಣವಾಗಲಿವೆ. ಇದಕ್ಕಾಗಿ 1,500 ಮರಗಳನ್ನು ಕಡಿಯಲು ಅನುಮತಿ ಕೋರಿ ಬಿಬಿಎಂಪಿಗೆ ಕೆಆರ್​ಐಡಿಇ ಮನವಿ ಸಲ್ಲಿಸಿತ್ತು. ಆದರೆ, ಸದ್ಯ ಬಿಬಿಎಂಪಿ 764 ಮರಗಳನ್ನು ಕಡಿಯಲು ಅನುಮತಿ ನೀಡಿದೆ. 56 ಮರಗಳನ್ನು ಸ್ಥಳಾಂತರಗೊಳಿಸುವಂತೆಯೂ ಕೆಆರ್​ಐಡಿಇಗೆ ಬಿಬಿಎಂಪಿ ಸೂಚಿಸಿದೆ. ಪ್ರಸ್ತಾವನೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಈಗಲೂ ಪರಿಶೀಲನೆ ನಡೆಸುತ್ತಿದ್ದಾರೆ.

764 ಮರಗಳನ್ನು ಕಡಿಯಲು ಸದ್ಯ ಅನುಮತಿ ನೀಡಲಾಗಿದೆ. ಆದರೆ, ಈ ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವೇ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಡಿಯಲಾಗುವ ಮರಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಮರ ಕಡಿಯುವ ವಿಚಾರವಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಕ್ಕೆ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎನ್ನಲಾಗಿದೆ.

ಮೊದಲ ಹಂತದ ಎರಡು ಕಾರಿಡಾರ್​ಗಳಿಗಾಗಿ ಶೇ 80ರಷ್ಟು ಭಾರತೀಯ ರೈಲ್ವೆಗೆ ಸೇರಿದ ಭೂಪ್ರದೇಶವನ್ನೇ ಬಳಸಲಾಗುವುದು. ಉಳಿದವುಗಳನ್ನು ಭೂಸ್ವಾಧೀನ ಪ್ರಕ್ರಿಯೆಯ ಮೂಲಕ ಪಡೆಯಲಾಗುವುದು ಎಂದು ಕೆಆರ್​ಐಡಿಇ ತಿಳಿಸಿದೆ.

ಇದನ್ನೂ ಓದಿ: Suburban Railway: ಬೆಂಗಳೂರು ಉಪನಗರ ರೈಲು ಯೋಜನೆಗೆ ಕೊನೆಗೂ ಸಿಕ್ಕಿತು ವೇಗ; 4ನೇ ಕಾರಿಡಾರ್ ಕಾಮಗಾರಿಗೆ ಟೆಂಡರ್

ಹಳಿಗಳ ನಿರ್ಮಾಣಕ್ಕೆ, ನಿಲ್ದಾಣಗಳನ್ನು ನಿರ್ಮಿಸಲು ಮತ್ತು ಇತರ ಮೂಲಸೌಕರ್ಯಗಳಿಗಾಗಿ ಮರಗಳನ್ನು ಕಡಿಯಲಾಗುತ್ತದೆ. ಮೊದಲ ಹಂತದ ಎರಡು ಕಾರಿಡಾರ್​​ಗಳ ಒಟ್ಟು ವ್ಯಾಪ್ತಿ 25.01 ಕಿಲೋ ಮೀಟರ್ ಇರಲಿದೆ. ಈ ಮಾರ್ಗದಲ್ಲಿ 14 ನಿಲ್ದಾಣಗಳು ಬರಲಿವೆ. ಈ ನಿಲ್ದಾಣಗಳ ಪೈಕಿ ಆರು ನಿಲ್ದಾಣಗಳು ಎಲಿವೇಟೆಡ್ ಮತ್ತು ಉಳಿದ 8 ಸಾಮಾನ್ಯ ನಿಲ್ದಾಣಗಳಾಗಿರಲಿವೆ ಎಂದು ಕೆಆರ್​ಐಡಿಇ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ