AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ

ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳನ್ನು ಕಡಿಯಲಿ ಬಿಬಿಎಂಪಿ ಅನುಮತಿ ನೀಡಿದೆ. ಯೋಜನೆಯ ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಆರಂಭಿಸಲಾಗಿದೆ.

Bengaluru Suburban Rail project: ಬೆಂಗಳೂರು ಉಪನಗರ ರೈಲು ಯೋಜನೆಗಾಗಿ 764 ಮರಗಳಿಗೆ ಕೊಡಲಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 04, 2023 | 9:14 PM

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ (Bengaluru Suburban Rail project) ಮೊದಲ ಹಂತದ 2 ಕಾರಿಡಾರ್​​ಗಳ ಕಾಮಗಾರಿಯನ್ನು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (K-RIDE) ಆರಂಭಿಸಿದೆ. ಮೊದಲ ಹಂತದ 2 ಕಾರಿಡಾರ್​​ಗಳು ಬೈಯಪ್ಪನಹಳ್ಳಿ ಹಾಗೂ ಚಿಕ್ಕಬಾಣಾವರ ಮಧ್ಯೆ ನಿರ್ಮಾಣವಾಗಲಿವೆ. ಇದಕ್ಕಾಗಿ 1,500 ಮರಗಳನ್ನು ಕಡಿಯಲು ಅನುಮತಿ ಕೋರಿ ಬಿಬಿಎಂಪಿಗೆ ಕೆಆರ್​ಐಡಿಇ ಮನವಿ ಸಲ್ಲಿಸಿತ್ತು. ಆದರೆ, ಸದ್ಯ ಬಿಬಿಎಂಪಿ 764 ಮರಗಳನ್ನು ಕಡಿಯಲು ಅನುಮತಿ ನೀಡಿದೆ. 56 ಮರಗಳನ್ನು ಸ್ಥಳಾಂತರಗೊಳಿಸುವಂತೆಯೂ ಕೆಆರ್​ಐಡಿಇಗೆ ಬಿಬಿಎಂಪಿ ಸೂಚಿಸಿದೆ. ಪ್ರಸ್ತಾವನೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಈಗಲೂ ಪರಿಶೀಲನೆ ನಡೆಸುತ್ತಿದ್ದಾರೆ.

764 ಮರಗಳನ್ನು ಕಡಿಯಲು ಸದ್ಯ ಅನುಮತಿ ನೀಡಲಾಗಿದೆ. ಆದರೆ, ಈ ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲು ಸಾಧ್ಯವೇ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಡಿಯಲಾಗುವ ಮರಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಮರ ಕಡಿಯುವ ವಿಚಾರವಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಕ್ಕೆ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎನ್ನಲಾಗಿದೆ.

ಮೊದಲ ಹಂತದ ಎರಡು ಕಾರಿಡಾರ್​ಗಳಿಗಾಗಿ ಶೇ 80ರಷ್ಟು ಭಾರತೀಯ ರೈಲ್ವೆಗೆ ಸೇರಿದ ಭೂಪ್ರದೇಶವನ್ನೇ ಬಳಸಲಾಗುವುದು. ಉಳಿದವುಗಳನ್ನು ಭೂಸ್ವಾಧೀನ ಪ್ರಕ್ರಿಯೆಯ ಮೂಲಕ ಪಡೆಯಲಾಗುವುದು ಎಂದು ಕೆಆರ್​ಐಡಿಇ ತಿಳಿಸಿದೆ.

ಇದನ್ನೂ ಓದಿ: Suburban Railway: ಬೆಂಗಳೂರು ಉಪನಗರ ರೈಲು ಯೋಜನೆಗೆ ಕೊನೆಗೂ ಸಿಕ್ಕಿತು ವೇಗ; 4ನೇ ಕಾರಿಡಾರ್ ಕಾಮಗಾರಿಗೆ ಟೆಂಡರ್

ಹಳಿಗಳ ನಿರ್ಮಾಣಕ್ಕೆ, ನಿಲ್ದಾಣಗಳನ್ನು ನಿರ್ಮಿಸಲು ಮತ್ತು ಇತರ ಮೂಲಸೌಕರ್ಯಗಳಿಗಾಗಿ ಮರಗಳನ್ನು ಕಡಿಯಲಾಗುತ್ತದೆ. ಮೊದಲ ಹಂತದ ಎರಡು ಕಾರಿಡಾರ್​​ಗಳ ಒಟ್ಟು ವ್ಯಾಪ್ತಿ 25.01 ಕಿಲೋ ಮೀಟರ್ ಇರಲಿದೆ. ಈ ಮಾರ್ಗದಲ್ಲಿ 14 ನಿಲ್ದಾಣಗಳು ಬರಲಿವೆ. ಈ ನಿಲ್ದಾಣಗಳ ಪೈಕಿ ಆರು ನಿಲ್ದಾಣಗಳು ಎಲಿವೇಟೆಡ್ ಮತ್ತು ಉಳಿದ 8 ಸಾಮಾನ್ಯ ನಿಲ್ದಾಣಗಳಾಗಿರಲಿವೆ ಎಂದು ಕೆಆರ್​ಐಡಿಇ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ